Vijayapura ಆನ್‍ಲೈನ್ ವಂಚನೆ: ಕೀನ್ಯಾ, ನೈಜೀರಿಯಾದ 8 ಪ್ರಜೆಗಳ ಬಂಧನ


Team Udayavani, Nov 13, 2023, 4:06 PM IST

Vijayapura ಆನ್‍ಲೈನ್ ವಂಚನೆ: ಕೀನ್ಯಾ, ನೈಜೀರಿಯಾದ 8 ಪ್ರಜೆಗಳ ಬಂಧನ

ವಿಜಯಪುರ: ಆನ್ ಲೈನ್ ಮೂಲಕ ಹಣ ಪಡೆದು ವಂಚನೆ ನಡೆಸಿದ ಆರೋಪದಲ್ಲಿ ವಿಜಯಪುರ ಜಿಲ್ಲೆಯ ಸಿ.ಇ.ಎನ್. ಅಪರಾಧ ವಿಭಾಗದ ಪೊಲೀಸರು ಕೀನ್ಯಾ ದೇಶದ ಐವರು ಹಾಗೂ ನೈಜೀರಿಯಾ ದೇಶದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್, ಕ್ರಿಬ್ಕೋ ಮೈನಿಂಗ್ ಮಾಡಲು ಹಣ ಹೂಡಿಕೆ ಮಾಡಿದಲ್ಲಿ ಶೇಕಡಾ 200 ರಷ್ಟು ಲಾಭಾಂಶ ನೀಡುವುದಾಗಿ ವಿಜಯಪುರ ಜಿಲ್ಲೆಯ ಉದ್ಯಮಿಯೊಬ್ಬರಿಗೆ ಆರೋಪಿಗಳು ನಂಬಿಸಿದ್ದರು. ಅನಾಮಧೇಯ ಆನ್‍ಲೈನ್ ಆರ್ಥಿಕ ವಂಚಕರ ಮಾತನ್ನು ನಂಬಿದ ನಗರದ ಉದ್ಯಮಿ ಹಂತ ಹಂತವಾಗಿ ತಮ್ಮ ಬ್ಯಾಂಕ್ ಖಾತೆಗೆ 59.12 ಲಕ್ಷ ರೂ.ಗಳನ್ನು ಜಮೆ ಮಾಡಿದ್ದರು. ಹಣ ಸಂದಾಯ ಮಾಡಿಸಿಕೊಂಡ ಆರೋಪಿಗಳು ಉದ್ಯಮಿಗೆ ಯಾವುದೇ ಲಾಭಾಂಶ ನೀಡಿರಲಿಲ್ಲ ಎಂದರು.

ಈ ಕುರಿತು ಬಾಧಿತ ಉದ್ಯಮಿ ವಿಜಯಪುರ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದಾಗ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಇಳಿದಿದ್ದರು. ಸಿಇಎನ್ ಅಪರಾಧ ಠಾಣೆ ಸಿಪಿಐ ರಮೇಶ ಅವಜಿ ನೇತೃತ್ವದಲ್ಲಿ ಮಲ್ಲಿಕಾರ್ಜುನ ತಳವಾಡ, ಪಿ.ವೈ.ಅಂಬಿಗೇರ ಇವರೊಂದಿಗೆ ಇತರೆ 17 ಜನರ ತನಿಖಾ ತಂಡವನ್ನು ರಚಿಸಲಾಗಿತ್ತು.

ರಮೇಶ ಅವಜಿ ನೇತೃತ್ವದ ಪೊಲೀಸ್ ತಂಡ ತಾಂತ್ರಿಕ ಸಾಕ್ಷಾಧಾರಗಳಾದ ಮೊಬೈಲ್ ಸಿಡಿಆರ್, ಲೊಕೇಶನ್, ಮೊಬೈಲ್ ಸಿಮ್ ಗ್ರಾಹಕರ ನೊಂದಣಿ ಸೇರಿದಂತೆ ಇತರೆ ಮಾಹಿತಿಯನ್ನು ಆಧರಿಸಿ ತನಿಖೆಗೆ ಇಳಿದಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸದರಿ ಆನ್‍ಲೈನ್ ವಂಚನೆ ಪ್ರಕರಣದಲ್ಲಿ ಆಕ್ಟೋಬರ್ 6 ರಂದು ಕೀನ್ಯಾ ದೇಶದ ಐವರು ಪ್ರಜೆಗಳನ್ನು ಬಂಧಿಸಲಾಗಿತ್ತು. ಇದೀಗ ನೈಜೀರಿಯಾ ದೇಶದ ಮೂವರು ಪ್ರಜೆಗಳನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಮೂವರೂ ಆರೋಪಿಗಳು ನೈಜೀರಿಯಾ ದೇಶದ ವಿವಿಧ ಪ್ರಾಂತ್ಯಗಳ ಪ್ರಜೆಗಳು. ಈ ಮೂವರು ಆರೋಪಿಗಳು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ನೆಲೆಸಿದ್ದರು. ಇದರಲ್ಲಿ ಬೆಂಗಳೂರು ಗ್ರಾಮೀಣ ಜಿಲ್ಲೆಯ ಆನೇಲಕ್ ತಲೂಕಿನ ಸಿ.ಕೆ.ಪಾಳ್ಯದಲ್ಲಿ ನೆಲೆಸಿದ್ದ ಎಡೋ ರಾಜ್ಯದ ಎಕಪೋಮ್ ಮೂಲದ 38 ವರ್ಷದ ಓಸೆಮುದಿಯಾಮೆನ್ ಉರ್ಫ ಪೀಟರ್ , ಕೆ.ಆರ್.ಪುರಂನ ಟಿ.ಸಿ.ಪಾಳ್ಯದಲ್ಲಿ ನೆಲೆಸಿದ್ದ ಅನಂಬಾರ್ ರಾಜ್ಯದ ಓಟೊಲೋ ಸಿಟಿಯ ಎನ್‍ನಿವಿ ಮೂಲದ 40 ವರ್ಷದ ಎಮೆಕಾ ಉರ್ಫ್ ಹ್ಯಾಪಿ, ನೀಲಸಂದ್ರದ ಮಾರುಕಟ್ಟೆ ರಸ್ತೆಯಲ್ಲಿ ನೆಲೆಸಿದ್ದ ಅಬಿಯಾ ರಾಜ್ಯದ ಎಫ್‍ಸಿಟಿ ಅಬುಜಾದ ಅಮುರಿಯಾ ಎನ್‍ಕೋರೊ ಮೂಲದ 42 ವರ್ಷದ ಓಬಿನ್ನಾ ಸ್ಟ್ಯಾನ್ಲಿ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ನೈಜೀರಿಯಾದ ಮೂವರು ಪ್ರಜೆಗಳಿಂದ ಅನ್‍ಲೈನ್ ಆರ್ಥಿಕ ವಂಚನೆ ಕೃತ್ಯಕ್ಕೆ ಬಳಸಿದ್ದ 21 ಮೊಬೈಲ್, 18 ಸಿಮ್ ಕಾರ್ಡ್‍ಗಳು, 1 ಲ್ಯಾಪ್ ಟಾಪ್, 1 ಡಾಂಗಾಲ್, 2 ಪೆನ್‍ಡ್ರೈವ್‍ಗಳು, 2 ಎಟಿಎಂ ಕಾರ್ಡ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ವಂಚನೆಯಿಂದ ಸಂಗ್ರಹಿಸಿ ಹಣವನ್ನು ಸಂರಕ್ಷಿಸುವ ಉದ್ದೇಶದಿಂದ ಬಂಧಿತರ ಬ್ಯಾಂಕ್ ಖಾತೆಗಳಿಂದ ಹಣ ಪಡೆಯದಂತೆ ಖಾತೆಗಳನ್ನು ಫ್ರೀಸ್ ಮಾಡಲಾಗಿದೆ.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.