![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 12, 2023, 8:58 PM IST
ಮುಂಡಗೋಡ: ಎಟಿಎಮ್ ನಿಂದ ಹಣ ಡ್ರಾ ಮಾಡಿಕೊಡುವುದಾಗಿ ಹೇಳೆ ಮಹಿಳೆಗೆ ವಂಚಿಸಿದ ವಂಚಕಿಯನ್ನು ರವಿವಾರ ಇಲ್ಲಿನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಮೂಲದ ಸದ್ಯ ಶಿರಸಿಯಲ್ಲಿರುವ ಕೌಸರಾಬಾನು ಹಿರೇಕೆರೂರ(35) ಬಂಧಿತೆ. ಸೆ.25 ರಂದು ತಾಲೂಕಿನ ಮೈನಳ್ಳಿ ಗ್ರಾಮದ ಸಕೀನಾಬಿ ಸಲೀಂ ಎಂಬ ಮಹಿಳೆ ಪಟ್ಟಣದ ಕೆನರಾ ಬ್ಯಾಂಕಿನ ಎಟಿಎಮ್ ನಲ್ಲಿ ಹಣ ಡ್ರಾ ಮಾಡಲು ಹೋಗಿದ್ದರು. ಈ ವೇಳೆ ಆರೋಪಿ ಕೌಸರಾ ಬಾನು ಹಣ ತೆಗೆದುಕೊಡುವುದಾಗಿ ಹೇಳಿ ಸಕೀನಾಬಿ ಅವರಿಗೆ ನಂಬಿಸಿ ಎಟಿಎಮ್ ಪಾಸ್ವರ್ಡನ್ನು ನೋಡಿಕೊಂಡು ಎಟಿಎಮ್ ಬದಲಿಸಿ ಬೇರೆ ಹೆಸಲಿನಲ್ಲಿರುವ ಎಟಿಎಮ್ ಕಾಡ್ ಕೊಟ್ಟು ಸಕೀನಾಬಿ ಅವರ ಖಾತೆಯಿಂದ69 ಸಾವಿರ ರೂ ಹಣವನ್ನು ತೆಗೆದು ವಂಚನೆ ಮಾಡಿದ್ದರ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ವಂಚನೆ ಪ್ರಕರಣವನ್ನು ಭೇದಿಸಲು ಸಿಪಿಐ ಬಿ.ಎಸ್ ಲೋಕಾಪುರ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದರು. ರವಿವಾರ ವಂಚಕಿ ಕೌಸರಾಬಾನು ಅವಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಂಚನೆ ಮಾಡುತ್ತಿರುವ ಬಗ್ಗೆ ತಿಳಿದು ಬಂದಿದ್ದು ಆರೋಪಿತಳಿಂದ 12 ಸಾವಿರ ರೂ.ವಶಪಡೆದಿದ್ದಾರೆ.
ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಡಾ| ವಿಷ್ಣುವರ್ಧನ್, ಹೆಚ್ಚುವರಿ ವರಿಷ್ಠಾಧಿಕಾರಿ ಎಸ್. ಜಯಕುಮಾರ, ಶಿರಸಿಯ ಡಿಎಸ್ಪಿ ಗಣೇಶ ಕೆ.ಎಲ್ ರವರ ಮಾರ್ಗದರ್ಶನದಲ್ಲಿ ಸಿಪಿಐ ಬಿ ಎಸ್ ಲೋಕಾಪುರ ನೇತೃತ್ವದ ಪಿಎಸ್ಐಗಳಾದ ಯಲ್ಲಾಲಿಂಗ ಕುನ್ನೂರು, ಹನಮಂತ ಕುಡಗುಂಟಿ, ಎಎಸ್ಐ ಗೀತಾ ಕಲಘಟಗಿ, ಸಿಬ್ಬಂದಿಗಳಾದ ಮಹಮ್ಮದ್ ಸಲೀಮ್, ಕೊಟೇಶ ನಾಗರವಳ್ಳಿ, ಬಸವರಾಜ ಲಮಾಣಿ, ತಿರುಪತಿ ಚೌಡಣ್ಣನವರ, ಅಣ್ಣಪ್ಪ ಬುಡಿಗೇರ, ಬಸವರಾಜ ಒಡೆಯರ್, ಪುಷ್ಪಾ ಕೂಳಗಿ, ರೇಖಾ ಹುಚ್ಚಣ್ಣವರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಇವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.