Kundagol: ಆರೇ ತಿಂಗಳಲ್ಲಿ ಕಿತ್ತುಹೋದ ರಸ್ತೆ


Team Udayavani, Nov 7, 2023, 2:08 PM IST

Kundagol: ಆರೇ ತಿಂಗಳಲ್ಲಿ ಕಿತ್ತುಹೋದ ರಸ್ತೆ

ಕುಂದಗೋಳ: ಸರಕಾರಿ ಕೆಲಸ ದೇವರ ಕೆಲಸ ಎಂದು ವಿಧಾನಸೌಧ ಮುಂಭಾಗದಲ್ಲಿ ಹಾಕಲಾಗಿದೆ. ಆದರೆ ತಾಲೂಕಿನಲ್ಲಿ ಈ ಮಾತು ಅಕ್ಷರ ಸಹ ವಿರುದ್ಧವಾಗಿದ್ದು ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಕಾಮಗಾರಿ ರಸ್ತೆಗೆ 7.6 ಕೋಟಿ ರೂ. ಖರ್ಚು ಮಾಡಿದರೂ ಕೇವಲ 6-7 ತಿಂಗಳಲ್ಲಿಯೇ ರಸ್ತೆ ಹಾಳಾಗಿ ತನ್ನ ಮೊದಲಿನ ಸ್ವರೂಪದಲ್ಲಿ ಕಾಣತೊಡಗಿದೆ.

ತಾಲೂಕು ಹಿಂದುಳಿದ ತಾಲೂಕು ಎಂದು ಹಣೆಪಟ್ಟಿ ಇದ್ದರೂ ಇಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುವುದೇ ಅಪರೂಪ.
ತಾಲೂಕಿನಲ್ಲಿ ರಸ್ತೆ ಮೇಲೆ ಸಂಚರಿಸುವುದೆಂದರೆ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಸ್ಥಿತಿ ನಿರ್ಮಾಣಗೊಂಡಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಲಿವಾಳದಿಂದ ಕಮಡೊಳ್ಳಿ/ಹಂಚಿನಾಳ ರಸ್ತೆಗೆ ಕೂಡುವ ಕೂಬಿಹಾಳ ರಸ್ತೆ ನಿರ್ಮಾಣಕ್ಕೆ
ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯ 3ನೇ ಹಂತದ ಕಾಮಗಾರಿಯಲ್ಲಿ 7 ಕಿಮೀ ರಸ್ತೆ ಅಭಿವೃದ್ಧಿಗೆ ಅನುದಾನ
ಬಿಡುಗಡೆಗೊಳಿಸಲಾಗಿತ್ತು. ಗುತ್ತಿಗೆದಾರರು ಸಹ ಕಾಮಗಾರಿ ಪೂರ್ಣಗೊಳಿಸಿ ಕೇವಲ 6 ತಿಂಗಳು ಕಳೆಯುವುದರೊಳಗೆ ರಸ್ತೆಗೆ ಹಾಕಿರುವ ಡಾಂಬರ್‌ ಕಿತ್ತುಹೋಗಿ ಕಲ್ಲುಗಳು ರಸ್ತೆ ತುಂಬ ಕಾಣತೊಡಗಿವೆ. ಈ ರಸ್ತೆ ನೋಡಿದರೆ ಹಲವು ವರ್ಷಗಳ ಹಿಂದೆಯೇ ರಸ್ತೆ ನಿರ್ಮಿಸಲಾಗಿದೆ ಎಂದು ಭಾಸವಾಗುತ್ತದೆ.

ಇದೀಗ ಈ ರಸ್ತೆಯ ಮೇಲೆ ದ್ವಿಚಕ್ರ ವಾಹನ ಸಹ ಸಂಚರಿಸದಂತಾಗಿದ್ದು ಸ್ವಲ್ಪ ಯಾಮಾರಿದರೂ ಕಲ್ಲುಗಳು ಹಾಗೂ ಗುಂಡಿ ತಪ್ಪಿಸಲು ಹೋಗಿ ಬೀಳುವ ಸ್ಥಿತಿ ನಿರ್ಮಾಣಗೊಂಡಿದೆ. ತಾಲೂಕಿಗೆ ಅಭಿವೃದ್ಧಿ ಯೋಜನೆಗಳು ಬರುವುದೇ ಅಪರೂಪ. ಬಂದ
ಅನುದಾನವಾದರೂ ಸಮರ್ಪಕವಾಗಿ ಅನುಷ್ಠಾನಗೊಂಡು ಉತ್ತಮ ರಸ್ತೆ ನಿರ್ಮಿಸಿ ಸಂಚಾರಕ್ಕೆ ನೀಡಬೇಕಾದ ಇಲಾಖೆ
ಕಣ್ಣುಮುಚ್ಚಿ ಕುಳಿತಿರುವುದರಿಂದ ರಸ್ತೆ ಈಗ ಸಂಪೂರ್ಣ ಹಾಳಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗ್ರಾಮ ಸಡಕ್‌ ಯೋಜನೆ ಗುತ್ತಿಗೆದಾರರ ಅಸಮರ್ಪಕ ಕಾಮಗಾರಿಯಿಂದ ಹಳ್ಳ ಹಿಡಿಯುತ್ತಿದೆ. ಈಗಲಾದರೂ ಈ ಭಾಗದ ಸಂಸದರು, ಶಾಸಕರು,ಅಧಿ ಕಾರಿಗಳು ಸರ್ಕಾರದ ಹಣ ಪೋಲಾಗದಂತೆ ಕ್ರಮ ಕೈಗೊಳ್ಳಬೇಕಿದೆ.

ಕೆಲವೇ ತಿಂಗಳು ಹಿಂದೆ ನಿರ್ಮಿಸಿದ್ದ ರಸ್ತೆ ಸಂಪೂರ್ಣ ಹಾಳಾಗಿದ್ದು, ಗುತ್ತಿಗೆದಾರರಿಗೆ ರಸ್ತೆ ದುರಸ್ತಿ ಮಾಡಲು ಈಗಾಗಲೇ ನೋಟಿಸ್‌ ಜಾರಿ ಮಾಡಲಾಗಿದೆ.
ಎಂ.ಎಚ್‌.ದಿವಟರ
ಪಿಎಂಜಿಎಸ್‌ವೈ ಅಧಿಕಾರಿ

*ಶೀತಲ ಎಸ್‌.ಎಂ.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.