Arrested: ದರೋಡೆಗೆ ಸಂಚು: 9 ವರ್ಷ ಬಳಿಕ ಸೆರೆ
Team Udayavani, Nov 11, 2023, 10:59 AM IST
ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ 9 ವರ್ಷಗಳ ಬಳಿಕ ಎಂ-ಸಿಸಿಟಿಎನ್ಎಸ್ ಆ್ಯಪ್ ಮೂಲಕ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಹಾಸನ ಮೂಲದ ಲಕ್ಷ್ಮಣ್ (47) ಬಂಧಿತ.
2014ನೇ ಸಾಲಿನಲ್ಲಿ ದರೋಡೆಗೆ ಸಂಚು ಆರೋಪದಡಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಜಾಮೀನು ಪಡೆದು ಹೊರಗೆ ಬಂದಿದ್ದ ಆರೋಪಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಹೀಗಾಗಿ ನ್ಯಾಯಾಲಯ ಈತನ ವಿರುದ್ಧ ಹಲವು ಬಾರಿ ವಾರೆಂಟ್ ಹೊರಡಿಸಿತ್ತು.
ಅನುಮಾನಾಸ್ಪದ ವ್ಯಕ್ತಿಗಳನ್ನು ಪರಿಶೀಲಿಸಲು ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಎಂ ಸಿಸಿಟಿಎನ್ಎಸ್ ಮೊಬೈಲ್ ಆ್ಯಪ್ ನೀಡಲಾಗಿದ್ದು, ಬೆರಳು ಮುದ್ರೆ ಮೂಲಕ ಪರಿಶೀಲನೆಗಾಗಿ ಡಿವೈಸ್ ವಿತರಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಅವರ ಬೆರಳು ಮುದ್ರೆಯನ್ನು ಈ ಡಿವೈಎಸ್ ಮೇಲೆ ಒತ್ತಿದರೆ, ಆ ವ್ಯಕ್ತಿ ಈ ಹಿಂದೆ ಯಾವುದಾದರೂ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದನೆ ಎಂಬ ಮಾಹಿತಿ ಲಭ್ಯವಾಗುತ್ತದೆ.
ಅದೇ ರೀತಿ ನ.8ರಂದು ರಾತ್ರಿ ರಾಜಗೋ ಪಾಲನಗರ ಠಾಣೆ ಎಎಸ್ಐ ಕೃಷ್ಣಮೂರ್ತಿ, ಹೆಡ್ಕಾನ್ಸ್ಟೇಬಲ್ ಹಾಗೂ ಕಾನ್ಸ್ಟೇಬಲ್ ಪೀಣ್ಯ 2ನೇ ಹಂತದ ಗ್ಯಾಸ್ ಬಂಕ್ ಬಳಿ ಹೊಯ್ಸಳ ವಾಹನದಲ್ಲಿ ಗಸ್ತು ಕರ್ತವ್ಯದಲ್ಲಿದ್ದರು. ಈ ವೇಳೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಓಡಾಡುತ್ತಿರುವುದು ಕಂಡು ಬಂದಿದೆ.
ಕೂಡಲೇ ಆತನನ್ನು ವಶಕ್ಕೆ ಪಡೆದು ಎಂ-ಸಿಸಿ ಟಿಎನ್ಎಸ್ ಮೊಬೈಲ್ ಆ್ಯಪ್ ಡಿವೈಸ್ ನಲ್ಲಿ ಆತನ ಬೆರಳು ಮುದ್ರೆ ಪರಿಶೀಲಿಸಿದಾಗ ಪೊಲೀಸರ ದತ್ತಾಂಶದಲ್ಲಿ ಆ ಬೆರಳು ಮುದ್ರೆ ಇರುವುದು ಕಂಡು ಬಂದಿದೆ.
ಬಳಿಕ ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಆತ ತನ್ನ ಹೆಸರು ಲಕ್ಷ್ಮಣ್, ಪೀಣ್ಯ 2ನೇ ಹಂತದ ಬೇಕರಿವೊಂದರಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ಹೇಳಿದ್ದಾನೆ.ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ 9 ವರ್ಷಗಳ ಹಿಂದೆ ದರೋಡೆಗೆ ಸಂಚು ಪ್ರಕರಣ ದಲ್ಲಿ ಬಂಧನಕ್ಕೊಳಗಾಗಿ ಜಾಮೀನು ಪಡೆದು ಹೊರಗೆ ಬಂದು ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿ ಕೊಂಡಿರುವ ವಿಚಾರ ಗೊತ್ತಾಗಿದೆ.
ಬಳಿಕ ಆರೋಪಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೀಡಿ, ಆರೋಪಿ ಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.