Parashurama Theme Park: ಮಠಾಧೀಶರ ಬೆಂಬಲದೊಂದಿಗೆ ಹೋರಾಟ: ಮಿಥುನ್ ರೈ
Team Udayavani, Nov 7, 2023, 11:27 PM IST
ಮಂಗಳೂರು: ಕಾರ್ಕಳ ಬೈಲೂರಿನ ಗೋಮಾಳ ಜಾಗದಲ್ಲಿ ಅನಧಿಕೃತವಾಗಿ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಿ ಕಂಚಿನ ಬದಲು ಫೈಬರ್ನಿಂದ ಪರಶುರಾಮನ ಪ್ರತಿಮೆ ಸ್ಥಾಪಿಸಲಾಗಿದೆ. ಇದು ಸನಾತನ ಹಿಂದೂ
ಧರ್ಮ ಮತ್ತು ಪರಶುರಾಮ ದೇವರಿಗೆ ಮಾಡಿದ ಅನ್ಯಾಯವಾಗಿದ್ದು ಮಠಾಧೀಶರ ಬೆಂಬಲದೊಂದಿಗೆ ಹೋರಾಟ
ಮುಂದುವರಿಸಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿದ್ದಾರೆ.
ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿ, ಕಂಚಿನ ಪ್ರತಿಮೆ ಎಂದು ಹೇಳಿ ಫೈಬರ್ ಪ್ರತಿಮೆ ಮಾಡಿ ನಂಬಿಕೆಗೆ ದ್ರೋಹವೆಸಗಲಾಗಿದೆ. ಕಂದಾಯ ಇಲಾಖೆಯ ಆಕ್ಷೇಪದ ನಡುವೆಯೂ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಗೋಮಾಳ ಜಾಗದಲ್ಲಿ ಅನಧಿಕೃತವಾಗಿ ಪಾರ್ಕ್ ನಿರ್ಮಿಸಲಾಗಿದೆ ಎಂದರು.
ಈ ಬಗ್ಗೆ ಶುಕ್ರವಾರದಿಂದಲೇ ಎಲ್ಲ ಮಠಾಧೀಶರ ಬಳಿಗೆ ತೆರಳಿ ಬೆಂಬ ಲಿಸಲು ವಿನಂತಿಸುವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರು ತನಿಖೆಗೆ ಸೂಚನೆ ನೀಡಿದ್ದು ಲೋಕಾಯುಕ್ತಕ್ಕೂ ದೂರು ಸಲ್ಲಿಸ ಲಾಗುವುದು ಎಂದು ಹೇಳಿದರು.
ಸುನಿಲ್ ಕುಮಾರ್ ಅಮಾನತುಗೊಳಿಸಿ
ಸುನಿಲ್ ಕುಮಾರ್ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿರುವು ದಕ್ಕೆ ನಕಲಿ ಪ್ರತಿಮೆಯೇ ಉದಾಹರಣೆ. ಹೀಗಾಗಿ ಸುನಿಲ್ ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು. ಇದರಲ್ಲಿ ಭಾಗಿಯಾದ ಅಧಿಕಾರಿಗಳನ್ನು ಕೂಡ ಅಮಾನತುಗೊಳಿಸಬೇಕು ಎಂದರು.
ನಾಯಕರಾದ ಶುಭೋದ್ ರಾವ್, ಪ್ರವೀಣ್ಚಂದ್ರ ಆಳ್ವ, ಎ.ಸಿ. ವಿನಯರಾಜ್, ಅನಿಲ್ ಪೂಜಾರಿ, ಪ್ರಕಾಶ್ ಸಾಲಿಯಾನ್, ಮೋಹನ್ ಕೋಟ್ಯಾನ್, ವಿಶ್ವಾಸ್ದಾಸ್, ಅಪ್ಪಿ, ವಿಕಾಸ್ ಶೆಟ್ಟಿ, ದುರ್ಗಾ ಪ್ರಸಾದ್, ಶಾಂತಲಾ ಗಟ್ಟಿ, ರಾಕೇಶ್ ದೇವಾಡಿಗ, ರಮೇಶ್ ಕಾಂಚನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.