Sagara: ಶಾಸಕ ಬೇಳೂರರಿಗೆ ತಾವಿರುವ ಪಕ್ಷದ ಕುರಿತೇ ಗೊಂದಲ; ಹೊನಗೋಡು ವ್ಯಂಗ್ಯ


Team Udayavani, Nov 10, 2023, 3:50 PM IST

9-sagara

ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಹಿಂದಿನಿಂದಲೂ ಮೂರು ತಿಂಗಳು ತಾವು ಪ್ರತಿನಿಧಿಸುವ ಪಕ್ಷವನ್ನು ಹೊಗಳುವುದು, ಆರು ತಿಂಗಳು ತೆಗಳುವುದು ಮಾಡಿಕೊಂಡು ಬಂದಿರುವುದು ಮಾಮೂಲಿ. ಸದ್ಯ ಅವರಿಗೆ ತಾವು ಯಾವ ಪಕ್ಷದಲ್ಲಿ ಇದ್ದೇವೆ ಎನ್ನುವುದೇ ಗೊತ್ತಿದ್ದಂತೆ ಕಾಣುತ್ತಿಲ್ಲ.  ತಮ್ಮದೇ ಪಕ್ಷದ ಜಿಲ್ಲಾ ಉಸ್ತುವಾರಿ ಸಚಿವರು ಯಾರೆಂದು ತಮಗೆ ಗೊತ್ತಿಲ್ಲ ಎನ್ನುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಟೀಕಿಸಿದರು.

ನ.10ರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಳೂರು ಅವರ ವರ್ತನೆಯಿಂದ ಕ್ಷೇತ್ರದ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುವಂತಾಗುತ್ತಿದೆ. ಸಾಗರ ಕ್ಷೇತ್ರವನ್ನು ಕಾಗೋಡು, ಎಲ್.ಟಿ.ತಿಮ್ಮಪ್ಪ ಹೆಗಡೆ, ಹರತಾಳು ಹಾಲಪ್ಪ ಅಂತಹವರು ಪ್ರತಿನಿಧಿಸಿ ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಗುರುತಿಸುವಂತಹ ಕೆಲಸ ಮಾಡಿದ್ದಾರೆ. ಆದರೆ ಇವರ ಅವಧಿಯಲ್ಲಿ ಹಿನ್ನಡೆ ಅನುಭವಿಸುವಂತೆ ಆಗಿದೆ ಎಂದು ದೂರಿದರು.

ಸಂಸದ ಬಿ.ವೈ.ರಾಘವೇಂದ್ರ ಬಗ್ಗೆ ಶಾಸಕ ಬೇಳೂರು ಪದೇಪದೇ ಕೇವಲವಾಗಿ ಮಾತನಾಡಿದರೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ. ದೇಶದಲ್ಲಿ ಅಭಿವೃದ್ಧಿಯ ವಿಚಾರದಲ್ಲಿ ಎರಡನೇ ಸ್ಥಾನದಲ್ಲಿರುವ ಬಿವೈಆರ್ ಲೋಕಸಭಾ ಕ್ಷೇತ್ರದಾದ್ಯಂತ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿಕೊಂಡು ಬರಲು ಶಾಸಕ ಗೋಪಾಲಕೃಷ್ಣರಿಗೆ ಮೂರು ತಿಂಗಳು ಹಿಡಿಯುತ್ತದೆ ಎಂದು ವ್ಯಂಗ್ಯ ಚಾಟಿ ಬೀಸಿದರು.

ಸಂಸದ ಬಿ.ವೈ.ರಾಘವೇಂದ್ರರ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪ ಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ, ಏರ್‌ಪೋರ್ಟ್, ಸೇತುವೆ, ರೈಲ್ವೆ ಅಭಿವೃದ್ಧಿ ಸೇರಿದಂತೆ ಸಂಸದರ ಕಾರ್ಯವೈಖರಿ ಅನುಕರಣೀಯವಾದದ್ದು. ಬೇಳೂರಿಗೆ ಮೂರು ಬಾರಿ ಶಾಸಕನಾಗಿದ್ದೆ ಎನ್ನುವ ಹೆಗ್ಗಳಿಕೆ ಬಿಟ್ಟರೆ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಏನು ಎಂದು ಪ್ರಶ್ನೆ ಮಾಡಿದರು.

ಈ ಶಾಸಕರ ಬಗ್ಗೆ ವರ್ಗಾವಣೆ, ಹಾಲಪ್ಪ ಹರತಾಳು ತಂದ ಅನುದಾನ ದುರುಪಯೋಗ, ಮರಳು ಸಾಗಾಣಿಕೆಗಳಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವ ಮಾತು ಕ್ಷೇತ್ರವ್ಯಾಪ್ತಿಯಲ್ಲಿ ಚರ್ಚೆಯಲ್ಲಿದೆ. ಕೆಲವರು ಯೋಗ್ಯತೆ ಮೇಲೆ ಗೆದ್ದು ಬರುತ್ತಾರೆ. ಇನ್ನು ಕೆಲವರು ಯೋಗದ ಮೇಲೆ ಗೆದ್ದು ಬರುತ್ತಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಉಚಿತ ಭಾಗ್ಯ ಸೇರಿದಂತೆ ವಿವಿಧ ಯೋಗದಿಂದ ಗೆದ್ದು ಬಂದಿದ್ದಾರೆ. ಕಾಗೋಡು ತಿಮ್ಮಪ್ಪ ಭೀಷ್ಮರಿದ್ದಂತೆ. ಅವರು ನನ್ನ ಪಕ್ಕ ಇದ್ದರೆ ಗೆಲುವು ನಿಶ್ಚಿತ ಎಂದು ಹೇಳಿದ್ದವರು ಈಗ ಅವರಿಗೆ ತೊಂದರೆ ಕೊಡುತ್ತಿದ್ದಾರೆ. ಮಧು ಬಂಗಾರಪ್ಪ, ಶಿವರಾಜ್ ಕುಮಾರ್ ರ‍್ಯಾಲಿ ನಡೆಸಿ ಹೆಚ್ಚಿನ ಮತ ತರುವಲ್ಲಿ ಶ್ರಮಿಸಿದ್ದರು. ಈಗ ನನ್ನ ಗೆಲುವಿಗೆ ನಾನೇ ಕಾರಣ ಎನ್ನುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ಹಗರಣದ ಬಗ್ಗೆ ಮಾತನಾಡುವ ಬೇಳೂರಿಗೆ ಅವರದ್ದೇ ಪಕ್ಷ ಅಧಿಕಾರದಲ್ಲಿದೆ. ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಕ್ಷೇತ್ರ ವಿಂಗಡಣೆ ಅವೈಜ್ಞಾನಿಕವಾಗಿದೆ. ಏನೇ ಆದರೂ ಬಿಜೆಪಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತದೆ ಎಂದರು.

ಗೋಷ್ಠಿಯಲ್ಲಿ ಭರ್ಮಪ್ಪ ಅಂದಾಸುರ, ರೇವಪ್ಪ ಕೆ.ಹೊಸಕೊಪ್ಪ, ನಟರಾಜ ಗೇರುಬೀಸು, ಶಾಂತಪ್ಪ ಗೌಡ, ಶಿವಾನಂದ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.