Udupi ಅಟ್ಲಾಂಟಾದಲ್ಲಿ ಶ್ರೀಕೃಷ್ಣ ಮಂದಿರಕ್ಕೆ ಭೂಮಿಪೂಜೆ
Team Udayavani, Nov 7, 2023, 11:30 PM IST
ಉಡುಪಿ: ವಿಶ್ವಾದ್ಯಂತ ಶ್ರೀ ಕೃಷ್ಣ ಭಕ್ತಿಪ್ರಸಾರ ದೀಕ್ಷೆಯನ್ನು ಹೊಂದಿರುವ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅಮೆರಿಕಾದ ಅಟ್ಲಾಂಟಾ ನಗರದಲ್ಲಿ ಭಕ್ತ ಜನರ ಸಹಕಾರದೊಂದಿಗೆ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕಾಗಿ ಖರೀದಿಸಿರುವ 6 ಎಕ್ರೆ ಜಾಗದಲ್ಲಿ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.
ಇಲ್ಲಿ ಶ್ರೀಕೃಷ್ಣನ ಬೃಹತ್ ಮಂದಿರ ನಿರ್ಮಾಣವಾಗಲಿದೆ. ಶ್ರೀಪಾದರು ಮುಂದಿನ ಶ್ರೀಕೃಷ್ಣನ ಪರ್ಯಾಯ ಮುಗಿಸಿ ಮರಳಿ ಬರುವಷ್ಟರಲ್ಲಿ ಶ್ರೀಕೃಷ್ಣ ಪ್ರತಿಷ್ಠೆಯ ಮೂಲಕ ಮಂದಿರದ ವಿದ್ಯುಕ್ತ ಉದ್ಘಾಟನೆಯ ಸಂಕಲ್ಪವನ್ನು ಇಲ್ಲಿನ ಭಕ್ತರು ಇರಿಸಿಕೊಂಡಿದ್ದಾರೆ.
ಸಂಕಲ್ಪಿತ ಶ್ರೀಕೃಷ್ಣ ಮಂದಿರದ ಗರ್ಭಗುಡಿಯ ಕೆಳಗಡೆ 700 ಶ್ಲೋಕಗಳನ್ನು ಕೆತ್ತಿಸಿದ ಇಟ್ಟಿಗೆಗಳನ್ನು ಭಕ್ತರ ಹೆಸರಿನಲ್ಲಿ ಇರಿಸಲಾಗುವುದು. ತನ್ಮೂಲಕ ಶ್ರೀಪಾದರ ಕೋಟಿಗೀತಾ ಲೇಖನ ಯೋಜನೆಯ ಸ್ಮಾರಕವಾಗಿ ಅಮೆರಿಕಾದಲ್ಲಿ ಈ ಮಂದಿರ ಮೂಡಿ ಬರಲಿದೆ.
ಶ್ರೀಪಾದರು ಅಮೆರಿಕಾದಲ್ಲಿ ಸ್ಥಾಪಿಸಿರುವ 11 ಮಠಗಳಲ್ಲಿ ಇದು ಆರನೇ ಶಾಖಾ ಮಠವಾಗಿದ್ದು ಇದೀಗ ಸಣ್ಣ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಭೂಮಿ ಪೂಜೆಯ ವೈದಿಕ ಕಾರ್ಯಕ್ರಮಗಳನ್ನು ಉಡುಪಿಯ ಹೆರ್ಗ ವೇದವ್ಯಾಸ ಭಟ್ ನೆರವೇರಿಸಿದರು.
ಮಠದ ಪ್ರಧಾನ ಅರ್ಚಕ ಜಯ ಪ್ರಸಾದ್ ಅಮ್ಮಣ್ಣಾಯ ಮುಂದಾಳತ್ವದಲ್ಲಿ ನಡೆಯುತ್ತಿರುವ ಈ ಯೋಜನೆಯ ವಿವರವನ್ನು ಪ್ರಧಾನ ಕಾರ್ಯದರ್ಶಿ ಪ್ರಸನ್ನಾಚಾರ್ಯ ನೀಡಿದರು.
ವಿ| ಕೇಶವ ರಾವ್ ತಡಿಪಾತ್ರಿ, ಬಾಲಕೃಷ್ಣ ಭಟ್, ಹರೀಶ್ ಭಟ್, ಅಜಯ್, ಮುರಳಿ, ಶ್ರೀಕಾಂತ್ ಹಾಗೂ ಭಕ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.