Deepavali festival: ವಿಶೇಷ ಚೇತನ ಮಕ್ಕಳಿಂದ ಬಣ್ಣದ ಹಣತೆ


Team Udayavani, Nov 10, 2023, 10:57 AM IST

Deepavali festival: ವಿಶೇಷ ಚೇತನ ಮಕ್ಕಳಿಂದ  ಬಣ್ಣದ ಹಣತೆ

ಮಹಾನಗರ: ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆ ಬಳಸುತ್ತಿದ್ದ ಮಂಗಳೂರಿಗರು ಮನಸೋತಿರುವುದು ಬಣ್ಣದ ಹಣತೆಗೆ. ನಗರದ ಚೇತನಾ ಬಾಲವಿಕಾಸ ಕೇಂದ್ರದ ವಿಶೇಷ ಚೇ ತನ ವಿದ್ಯಾರ್ಥಿಗಳು ಹಣತೆಯಲ್ಲಿ ಬಣ್ಣದ ಲೋಕ ಅನಾವರಣಗೊಳಿಸಿದ್ದು, ದೇಶ ವಿದೇಶಗಳಲ್ಲಿ ಬೇಡಿಕೆ ಪಡೆದುಕೊಂಡಿದೆ.

ನಾಡು ದೀಪಾವಳಿ ಹಬ್ಬಕ್ಕೆ ಸಿದ್ಧಗೊಳ್ಳುತ್ತಿದ್ದು, ಮಂಗಳೂರಿನ ವಿಟಿ ರಸ್ತೆಯ ಸೇವಾ ಭಾರತಿ ಸಂಸ್ಥೆಯ ಚೇತನಾ ಬಾಲವಿಕಾಸ
ಕೇಂದ್ರದ ವಿಶೇಷ  ಚೇತನ ವಿದ್ಯಾರ್ಥಿಗಳು ಹಣತೆಗಳಿಗೆ ಬಣ್ಣದ ಚಿತ್ತಾರ ನೀಡುವ ಮೂಲಕ ಬೆಳಕಿನ ಹಬ್ಬಕ್ಕೆ ಸಿದ್ಧತೆಯನ್ನು ಮಾಡಿ ಕೊಂಡಿದ್ದಾರೆ.

ಮಂಗಳೂರು ಆಸುಪಾಸಿನ 95ಕ್ಕೂ ಅಧಿಕ ವಿಶೇಷ ಚೇತನರಿಗೆ ಚೇತನಾ ಬಾಲ ವಿಕಾಸ ಕೇಂದ್ರ ಆಸರೆಯಾಗಿದೆ. 25 ವರ್ಷ ಮೇಲ್ಪಟ್ಟ ಸುಮಾರು 30ರಷ್ಟು ವಿಶೇಷ ಚೇತನ ಮಕ್ಕಳ ಜತೆ ಸೇರಿಕೊಂಡು ಬೆಳಕಿನ ಹಬ್ಬ ದೀಪಾವಳಿಗೆ ಬಣ್ಣದ ಲೋಕವನ್ನು ಸೃಷ್ಟಿಸಿದ್ದಾರೆ. ಮಣ್ಣಿನ ಹಣತೆಗಳನ್ನು ತಂದು ಅವುಗಳಿಗೆ ವಿವಿಧ ಬಣ್ಣಗಳನ್ನು ನಾಜೂಕಾಗಿ ನೀಡುವುದನ್ನು ನೋಡುವುದೇ ಕಣ್ಣಿಗೆ ಹಬ್ಬ.

ಹಣತೆಗಳಲ್ಲಿ ಕಲಾ ಚಿತ್ತಾರ!
ಮುಂಬಯಿಂದ ಮಣ್ಣಿನ ಹಣತೆಗಳನ್ನು ತಂದು ಅವುಗಳಿಗೆ ಬಣ್ಣ ಬಳಿಯಲಾಗುತ್ತದೆ. ಆ ಬಳಿಕ ದಿಯಾ(ಹಣತೆ)ಗಳಲ್ಲಿ ವಿವಿಧ ಕಲಾ ಚಿತ್ತಾರಗಳನ್ನು ಬರೆಯಲಾಗುತ್ತದೆ. ಓರ್ವ ಒಂದು ದಿನಕ್ಕೆ 25 ಹಣತೆಗಳಿಗೆ ಬಣ್ಣ ಬಳಿಯುತ್ತಾರೆ. ಆ ಬಳಿಕ ಕಲಾ ಸ್ಪರ್ಶ
ನೀಡುವ ಕಾರ್ಯವನ್ನು ತಾಳ್ಮೆಯಿಂದ ಮಾಡಬೇಕಾಗುತ್ತದೆ. ಕೆಲವು ವಿಶೇಷ ಚೇತನ ಮಕ್ಕಳೇ ಕಲಾಕೃತಿಗಳನ್ನು ರಚಿಸಿದರೆ,
ಉಳಿದವರಿಗೆ ಸಿಬಂದಿ ನೆರವಾಗುತ್ತಾರೆ.

ಹಣತೆ ಖರೀದಿಗೆ ಜನವೋ ಜನ ಮಂಗಳೂರಿಗರು ಇದೀಗ ಈ ಬಣ್ಣದ ಹಣತೆಯನ್ನು ಬಳಸುತ್ತಿದ್ದಾರೆ. ಹಾಗಾಗಿ ವಿಶೇಷ ಚೇತನರು ಬಣ್ಣ ಬಳಿದಿರುವ ಹಣತೆ ಗಳಿಗೆ ಬಲು ಬೇಡಿಕೆ ಬಂದಿದೆ.

ಮಂಗಳೂರು ಮಾತ್ರವಲ್ಲದೆ ಮುಂಬಯಿ, ಪುಣೆ, ಬೆಂಗಳೂರು, ಮೈಸೂರಿಗೆ ಸಾವಿರಾರು ಹಣತೆಗಳನ್ನು ಕಳುಹಿಸಲಾಗಿದೆ ಎನ್ನುತ್ತಾರೆ ಸಂಸ್ಥೆಯ ಮುಖ್ಯಸ್ಥರು. ವರ್ಷವಿಡೀ ಚಟುವಟಿಕೆ ದೀಪಾವಳಿ ಸಂದರ್ಭ ಹಣತೆಗಳಿಗೆ ಬಣ್ಣದ ಚಿತ್ತಾರ ಒಂದೆಡೆಯಾದರೆ, ಮತ್ತೂಂದೆಡೆ ಬೇಡಿಕೆಗೆ ಅನುಗುಣವಾಗಿ ಗೂಡುದೀಪಗಳನ್ನು ತಯಾರಿಸುತ್ತಿದ್ದಾರೆ.

ಇದಲ್ಲದೆ ವರ್ಷವಿಡೀ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಸ್ಕ್ರೀನ್‌ ಪೈಂಟಿಂಗ್‌, ಪೇಪರ್‌, ಬಟ್ಟೆ ಬ್ಯಾಗ್‌ ತಯಾರಿಕೆ, ಮೆಡಿಕಲ್‌ ಗಳಿಗೆ ಬೇಕಾಗುವ ಕವರ್‌ ಗಳು, ಅಲಂಕಾರಿಕ ಹೂವುಗಳು, ಬಟ್ಟೆಯ ಮ್ಯಾಟ್‌ಗಳು, ಕ್ಯಾಂಡಲ್‌
ತಯಾರಿಕೆ ಹೀಗೆ ವಿವಿಧ ಚಟುವಟಿಕೆಗಳು ಅಂಗ ವಿಕಲರನ್ನು ಕ್ರೀಯಾಶೀಲರನ್ನಾಗಿಸುತ್ತಿದೆ.

ವಿಶೇಷ ಮಮತೆಯಿಂದ ರಂಗುರಂಗಿನ ಚಿತ್ತಾರ
ಚೇತನಾ ಬಾಲವಿಕಾಸ ಸಂಸ್ಥೆಗೆ ಸೇರಿಕೊಂಡವರನ್ನು ಅತೀವ ಪ್ರೀತಿ ಮಮತೆಯಿಂದ ನೋಡಿಕೊಳ್ಳುತ್ತೇವೆ. ಇದರಿಂದಾಗಿ ಅವರು ನಮ್ಮೊಡನೆ ಚೆನ್ನಾಗಿಯೇ ಬೆರೆತುಕೊಳ್ಳುತ್ತಾರೆ. ಅವರಿಗೆ ನೀಡುವ ಚಟುವಟಿಕೆಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾರೆ. ದೀಪಾವಳಿ ಹಬ್ಬಕ್ಕೆ ತಯಾರಿ ಎಂಬಂತೆ ಮೂರು ತಿಂಗಳುಗಳ ಮೊದಲೇ ಹಣತೆಗಳನ್ನು ಬಣ್ಣಗಳಿಂದ ಶೃಂಗರಿಸುವ ಕಾರ್ಯ ಆರಂಭಿಸುತ್ತೇವೆ. ಅಲಂಕೃತಗೊಂಡ ಹಣತೆಗಳಿಗೆ ಮಂಗಳೂರಿಗರು ಮಾತ್ರವಲ್ಲದೆ ಹೊರಭಾಗದಿಂದಲೂ ಬೇಡಿಕೆ ಬಂದಿದ್ದು, ಮುಂದಿನ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಪೂರೈಸಲಾಗುವುದು.
ಸುಪ್ರಿತಾ, ಮುಖ್ಯಶಿಕ್ಷಕಿ ಚೇತನಾ ಬಾಲ ವಿಕಾಸ ಕೇಂದ್ರ

ಹೆತ್ತವರಿಂದಲೂ ಮಕ್ಕಳಿಗೆ ಸಹಕಾರ
6 ವರ್ಷಗಳಿಂದ ಸಂಸ್ಥೆಯಲ್ಲಿ ವಿಶೇಷ ಚೇತನ ಮಕ್ಕಳು ಹಣತೆ ಶೃಂಗರಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ದೀಪಾವಳಿ ಸಂದರ್ಭ ಹಣತೆಗಳನ್ನು ಶೃಂಗರಿಸುವ ಕಾರ್ಯ ಮಾಡುತ್ತಿದ್ದು ಇವುಗಳಿಗೆ ಬೇಡಿಕೆ ಹೆಚ್ಚಿದೆ. ಕಳೆದ ವರ್ಷ 1 ಸಾವಿರ ಹಣತೆಗಳನ್ನು ಬಣ್ಣ ಹಚ್ಚಿ ನೀಡಿದ್ದೆವು. ಈ ವರ್ಷ ಇಲ್ಲಿಯ ತನಕ 5 ಸಾವಿರಕ್ಕೂ ಅಧಿಕ ಹಣತೆಗಳನ್ನು ಬಣ್ಣ ಹಚ್ಚಿ ಮಾರಾಟ ಮಾಡಲಾಗಿದೆ. ಕೆಲಸ ಹೆಚ್ಚಾಗಿರುವುದರಿಂದ ಹೆತ್ತ ವರು ತಮ್ಮ ಮಕ್ಕಳ ಕಾರ್ಯಕ್ಕೆ ಕೈಜೋಡಿಸುತ್ತಿದ್ದಾರೆ. ಅವರೊಂದಿಗೆ ಬೆರೆತು ಆನಂದಪಡುತ್ತಾರೆ. ಜತೆಗೆ ಸಂಸ್ಥೆಯ ಸಿಬಂದಿ, ಸ್ವಯಂ ಸೇವಕರ ಸಹಕಾರದಿಂದಾಗಿ ನಿರೀಕ್ಷೆಗೂ ಮೀರಿ ಹಣತೆಗಳನ್ನು ಪೂರೈಸಲಾಗುತ್ತಿದೆ ಎನ್ನುವುದು ಸಂಸ್ಥೆಯ ಸಿಬಂದಿ ಮಾತು.

*ಸಂತೋಷ್‌ ಮೊಂತೆರೋ

ಟಾಪ್ ನ್ಯೂಸ್

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.