Karnataka ಎನ್ಇಪಿ ಮುಂದುವರಿಸಲು ಆಗ್ರಹ: 1 ಕೋಟಿ ಸಹಿ ಸಂಗ್ರಹ ಅಭಿಯಾನ
Team Udayavani, Nov 12, 2023, 11:13 PM IST
ಮಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಉನ್ನತ ಶಿಕ್ಷಣ ವಿಭಾಗದಲ್ಲಿ ಜಾರಿಯಲ್ಲಿರುವ ಎನ್ಇಪಿ-2020 ಅನ್ನು ಮುಂದುವರಿಸುವಂತೆ ಹಾಗೂ ಇನ್ನು ಮುಂದೆ ಶಾಲಾ ಶಿಕ್ಷಣದಲ್ಲಿ ಎನ್ಇಪಿ ಜಾರಿಗೊಳಿಸುವಂತೆ ಆಗ್ರಹಿಸಿ
ರಾಜ್ಯಾದ್ಯಂತ ಎಲ್ಲ ಶಾಲೆ, ಕಾಲೇಜು ಗಳ ವಿದ್ಯಾರ್ಥಿಗಳ ಹೆತ್ತವರ, ವಿದ್ಯಾರ್ಥಿಗಳ, ಶಿಕ್ಷಕರ ಮತ್ತು ಆಡಳಿತ ಮಂಡಳಿಯವರಿಂದ 1 ಕೋಟಿ ಸಹಿ ಸಂಗ್ರಹ ಮಾಡುವ ಅಭಿಯಾನ ನ. 15ರಿಂದ 30ರ ವರಗೆ ನಡೆಸಲು ವಿದ್ಯಾಭಾರತಿ ಕರ್ನಾಟಕದ ರಾಜ್ಯ ಕಾರ್ಯಕಾರಿಣಿಯು ನಿರ್ಣಯ ತೆಗೆದುಕೊಂಡಿದೆ.
ರಾಷ್ಟ್ರೀಯ ಶಿಕ್ಷಣ ನೀತಿ -2020 ಸ್ವತಂತ್ರ ಭಾರತದ 3ನೇ ರಾಷ್ಟ್ರೀಯ ಶಿಕ್ಷಣ ನೀತಿಯಾಗಿ ರೂಪುಗೊಂಡು ಇದೀಗ ದೇಶಾದ್ಯಂತ ಜಾರಿಯಾಗಿದೆ. ಪ್ರಜಾಸತ್ತಾತ್ಮಕ ವ್ಯವಸ್ಥೆಗಳ ಇತಿಹಾಸ ದಲ್ಲಿಯೇ ಇಷ್ಟೊಂದು ವ್ಯಾಪಕವಾಗಿ ಹಾಗೂ ಎಲ್ಲ ಸ್ತರಗಳಲ್ಲಿ ಚರ್ಚಿತವಾಗಿ ರೂಪು ತಳೆದ “ಸಾರ್ವಜನಿಕ ನೀತಿ’ ಬೇರಾವುದಿಲ್ಲ. ಈ ನೀತಿ ಸಿದ್ಧಗೊಳಿಸುವಲ್ಲಿ ದೇಶದ 2.5ಲಕ್ಷ ಗ್ರಾಮಗಳಲ್ಲಿ, 676 ಜಿಲ್ಲೆಗಳಲ್ಲಿ, 36 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಭೆ ನಡೆದು 2 ಲಕ್ಷಕ್ಕೂ ಅಧಿಕ ಸಲಹೆಗಳ ಸ್ವೀಕೃತಿಯೊಂದಿಗೆ ಅಂತಿಮ ರೂಪ ಪಡೆದಿದೆ.
ಕರ್ನಾಟಕದಲ್ಲಿ ಎನ್ಇಪಿ ಯನ್ನು ಮುಂದುವರಿಸುವಂತೆ ಆಗ್ರಹಿಸಿ ನಡೆಸಲಾಗುವ ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಶಿಕ್ಷಣ ಪ್ರೇಮಿಗಳು ವಿದ್ಯಾಭಾರತಿ ಕರ್ನಾಟಕದ ಜತೆ ಕೈ ಜೋಡಿಸುವುದರ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ದ.ಕ. ಜಿಲ್ಲಾಧ್ಯಕ್ಷ ಲೋಕಯ್ಯ ಡಿ. ಮತ್ತು ಜಿಲ್ಲಾ ಕಾರ್ಯದರ್ಶಿ ರಮೇಶ ಕೆ. ಪ್ರಕಟನೆ ಮೂಲಕ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.