JDS ಹಾಸನದಲ್ಲಿ ಜೆಡಿಎಸ್ ಒಗ್ಗಟ್ಟಿನ ಮಂತ್ರ: 19 ಶಾಸಕರ ಜತೆ ಎಚ್ಡಿಕೆ ಬಿರುಸಿನ ಸಭೆ
Team Udayavani, Nov 8, 2023, 1:16 AM IST
ಹಾಸನ: ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಸೇರ್ಪಡೆಯಾಗಲು ಮುಂದಾಗಿ ದ್ದಾರೆ ಎಂಬ ವರದಿಗಳ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ನ 19 ಶಾಸಕರು ಹಾಸನದಲ್ಲಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನಾಂಬೆ ದರ್ಶನ ಪಡೆದ ದಿನ ಮಂಗಳವಾರವೇ ಕುಮಾರಸ್ವಾಮಿ ಅವರು ಎಲ್ಲ ಶಾಸಕರೊಂದಿಗೆ ಹಾಸನಾಂಬಾ ದೇಗುಲಕ್ಕೆ ಭೇಟಿ ನೀಡಿ, ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ. “ನಮ್ಮ ಶಾಸಕರಿಗೆ ಇಲ್ಲಸಲ್ಲದ ಆಮಿಷ ವೊಡ್ಡಿ ಅವರ ಬಗ್ಗೆ ರಾಜ್ಯದ ಜನ ರಲ್ಲಿ ಅನುಮಾನ ಬರುವಂತೆ ಮಾಡುವ ಪ್ರಯತ್ನ ನಡೆದಿದೆ. ಈ ಎಲ್ಲ ಊಹಾ ಪೋಹ ಗಳಿಗೆ ತೆರೆ ಎಳೆ ಯುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ದ್ದೇವೆ ಎಂಬ ಸಂದೇಶ ರವಾ ನಿ ಸಲು ಉದ್ದೇಶಿಸಿದ್ದೇವೆ’ ಎಂದು ಕುಮಾರಸ್ವಾಮಿ ಹೇಳಿದರು.
ಅನಂತರ ಹಾಸನದಲ್ಲಿ ವಾಸ್ತವ್ಯ ಹೂಡಿ, ಸಮಾಲೋಚನೆ ಸಭೆ ನಡೆಸಿ ದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ, ಬರಗಾಲ ಪರಿಸ್ಥಿತಿ, ಕಾಂಗ್ರೆಸ್ ನಾಯಕರು ನಮ್ಮ ಶಾಸಕರನ್ನು ಸೆಳೆಯಲು ನಡೆ ಸು ತ್ತಿರುವ ಪ್ರಯತ್ನದಿಂದ ಕಂಗೆಟ್ಟಿ ರುವ ಮುಖಂಡರಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಹಾಸನದಲ್ಲಿ ಸಭೆ ನಡೆಸ ಲಾಗಿದೆ ಎಂದರು.
ತಂದೆಯವರನ್ನು ಬೆಳೆಸಿದ ಮಣ್ಣು
ಹಾಸನ ನೆಲದ ಮಣ್ಣು ನಮ್ಮ ತಂದೆ ಯವರನ್ನು ದಿಲ್ಲಿಯವರೆಗೂ ಬೆಳೆಸಿದೆ ಎಂದು ಕುಮಾರಸ್ವಾಮಿ ಹೇಳಿದರು. ಅದರಿಂದಲೇ ನಾವೆಲ್ಲರೂ ಒಂದಾಗಿದ್ದೇವೆ. ನಮ್ಮನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಪ್ರತಿಸ್ಪರ್ಧಿಗಳಿಗೆ ಮನವರಿಕೆ ಮಾಡ ಲಾಗುವುದು ಎಂದರು
ಸಂಕಷ್ಟ ಪರಿಹಾರಕ್ಕೆ ಪ್ರಾರ್ಥನೆ
ನಾಡಿನ ಜನರ ಸಮಸ್ಯೆ ನಿವಾರಣೆ ಯಾಗಲಿ ಎಂದು ಹಾಸನಾಂಬೆ ದೇವಿ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ. ರೈತರು, ನಾಡಿನ ಜನರು ಆತ್ಮ ವಿಶ್ವಾಸದಿಂದ ಬದುಕಬೇಕು. ನಮ್ಮಲ್ಲಿ ಸಂಪತ್ತಿನ ಕೊರತೆ ಇಲ್ಲ. ಆದರೆ ಅದು ಸಮಾನ ಹಂಚಿಕೆಯಾಗಿ, ಸದ್ಬಳಕೆ ಆಗಬೇಕು. ಈ ಹಿನ್ನೆಲೆಯಲ್ಲಿ ಆಳು ವವ ರಿಗೆ ಜ್ಞಾನೋದಯ ಮಾಡಿಸು. ಎಲ್ಲರ ಬದುಕು ಹಸನಾಗಲಿ ಎಂದು ದೇವರಲ್ಲಿ ಬೇಡಿದ್ದೇನೆ ಎಂದರು.
ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ: ಸಿದ್ದರಾಮಯ್ಯ
ಒಂದೆಡೆ ತಮ್ಮ ಪಕ್ಷದ ಶಾಸಕ ರನ್ನು ಹಿಡಿದಿಟ್ಟುಕೊಳ್ಳಲು ಹಾಸನ ದಲ್ಲಿ ಜೆಡಿಎಸ್ ಕಸ ರತ್ತು ನಡೆಸುತ್ತಿರುವ ಬೆನ್ನಲ್ಲೇ, ಹಾಸನ ದಲ್ಲಿಯೇ ಮಾತ ನಾಡಿದ ಮುಖ್ಯಮಂತ್ರಿ ಸಿದ್ದ ರಾಮಯ್ಯ, “ಕಾಂಗ್ರೆಸ್ನ ಸಿದ್ಧಾಂತ, ನಾಯಕತ್ವ, ನಮ್ಮ ಪಕ್ಷದ ವ್ಯವಸ್ಥೆಯನ್ನು ಒಪ್ಪಿ ಅನುಸರಿಸಲು ಬಯಸುವವರಿಗೆ ಸ್ವಾಗತ’ ಎಂದು ಹೇಳಿದ್ದಾರೆ. ಜೆಡಿಎಸ್ ಸಹಿತ ಯಾವುದೇ ಪಕ್ಷದ ಮುಖಂಡರಿಗೆ ನಾನು ಆಹ್ವಾನ ನೀಡಿಲ್ಲ . ಆದರೆ ನಮ್ಮನ್ನು ಒಪ್ಪಿಕೊಂಡು ಬರು ವವ ರಿಗೆ ಸ್ವಾಗತ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.