FDA ಪರೀಕ್ಷಾ ಅಕ್ರಮ ರೂವಾರಿ ಪಾಟೀಲ ಶೀಘ್ರ ಶರಣಾಗತಿ?
Team Udayavani, Nov 8, 2023, 1:30 AM IST
ಕಲಬುರಗಿ: ಈ ಹಿಂದಿನ ಪಿಎಸ್ಐ ಪ್ರಕರಣ, ಈಗಿನ ಎಫ್ಡಿಎ ಪರೀಕ್ಷಾ ಅಕ್ರಮದ ರೂವಾರಿ ಆರ್.ಡಿ. ಪಾಟೀಲ (ರುದ್ರಗೌಡ ಪಾಟೀಲ) ನ. 8, ನ. 9ರಂದು ಪೊಲೀಸರ ಎದುರು ಶರಣಾಗುವ ಸಾಧ್ಯತೆಗಳಿವೆ.
ಪಾಟೀಲ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಅವುಗಳಿಗೆ ಸಂಬಂಧಿಸಿ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದ್ದರೂ ಅದು ವಜಾಗೊಂಡಿದೆ. ಹೀಗಾಗಿ ಆತ ಪೊಲೀಸರಿಗೆ ಶರಣಾಗದೆ ವಿಧಿ ಇಲ್ಲ ಎನ್ನಲಾಗಿದೆ.
ಆರ್.ಡಿ. ಪಾಟೀಲ ಪರವಾಗಿ ಹಿರಿಯ ವಕೀಲ ಶ್ಯಾಮಸುಂದರ್, ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕ ಪಿ. ನರಸಿಂಹುಲು ವಾದ ಮಂಡಿಸಿದ್ದರು. ಈ ಮಧ್ಯೆ ಆರ್.ಡಿ. ಪಾಟೀಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಅಫಜಲಪುರ, ಕಲಬುರಗಿ ನಗರದಲ್ಲಿ ಹರಿದಾಡಿದ್ದರೂ ಅದನ್ನು ಪೊಲೀಸರು ನಿರಾಕರಿಸಿದ್ದಾರೆ.
ನಗರದಲ್ಲಿಯೇ ಇದ್ದ
ಕಲಬುರಗಿ ನಗರದಲ್ಲಿಯೇ ಆರ್.ಡಿ. ಪಾಟೀಲ ಇದ್ದರೂ ಪೊಲೀಸರಿಗೆ ಹೇಗೆ ಸಿಗಲಿಲ್ಲ ಎನ್ನುವುದು ಈಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ನ್ಯಾಯಾಲಯದಲ್ಲಿ ಇದೇ ಕಾರಣಕ್ಕಾಗಿಯೇ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಾಗಿ 11 ದಿನಗಳು ಕಳೆದಿವೆ. ಆತ ನಗರದ ಅಪಾರ್ಟಮೆಂಟ್ವೊಂದರಲ್ಲಿ ಮನೆ ಬಾಡಿಗೆಗೆ ಪಡೆದು ಅಲ್ಲಿಯೇ ವಾಸವಾಗಿದ್ದ ಎನ್ನುವ ವಿಷಯ ಮಂಗಳವಾರ ಬಯಲಾಗುತ್ತಿದ್ದಂತೆ ಪೊಲೀಸರು ಇನ್ನಷ್ಟು ಚುರುಕಾಗಿದ್ದಾರೆ.
ಸಿಸಿ ಕೆಮರಾ ದೃಶ್ಯದಿಂದ ಬಯಲು
ಪಾಟೀಲ ಅಪಾರ್ಟಮೆಂಟ್ನಲ್ಲಿ ಇರುವ ವಿಚಾರ ಸೋಮವಾರ ಖಾತ್ರಿ ಮಾಡಿಕೊಂಡ ಪೊಲೀಸರು ಅಲ್ಲಿಗೆ ಹೋಗುವುದರೊಳಗೆ ಆತ ತಡೆಗೋಡೆ ಹಾರಿ ಓಡಿರುವ ಚಿತ್ರಗಳು ಪಕ್ಕದಲ್ಲಿಯೇ ಇದ್ದ ಇನ್ನೊಂದು ಮನೆಯ ಸಿಸಿ ಕೆಮರಾದಲ್ಲಿ ಸೆರೆಯಾಗಿವೆ. ಇದರಿಂದಾಗಿ ಪೊಲೀಸರು ಅಪಾರ್ಟ್ಮೆಂಟ್ ಬರುವುದು ಆತನಿಗೆ ಗೊತ್ತಾಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುವಂತಾಗಿದೆ.
ವಿಜಯೇಂದ್ರ ಆರೋಪ
ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ಹೇಳಿಕೆ ನೀಡಿ, ಆರ್.ಡಿ. ಪಾಟೀಲನಿಗೂ ರಾಜ್ಯ ಸರಕಾರಕ್ಕೂ ನಂಟಿದೆ. ಇದರಿಂದಾಗಿಯೇ ಬಂಧನ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಪಿಎಸ್ಐ ಪರೀಕ್ಷಾ ಅಕ್ರಮದ ವೇಳೆಯಲ್ಲಿ ಭಾರೀ ಆರೋಪಗಳನ್ನು ಮಾಡುತ್ತಿದ್ದ ಅಂದಿನ ಚಿತ್ತಾಪುರ ಶಾಸಕ, ಇಂದಿನ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಏಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಮಹಾರಾಷ್ಟ್ರಕ್ಕೆ ಪರಾರಿ ಶಂಕೆ: ಗೃಹ ಸಚಿವ
ಆರ್.ಡಿ. ಪಾಟೀಲ ಮಹಾರಾಷ್ಟ್ರಕ್ಕೆ ಪರಾರಿಯಾಗಿರುವ ಶಂಕೆಯಿದೆ. ಆತನನ್ನು ಬಂಧಿಸಲು ಪೊಲೀಸರಿಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಡಾಣ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಿಎಸ್ಐ ಅಕ್ರಮದಲ್ಲಿಯೂ ಆತ ಪ್ರಮುಖ ಆರೋಪಿ. ಆತ ಮಹಾರಾಷ್ಟ್ರಕ್ಕೆ ಪರಾರಿಯಾಗಿರುವ ಸಾಧ್ಯತೆ ಇದೆ. ಅದೇನೂ ದೊಡ್ಡ ವಿಷಯವಲ್ಲ. ಆತನನ್ನು ನಿಶ್ಚಿತವಾಗಿಯೂ ಬಂಧಿಸಲಾಗುತ್ತದೆ. ಆತನಿಗೆ ನೆರವಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಮೇಶ್ವರ್ ಎಚ್ಚರಿಸಿದ್ದಾರೆ.
ಪರೀಕ್ಷಾ ಅಕ್ರಮದ ರೂವಾರಿ ಆರ್.ಡಿ. ಪಾಟೀಲ ಬಂಧನಕ್ಕೆ ಈಗಲೂ ಎಲ್ಲಾ ಪ್ರಯತ್ನಗಳು ನಡೆದಿವೆ. ಮಾಹಿತಿ ಸಿಕ್ಕ ಬಳಿಕ ನಾವು ಅಲ್ಲಿಗೆ ಹೋಗುವುದರೊಳಗೆ ಆತ ಗೋಡೆ ಹಾರಿ ತಪ್ಪಿಸಿಕೊಂಡಿರುವ ವಿಚಾರ ಗೊತ್ತಾಯಿತು. ಪೊಲೀಸರು ಅಲ್ಲಿಗೆ ಹೋದಾಗಲೇ ಅಲ್ಲವೇ ಅವನು ತಪ್ಪಿಸಿಕೊಂಡಿದ್ದು. ಇದರಿಂದ ಪೊಲೀಸ್ ಮಾಹಿತಿ ಸರಿಯಾಗಿಯೇ ಇದೆ. ಆದರೆ ಕೆಲವು ಬಾರಿ ನಿರೀಕ್ಷಿತ ದಾಳಿ ಫಲ ಕೊಡುವುದಿಲ್ಲ. ಈ ಹಿನ್ನೆಲೆಯಲ್ಲಿ ಹುಡುಕಾಟ ಇನ್ನಷ್ಟು ತೀವ್ರಗೊಳಿಸಲಾಗಿದೆ.
-ಚೇತನ್ ಆರ್.,
ಕಲಬುರಗಿ ಪೊಲೀಸ್ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.