Government 137 ಶಿಶುಪಾಲನ ಕೇಂದ್ರಗಳು ರದ್ದು


Team Udayavani, Nov 8, 2023, 12:44 AM IST

Government 137 ಶಿಶುಪಾಲನ ಕೇಂದ್ರಗಳು ರದ್ದು

ಬೆಂಗಳೂರು: ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರ 6 ವರ್ಷದೊಳಗಿನ ಮಕ್ಕಳ ಪೋಷಣೆಗೆಂದು 2020-21ರಲ್ಲಿ ಹಿಂದಿನ ಸರಕಾರ ಸ್ಥಾಪಿಸಿದ್ದ 137 ಶಿಶುಪಾಲನ ಕೇಂದ್ರಗಳನ್ನು ರದ್ದುಪಡಿಸಿ ಸರಕಾರ ಆದೇಶಿಸಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ನರೇಗಾ) ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳಿಗಾಗಿ ರಾಜ್ಯದ 4 ಸಾವಿರ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಕೂಸಿನ ಮನೆ ನಿರ್ಮಿಸಲು ಮುಂದಾಗಿದೆ.

ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿಗಳು ನಡೆಯುವ ಸ್ಥಳದಲ್ಲಿ ಶಿಶುಪಾಲನ ಕೇಂದ್ರಗಳನ್ನು ಸ್ಥಾಪಿಸಿ, 6 ವರ್ಷದೊಳಗಿನ ಮಕ್ಕಳನ್ನು ಆರೈಕೆ ಮಾಡಲು 2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಕಾರ್ಮಿಕ ಇಲಾಖೆಯಿಂದ ಹಣ ವ್ಯಯಿಸಿ ಸಂಚಾರಿ ಶಿಶುಪಾಲನ ಕೇಂದ್ರಗಳೂ ಸೇರಿದಂತೆ ಒಟ್ಟು 137 ಶಿಶುಪಾಲನ ಕೇಂದ್ರಗಳನ್ನು ತೆರೆದಿತ್ತು. ಈ ಮೂಲಕ ಮಗುವಿನ ಆರೈಕೆಯ ಹೊರೆಯನ್ನು ಕಡಿಮೆ ಮಾಡಿ, ತಾಯಿಗೆ ಉದ್ಯೋಗದಲ್ಲಿ ತೊಡಗುವ ಅವಕಾಶ ನೀಡಲಾಗಿತ್ತು. ಆದರೀಗ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಿಇಒ ನೀಡಿರುವ ವರದಿ ಆಧರಿಸಿ ಸಂಚಾರಿ ಶಿಶುಪಾಲನ ಕೇಂದ್ರಗಳೂ ಸೇರಿ 137 ಶಿಶುಪಾಲನ ಕೇಂದ್ರಗಳನ್ನೂ ರದ್ದುಪಡಿಸಿ ಕಾರ್ಮಿಕ ಇಲಾಖೆ ಆದೇಶಿಸಿದೆ.

4 ಸಾವಿರ ಕೂಸಿನ ಮನೆ
ಆರಂಭಿಸಲು ಸರಕಾರದಿಂದ ಕ್ರಮ
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರಾಜ್ಯದ 4 ಸಾವಿರ ಗ್ರಾಪಂ ವ್ಯಾಪ್ತಿಗಳಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗಾಗಿ ಕೂಸಿನ ಮನೆ ತೆರೆಯಲು ಘೋಷಿಸಿದ್ದ ಸರಕಾರ, ಅಗತ್ಯ ಕಟ್ಟಡ, ಇತರೆ ಮೂಲಸೌಕರ್ಯದ ವೆಚ್ಚವನ್ನು ಆಯಾ ಗ್ರಾಪಂಗಳೇ ತಮ್ಮ ಸಂಪನ್ಮೂಲದಲ್ಲಿ ಹೊಂದಿಸಬೇಕೆಂದು ಸೂಚಿಸಿದೆ. ಕಳೆದ ತಿಂಗಳಷ್ಟೇ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಸಿನ ಮನೆಯ ಲಾಂಛನ ಬಿಡುಗಡೆ ಮಾಡಿದ್ದರು.

ರಾಜ್ಯದಲ್ಲಿ ನರೇಗಾ ಕಾರ್ಡ್‌ ಹೊಂದಿದ ಸುಮಾರು 40 ಸಾವಿರ ಮಹಿಳಾ ಕಾರ್ಮಿಕರಿದ್ದು, ಉದ್ಯೋಗದಲ್ಲಿ ಭಾಗಿಯಾಗಲು ಅನುಕೂಲ ಆಗುವಂತೆ ಅವರ 3 ವರ್ಷದೊಳಗಿನ ಮಕ್ಕಳನ್ನು ಈ ಕೂಸಿನ ಮನೆಗಳಲ್ಲಿ ಆರೈಕೆ ಮಾಡಲಾಗುತ್ತದೆ. ಪ್ರತೀ ಕೇಂದ್ರದಲ್ಲಿ 25 ಶಿಶುವಿಗೆ ಅವಕಾಶ ನೀಡಿದ್ದು, 10 ಮಂದಿ ಆರೈಕೆದಾರರೂ ಇರಲಿದ್ದಾರೆ. ದಿಲ್ಲಿಯ ಮೊಬೈಲ್‌ ಕ್ರಶ್‌ ಸಂಸ್ಥೆಯ ಸಹಯೋಗದೊಂದಿಗೆ ಆರೈಕೆದಾರರಿಗೆ ತರಬೇತಿ ಸಹ ಕೊಡಲಾಗುತ್ತದೆ.

ಶಿಶುಪಾಲನ ಕೇಂದ್ರ ರದ್ದತಿಗೆ ಮೂರು ಕಾರಣ
-ಬಹುತೇಕ ಶಿಶುಪಾಲನ ಕೇಂದ್ರಗಳಲ್ಲಿ ಕನಿಷ್ಠ ಸಂಖ್ಯೆಯ ಮಕ್ಕಳು ಲಭ್ಯವಿಲ್ಲದೆ ಇರುವುದು.
– ಕೆಲವು ಕೇಂದ್ರಗಳಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳನ್ನು ಹೊರತುಪಡಿಸಿ ಬೇರೆ ಮಕ್ಕಳಿರದಿರುವುದು.
– ಶಿಶುಪಾಲನ ಕೇಂದ್ರಗಳನ್ನು ನಿರ್ವಹಣೆ ಮಾಡಲು ಆವಶ್ಯಕ ಸಂಖ್ಯೆಯ ಸೂಕ್ತ ತರಬೇತಿ ಹೊಂದಿದ ಅಧಿಕಾರಿಗಳ ಕೊರತೆ.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.