Government ಪತನಕ್ಕೆ ಆಪರೇಷನ್ ಬೇಕಿಲ್ಲ: ನಾರ್ಮಲ್ ಡೆಲಿವರಿ ಆಗುತ್ತೆ
Team Udayavani, Nov 8, 2023, 9:37 PM IST
ಬೆಂಗಳೂರು : ಈ ಸರ್ಕಾರ ಕೆಡವಲು ನಾವು ಆಪರೇಷನ್ ಕಮಲ ನಡೆಸಬೇಕಿಲ್ಲ, ಅದೇ ನಾರ್ಮಲ್ ಡೆಲಿವರಿಯಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಡಿಸಿಎಂ ಡಿ.ಕೆ.ಶಿವಕುಮಾರ್ಗೆ ತಿರುಗೇಟು ನೀಡಿದ್ದಾರೆ.
ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಅವರು ಬಹುಶಃ ಹಳೆ ಗುಂಗಿನಲ್ಲಿ ಇರಬೇಕು. ಮುಂಬಯಿ ಗುಂಗು ಅವರನ್ನು ಕಾಡುತ್ತಿರಬೇಕು. ಅವರ ಶಾಸಕರನ್ನು ಉಳಿಸಿಕೊಂಡರೆ ಸಾಕು ಎಂಬ ಪರಿಸ್ಥಿತಿ ಇದೆ. ಮೊದಲು ನಿಮ್ಮ ಪಕ್ಷದ ಶಾಸಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ. ಸಚಿವರು ಕರೆ ಸ್ವೀಕರಿಸುವುದಿಲ್ಲ, ಉದ್ದಟತನದಿಂದ ಮಾತನಾಡುತ್ತಾರೆ ಎಂದು ಅವರ ಶಾಸಕರೇ ಆರೋಪಿಸುತ್ತಿದ್ದಾರೆ. ಹೀಗಾಗಿ ನಾವು ಆಪರೇಷನ್ ನಡೆಸಬೇಕಾದ ಅಗತ್ಯವಿಲ್ಲ. ಅದಾಗಿಯೇ ಬಿದ್ದು ಹೋಗುತ್ತದೆ ಎಂದು ಟೀಕಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆಗೆ ಕುಮಾರಸ್ವಾಮಿ ಸಲಹೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರೀಗ ನಮ್ಮ ಮಿತ್ರ ಪಕ್ಷದವರು. ನಮಗೆ ಸಲಹೆ ನೀಡುವುದಕ್ಕೆ ಕುಮಾರಸ್ವಾಮಿಯವರಿಗೆ ಅಧಿಕಾರವಿದೆ. ನಾವು ಜೆಡಿಎಸ್ಗೆ ಸಲಹೆ ನೀಡಬಹುದು. ನಾವು ಹೊಂದಾಣಿಕೆಯಲ್ಲಿ ಇದ್ದೇವೆ. ಕುಮಾರಸ್ವಾಮಿಗೆ ಸಲಹೆ ಕೊಡುವ ಸ್ಥಿತಿ ಈಗ ಇಲ್ಲ. ಆ ಸಂದರ್ಭ ಬಂದಾಗ ಕೊಡುತ್ತೇನೆ. ಅವರು ಬಹಳ ಅನುಭವಿ, ಎರಡು ಬಾರಿ ಮುಖ್ಯಮಂತ್ರಿಯಾದವರು ಎಂದರು.
ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ಆಯ್ಕೆ ವಿಳಂಬದ ಬಗ್ಗೆ ನಾನು ಮಾತನಾಡುವುದನ್ನೇ ಬಿಟ್ಟಿದ್ದೇನೆ. ಹೇಳಿ ಹೇಳಿ ಸಾಕಾಗಿದೆ. ಎಲ್ಲ ಸಮಸ್ಯೆ ಬಗೆಹರಿಸಿ ಅದಷ್ಟು ಬೇಗ ನೇಮಕ ಮಾಡುತ್ತಾರೆಂಬ ನಂಬಿಕೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.