![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Nov 13, 2023, 6:25 PM IST
ಮುಂಬಯಿ: ‘ಟೈಗರ್ 3’ ಚಿತ್ರ ಪ್ರದರ್ಶನದ ವೇಳೆ ಹಲವೆಡೆ ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿ ಸಂಭ್ರಮಿಸಿರುವ ಕುರಿತು ಬಾಲಿವುಡ್ ನಟ ಸಲ್ಮಾನ್ ಖಾನ್ ಕಳವಳ ವ್ಯಕ್ತ ಪಡಿಸಿದ್ದು, ಇತರರನ್ನು ಅಪಾಯಕ್ಕೆ ಸಿಲುಕಿಸಬೇಡಿ ಎಂದು ಮನವಿ ಮಾಡಿದ್ದಾರೆ.
‘ಟೈಗರ್ 3’ ಚಿತ್ರ ಪ್ರದರ್ಶನದ ಸಮಯದಲ್ಲಿ ಥಿಯೇಟರ್ಗಳಲ್ಲಿ ಪಟಾಕಿಗಳನ್ನು ಸಿಡಿಸಿರುವ ಬಗ್ಗೆ ನಾನು ಕೇಳುತ್ತಿದ್ದೇನೆ. ಇದು ಅಪಾಯಕಾರಿ. ನಮ್ಮನ್ನು ಮತ್ತು ಇತರರನ್ನು ಅಪಾಯಕ್ಕೆ ಸಿಲುಕಿಸದೆ ಚಿತ್ರವನ್ನು ಆನಂದಿಸೋಣ. ಸುರಕ್ಷಿತವಾಗಿರಿ. ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಲ್ಮಾನ್ ಖಾನ್, ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಪ್ರಧಾನ ಭೂಮಿಕೆಯ ‘ಟೈಗರ್ 3’ ಚಿತ್ರ ನ 12 ರಂದು ಬಹು ಭಾಷೆಗಳಲ್ಲಿ ತೆರೆ ಕಂಡಿದ್ದು ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
I’m hearing about fireworks inside theaters during Tiger3. This is dangerous. Let’s enjoy the film without putting ourselves and others at risk. Stay safe.
— Salman Khan (@BeingSalmanKhan) November 13, 2023
ಈ ನಡುವೆ ನಾಸಿಕ್ನ ಮಾಲೆಗಾಂವ್ನಲ್ಲಿರುವ ಮೋಹನ್ ಚಿತ್ರಮಂದಿರದಲ್ಲಿ ಅಭಿಮಾನಿಗಳು ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ಒಳಗೇ ಪಟಾಕಿ ಸಿಡಿಸಿ ದಾಂಧಲೆ ನಡೆಸಿದ್ದಾರೆ. ಈ ಸಂಬಂಧ ಚವಾನಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 112 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು. ಇಬ್ಬರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರೇಕ್ಷಕರು ಜೀವಭಯದಿಂದ ಥಿಯೇಟರ್ ಒಳಗಿಂದ ಹೊರ ಓಡಿ ಬಂದ ಪ್ರಸಂಗವೂ ನಡೆದಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.