Udupi ಹಸುರು ಪಟಾಕಿಯ ದೀಪಾವಳಿ: ರಾಜ್ಯ ಸರಕಾರ ಆದೇಶ


Team Udayavani, Nov 9, 2023, 12:54 AM IST

Udupi ಹಸುರು ಪಟಾಕಿಯ ದೀಪಾವಳಿ: ರಾಜ್ಯ ಸರಕಾರ ಆದೇಶ

ಉಡುಪಿ: ಈ ಬಾರಿ ದೀಪಾವಳಿಗೆ ಹಸುರು ಪಟಾಕಿಗಳನ್ನು ಬಳಕೆ ಮಾಡುವಂತೆ ರಾಜ್ಯ ಸರಕಾರ ಆದೇಶಿಸಿದ್ದು, ಎಲ್ಲ ಕಡೆಯೂ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಈ ನಡುವೆ ಮಾರಾಟಗಾರರು ಹಾಗೂ ಗ್ರಾಹಕರಿಗೆ ಸಾಂಪ್ರದಾಯಿಕ ಪಟಾಕಿಗಳು ಹಾಗೂ ಹಸುರು ಪಟಾಕಿಗಳ ಬಗ್ಗೆ ಗೊಂದಲ ಉಂಟಾಗುತ್ತಿದೆ.ಕಡಿಮೆ ಅಪಾಯಕಾರಿ ಮತ್ತು ಹೆಚ್ಚು ಹಾನಿಕಾರಕವಲ್ಲದ ರಾಸಾಯನಿಕಗಳಿಂದ ಇದನ್ನು ತಯಾರಿಸಲಾಗುತ್ತದೆ. ಇದರಲ್ಲಿ ಹಸುರು ಲೋಗೋ ಹಾಗೂ ಕ್ಯುಆರ್‌ ಕೋಡ್‌ ಅಳವಡಿಸಲಾಗಿದೆ. ಸಾಮಾನ್ಯ ಪಟಾಕಿಗಳಲ್ಲಿ ನೈಟ್ರೇಟ್‌ ಮತ್ತು ಬೇರಿಯಂಗಳು ಕಂಡುಬರುತ್ತವೆ. ಹಸುರು ಪಟಾಕಿಗಳು ಸ್ಫೋಟಿಸಿದಾಗ ನೀರಿನ ಆವಿ ಮತ್ತು ಹೊಗೆ ಹೊರ ಹಾಕುವುದನ್ನು ದುರ್ಬಲಗೊಳಿಸುತ್ತದೆ.

ಹಸುರು ಪಟಾಕಿಗಳು ಗಾತ್ರದಲ್ಲಿಯೂ ಸಣ್ಣದಾಗಿದ್ದು, ಮಾಲಿನ್ಯದ ಪ್ರಮಾಣ ಶೇ. 30ರಿಂದ 90 ಪ್ರತಿಶತ ಕಡಿಮೆಯಾಗಿದೆ.

ಸಾಂಪ್ರದಾಯಿಕ ಪಟಾಕಿಗಳಿಗಿಂತ ಹಸುರು ಪಟಾಕಿಗಳು ಕಡಿಮೆ ಗಾತ್ರದಲ್ಲಿರುತ್ತವೆ. ಸಾಂಪ್ರದಾಯಿಕ ಪಟಾಕಿಗಳ ತಯಾರಿಕೆಯಲ್ಲಿ ಉಪಯೋಗಿಸುವ ವಿವಿಧ ರಾಸಾಯನಿಕಗಳ ಪ್ರಮಾಣವು ಹಸುರು ಪಟಾಕಿಗಳಲ್ಲಿ ಶೇ. 30ರಷ್ಟು ಕಡಿಮೆ ಪ್ರಮಾಣದಲ್ಲಿರುತ್ತದೆ. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಹೊರಸೂಸುವ ರಾಸಾಯನಿಕಯುಕ್ತ ಹೊಗೆ, ಧೂಳು ಕಡಿಮೆ ಮಾಡುವ ಸಂಯೋಜಕವನ್ನು ಹಸುರು ಪಟಾಕಿ ತಯಾರಿಸುವ ಪ್ರಕ್ರಿಯೆಯಲ್ಲಿ ಸೇರಿಸುವುದರಿಂದ ವಾತಾವರಣದಲ್ಲಿ ಪರಿವೇಷ್ಠಕ ವಾಯುವಿನಲ್ಲಿನ ಗಾಳಿಯಲ್ಲಿ ತೇಲಾಡುವ ಧೂಳಿನ ಕಣಗಳು, ಎಸ್‌ಒ2 ಮತ್ತು ಎನ್‌ಒ2 ಅಂಶಗಳ ಪ್ರಮಾಣ ಶೇ. 30ರಷ್ಟು ಕಡಿಮೆಯಾಗಲಿದೆ. ವಾತಾವರಣದಲ್ಲಿ ಮಾಲಿನ್ಯವಾಗುವುದನ್ನು ತಡೆಗಟ್ಟುವ ಸಂಬಂಧ ಸರಕಾರ ಕ್ರಮ ಕೈಗೊಂಡಿದ್ದು, ಪೆಟ್ರೋಲಿಯಂ ಎಕ್ಸ್‌ಪ್ಲೋಸಿವ್‌ ಸೇಫ್ಟಿ ಆರ್ಗನೈಸೇಶನ್‌ ಅವರು ಅನುಮೋದಿಸಿದ ಘಟಕಗಳಲ್ಲಿ ತಯಾರಾದ ಪಟಾಕಿಗಳನ್ನು ಖರೀದಿಸಿ ಮಾರಾಟ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಸರಕಾರದ ಆದೇಶದ ಮೇರೆಗೆ ಈ ಬಾರಿ ಹಸುರು ಪಟಾಕಿಗಳ ಉಪಯೋಗಕ್ಕೆ ಆದ್ಯತೆ ನೀಡಲಾಗಿದೆ. ಇದನ್ನು ಹೊರತು ಇತರ ಪಟಾಕಿ ಬಳಸುವುದು ಕಂಡುಬಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.
-ರಾಜು,
ಜಿಲ್ಲಾ ಪರಿಸರ ಅಧಿಕಾರಿ

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.