Agri: ಹವಾಮಾನ ವೈಪರೀತ್ಯದ ಪರಿಣಾಮ ಎಳೆ ಅಡಿಕೆ ಉದುರಿ ಇಳುವರಿ ಕುಸಿತ !
Team Udayavani, Nov 10, 2023, 2:00 AM IST
ಸುಳ್ಯ: ಈ ಬಾರಿಯ ಮಳೆಗಾಲದ ಆರಂಭದಲ್ಲಿ ಹವಾಮಾನ ವೈಪರೀತ್ಯದಿಂದ ಹಲವೆಡೆ ಅಧಿಕ ಪ್ರಮಾಣದಲ್ಲಿ ಎಳೆ ಅಡಿಕೆ (ನಳ್ಳಿ) ಉದುರಿದ್ದು, ಇದೀಗ ಇಳುವರಿಯಲ್ಲಿ ಶೇ. 50ಕ್ಕೂ ಅಧಿಕ ಕುಸಿತ ಕಂಡಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ.
ಕಳೆದ ಬೇಸಗೆಯಲ್ಲಿ ನೀರಿನ ಕೊರತೆ ಕಾಡಿತ್ತು. ಜನವರಿಯಿಂದ ಜೂನ್ವರೆಗೆ ಮಳೆ ಇರಲಿಲ್ಲ. ಪರಿಣಾಮ ವಾತಾವರಣದಲ್ಲಿ ಉಷ್ಣಾಂಶ ವಿಪರೀತ ಏರಿಕೆ ಕಂಡಿತ್ತು. ಜೂನ್ ಬಳಿಕ ಮಳೆ-ಬಿಸಿಲಿನ ವಾತಾವರಣದಿಂದ ನಳ್ಳಿ ಉದುರಲಾರಂಭಿಸಿತ್ತು. ಕೀಟಬಾಧೆಯೂ (ರಸ ಹೀರುವ ಸಣ್ಣ ಕ್ರಿಮಿ) ಇದಕ್ಕೆ ಕಾರಣ ಎನ್ನಲಾಗಿತ್ತು.
ಎಳೆ ಅಡಿಕೆ ಪತನ ಕೆಲವೆಡೆ ನಿಯಂತ್ರಣಕ್ಕೆ ಬಂದಿತ್ತು. ಆದರೆ ಹೆಚ್ಚಿನ ಕಡೆ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಸಿಕ್ಕಿರಲಿಲ್ಲ. ಇದರಿಂದ ಎಳೆ ಅಡಿಕೆ ವಿಪರೀತವಾಗಿ ಪತನಗೊಂಡಿದ್ದು, ಸುಳ್ಯ ಭಾಗದ ಕೃಷಿಕರು ಹೇಳುವಂತೆ ಶೇ. 50-75ರ ವರೆಗೆ ಇಳುವರಿ ಕುಸಿತವಾಗಿದೆ. ಅಡಿಕೆ ಕೊçಲಿಗೆ ಸಿದ್ಧತೆ ನಡೆಯುತ್ತಿದ್ದು, ಕೆಲವೆಡೆ ಆರಂಭವಾಗಿದೆ. ನಳ್ಳಿ ಉದುರಿದ ಕಡೆಗಳಲ್ಲಿ ಇಳುವರಿ ಕುಸಿತಗೊಂಡಿದೆ. ಒಟ್ಟಿನಲ್ಲಿ ಅಡಿಕೆ ಕೃಷಿಕರು ಪ್ರತೀ ವರ್ಷ ಒಂದಿಲ್ಲೊಂದು ಸಮಸ್ಯೆಯಿಂದ ಅಡಿಕೆಯಿಂದ ಪಡೆ ಯುವ ಆದಾಯದಿಂದ ವಂಚಿತ ಗೊಳ್ಳುತ್ತಿದ್ದಾರೆ.
ಮಳೆಗಾಲದ ಆರಂಭದಲ್ಲಿ ಎಳೆ ಅಡಿಕೆ ಉದುರಿದ್ದರಿಂದ ಅಡಿಕೆ ಇಳುವರಿಯಲ್ಲಿ ಕುಸಿತ ಕಂಡಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ. ಅಡಿಕೆ ಪತನ ನಿಯಂತ್ರಣ ಸಿಕ್ಕ ಕಡೆಗಳಲ್ಲಿ ಇಳುವರಿ ಉತ್ತಮ ರೀತಿಯಲ್ಲಿ ಇದೆ.
– ವಿನಾಯಕ ಹೆಗ್ಡೆ, ವಿಜ್ಞಾನಿ ಸಿಪಿಸಿಆರ್ಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.