Bangalore: ವ್ಯಾಪಾರಿಗಳ ಕಣ್ಣೀರು ನಡುವೆ ತೆರವು ಕಾರ್ಯಾಚರಣೆ


Team Udayavani, Nov 8, 2023, 10:05 AM IST

Bangalore: ವ್ಯಾಪಾರಿಗಳ ಕಣ್ಣೀರು ನಡುವೆ ತೆರವು ಕಾರ್ಯಾಚರಣೆ

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳ ಕಣ್ಣೀರು ಹಾಗೂ ಆಕ್ರೋಶದ ಗೋಳಾಟದ ನಡುವೆ ಮಂಗಳವಾರ ಜಯನಗರ ವಾಣಿಜ್ಯ ಸಂಕೀರ್ಣದ ಬಳಿ ಪಾಲಿಕೆ ಅಧಿಕಾರಿಗಳು ಪಾದಚಾರಿ ಮಾರ್ಗದಲ್ಲಿ ಒತ್ತುವರಿ ತೆರವು ಕಾರ್ಯಚರಣೆ ನಡೆಸಿದರು.

ಜಯನಗರ ವಾಣಿಜ್ಯ ಸಂಕೀರ್ಣದ 9ನೇ ಮುಖ್ಯರಸ್ತೆ, 10ನೇ ಮುಖ್ಯಸ್ತೆ ಹಾಗೂ 27ನೇ ಅಡ್ಡರಸ್ತೆ, 27ನೇ ಎ ಅಡ್ಡರಸ್ತೆ, 30ನೇ ಅಡ್ಡರಸ್ತೆ ಸುತ್ತಮುತ್ತಲಿನ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಜೆಸಿಬಿ ಯಂತ್ರದ ಮೂಲಕ ಒತ್ತುವರಿ ತೆರವು ನಡೆಯಿತು. ಗೂಡಂಗಡಿಗಳ ಮೇಲೆ ಜೆಸಿಬಿ ಯಂತ್ರಗಳ ಗರ್ಜನೆ ಆರಂಭಿಸುತ್ತಿದಂತೆ ಬೀದಿ ವ್ಯಾಪಾರಿಗಳು ಕಣ್ಣೀರು ಹಾಕಿದ್ದು ಮನ ಕಲಕುವಂತಿತ್ತು. ಉತ್ಛ ನ್ಯಾಯಾಲಯ ಹೊರಡಿಸಿರುವ ಆದೇಶ ದನುಸಾರ ಪೊಲೀಸರ ಭದ್ರತೆಯೊಂದಿಗೆ ಜಯ ನಗರ ವಾಣಿಜ್ಯ ಸಂಕೀರ್ಣದ ಸುತ್ತಮುತ್ತಲಿನ ಪಾದಚಾರಿ ಮಾರ್ಗದಲ್ಲಿ ಒತ್ತುವರಿ ತೆರವು ಕಾರ್ಯಚರಣೆಯನ್ನು ನಡೆಸಲಾಯಿತು.

ಸುಗಮ ಸಂಚಾರಕ್ಕೆ ಪಾದಚಾರಿ ಮಾರ್ಗ ಮುಕ್ತ: ಪಾದಚಾರಿ ಮಾರ್ಗದಲ್ಲಿಟ್ಟಿರುವ ಅನಧಿಕೃತ ಪೆಟ್ಟಿ ಅಂಗಡಿ ಮುಂಗಟ್ಟುಗಳು, ಅನುಪಯುಕ್ತ ತಳ್ಳುವ ಗಾಡಿ ಗಳು, ಹಣ್ಣಿನ ಬಾಕ್ಸ್‌ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಲಾಯಿತು.

ಧ್ವನಿವರ್ಧಕದ ಮೂಲಕ ಸೂಚನೆ: ಕಾರ್ಯಾಚರಣೆ ನಡೆಯುವ ಮುನ್ನ ಒತ್ತುವರಿ ಮಾಡದಂತೆ ಧ್ವನಿವರ್ಧಕ ಮುಖಾಂತರ ವ್ಯಾಪಾರಿಗಳ ಗಮನಕ್ಕೆ ತರಲಾಗಿದ್ದರೂ ಈ ರಸ್ತೆಗಳಲ್ಲಿ 1 ಕಿ.ಮೀ.ನಷ್ಟು ಉದ್ದದ ಪಾದಚಾರಿ ಹಾಗೂ ರಸ್ತೆಯಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ತೆರವು ಗೊಳಿಸಲಾಯಿತು. ಹಲವು ಬಾರಿ ಎಚ್ಚರಿಕೆ ನೀಡಿದ್ದೆವು: 200 ಅನ ಧಿಕೃತ ಮಳಿಗೆಗಳನ್ನು ತೆಗೆದುಹಾಕಲಾಗಿದೆ. ಆರು ತಿಂಗಳ ಹಿಂದೆ ತೆರವು ಕಾರ್ಯಾಚರಣೆ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು.

ಬಳಿಕ ಮೂರು ತಿಂಗಳ ಹಿಂದೆ ಮತ್ತೆ ಎಚ್ಚರಿಕೆ ನೀಡಲಾಗಿತ್ತು. ನ.4ರಂದು ನಾವು ಈ ಪ್ರದೇಶದಲ್ಲಿ ತೆರೆದ ಮೈಕ್‌ ಬಳಸಿ, ಅಕ್ರಮ ಮಳಿಗೆಗಳನ್ನು ತೆರವುಗೊಳಿಸುವುದಾಗಿ ಹೇಳಿ ದ್ದೆವು. ಈ ಹಿನ್ನೆಲೆ ಫುಟ್‌ಪಾತ್‌ಗಳಲ್ಲಿನ ಅಕ್ರಮ ಅಂಗಡಿಗಳನ್ನು ನೆಲಸಮಗೊಳಿಸಿದ್ದೇವೆ ಎಂದು ಪಾಲಿಕೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಲವಂತವಾಗಿ ತೆರವು ಮಾಡಿದ್ದಾರೆ: ಈ ವೇಳೆ ಮಾತನಾಡಿ ಬೀದಿ ಬದಿ ವ್ಯಾಪಾರಿಗಳು, ಯಾವುದೇ ಪರ್ಯಾಯ ಜಾಗಗಳನ್ನು ನೀಡದೇ ಪಾಲಿಕೆ ಅಧಿಕಾರಿ ಗಳು ಪೊಲೀಸರ ನೆರವಿನೊಂದಿಗೆ ಬಲವಂತ ವಾಗಿ ತೆರವು ನಡೆಸಿದ್ದಾರೆ ಎಂದು ಸಿಟ್ಟು ಹೊರಹಾಕಿದರು. ತೆರವು ಕಾರ್ಯಾಚರಣೆಯಲ್ಲಿ ಪಾಲಿಕೆ ಕಾರ್ಯ ಪಾಲಕ ಅಭಿಯಂತರರು, ಸಹಾಯಕ ಕಾರ್ಯ ಪಾಲಕ ಅಭಿಯಂತರರು, ಆರೋಗ್ಯಾಧಿಕಾರಿಗಳು, ಮಾರುಕಟ್ಟೆ ವಿಭಾಗದ ಅಧಿಕಾರಿಗಳು, ಪೋಲಿಸ್‌ ಅಧಿಕಾರಿಗಳು, ಸಂಚಾರಿ ಪೋಲಿಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ, ಮಾರ್ಷಲ್‌ಗ‌ಳು ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.