Iron ಅದಿರಿಗೆ ಕಡಿಮೆ ಮೌಲ್ಯ: ಪ್ರಕರಣಕ್ಕೆ ಮರುಜೀವ

ರಾಯಧನ ನಿಗದಿಯಲ್ಲಿ ಕಳ್ಳಾಟ; ಪಿಎಸಿ ಮುಂದೆ ಕಡತಗಳ ರಾಶಿ

Team Udayavani, Nov 14, 2023, 7:15 AM IST

Iron ಅದಿರಿಗೆ ಕಡಿಮೆ ಮೌಲ್ಯ: ಪ್ರಕರಣಕ್ಕೆ ಮರುಜೀವIron ಅದಿರಿಗೆ ಕಡಿಮೆ ಮೌಲ್ಯ: ಪ್ರಕರಣಕ್ಕೆ ಮರುಜೀವ

ಬೆಂಗಳೂರು: ಬಳ್ಳಾರಿ ಗಣಿಧಣಿಗಳ ವಿರುದ್ಧ ಪಾದಯಾತ್ರೆ ನಡೆಸಿ 2013ರಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದ ಸಿದ್ದರಾಮಯ್ಯ ನವರ ಆಡಳಿತ ಕಾಲದಲ್ಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸರಕಾರದ ಕಣ್ಣಿಗೆ ಮಣ್ಣೆರಚಿ ರಾಯಧನ ನಿಗದಿಯಲ್ಲಿ ಕಳ್ಳಾಟವಾಡಿದ ಪ್ರಕರಣಕ್ಕೆ ಈಗ ಮರುಜೀವ ಸಿಗುವ ಸಾಧ್ಯತೆ ಇದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯ ಮುಂದೆ ಇದಕ್ಕೆ ಸಂಬಂಧಿಸಿದ ಕಡತಗಳ ರಾಶಿ ಈಗ ಮಂಡನೆಯಾಗಿದೆ.

ಮಾಜಿ ಸಚಿವ ಆರ್‌. ಅಶೋಕ್‌ ಅಧ್ಯಕ್ಷತೆಯ ಪಿಎಸಿಯ ಮುಂದೆ 2009-10, 2014-15ರಲ್ಲಿ ನಡೆದ ರಾಯಧನ ವಂಚನೆ ಪ್ರಕರಣದ ವಿಚಾರಣೆ ಮತ್ತೆ ಪ್ರಾರಂಭವಾಗಿದ್ದು, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸಮಿತಿ ಮುಂದಾದರೆ ಅಧಿಕಾರಿಗಳು ಹಾಗೂ ಗಣಿ ಗುತ್ತಿಗೆದಾರರಿಗೆ ಕಂಟಕ ಸೃಷ್ಟಿಯಾಗುವ ಸಾಧ್ಯತೆ ಇದೆ. ವಾಣಿಜ್ಯ ಮತ್ತು ಕೈಗಾರಿಕೆ, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಪಾತ್ರ ಈ ಹಗರಣದಲ್ಲಿ ಅದಿರು ನಿಕ್ಷೇಪದಂತೆ ಬಗೆದಷ್ಟು ಲಭಿಸುತ್ತಿದೆ. ಒಂದು ಮೂಲದ ಪ್ರಕಾರ ಸಮಿತಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ರಾಯಧನ ನಿರ್ಧಾರಣೆಯ ಸಂದರ್ಭದಲ್ಲಿ ಅಧಿಕಾರಿಗಳು ಗುತ್ತಿಗೆ ದಾರರ ಜತೆಗೆ ಶಾಮೀಲಾಗಿ ಕಡಿಮೆ ಹಣ ನಿಗದಿ ಮಾಡಿದ್ದಾರೆ.

ಇದರಿಂದ ನೇರವಾಗಿ ಬೊಕ್ಕಸಕ್ಕೆ ನಷ್ಟವಾದರೆ, ಕೆಲವು ಪ್ರಕರಣಗಳಲ್ಲಿ ನಿಗದಿ ಮಾಡಿದ್ದಕ್ಕಿಂತಲೂ ಕಡಿಮೆ ವಸೂಲಿ ಮಾಡಲಾಗಿದೆ. ಕರ್ನಾಟಕ ಉಗ್ರಾಣ ನಿಗಮವೂ ಈ ಹಗರಣದಲ್ಲಿ ಭಾಗಿಯಾಗಿದ್ದು, ರಾಯಧನ ಸಂದಾಯ ಸಂದರ್ಭದಲ್ಲಿ ತಪ್ಪೆಸಗಿದೆ. “ಬಳ್ಳಾರಿ ರಿಪಬ್ಲಿಕ್‌’ ಗಣಿಗಾರಿಕೆ ಸಂದರ್ಭದಲ್ಲಿ ನಡೆಸಿದ ಲೂಟಿಗಿಂತಲೂ ವಾಣಿಜ್ಯ ಮತ್ತು ಕೈಗಾರಿಕೆ, ಅರಣ್ಯ, ಗಣಿ ಭೂ ವಿಜ್ಞಾನ, ಉಗ್ರಾಣ ನಿಗಮದ ಅಧಿಕಾರಿಗಳ ಪರೋಕ್ಷ ಪಾತ್ರದಿಂದ ಸರಕಾರದ ಬೊಕ್ಕಸಕ್ಕೆ ಆದ ನಷ್ಟವೇ ಅಧಿಕವಾಗಿರಬಹುದು ಎಂದು ಪಿಎಸಿ ಅಚ್ಚರಿ ವ್ಯಕ್ತಪಡಿಸಿದೆ.

ಸ್ವಾಧೀನಪಡಿಸಿಕೊಂಡ ಕಬ್ಬಿಣದ ಅದಿರಿನ ಮೌಲ್ಯವನ್ನೇ ಕಡಿಮೆ ತೋರಿಸಿದ ಅಧಿಕಾರಿಗಳು ವಸೂಲಿ ಮಾಡುವಾಗಲೂ ಕಡಿಮೆಗೊಳಿಸುವ ಮೂಲಕ ತಪ್ಪೆಸಗಿದ್ದಾರೆ. ಈ ಪ್ರಕ್ರಿಯೆಯಲ್ಲಿ ಮೂರು ಉಪನಿರ್ದೇಶಕರ ಕಚೇರಿ ಭಾಗಿಯಾಗಿದ್ದು, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಕ್ರಿಯಾ ಯೋಜನೆ ಪಡೆಯದೆಯೇ ಗುತ್ತಿಗೆದಾರರಿಗೆ ಗಣಿಗಾರಿಕೆ ನಡೆಸಲು ಅವಕಾಶ ಕೊಡಲಾಗಿದೆ.

ಈ ಎಲ್ಲ ಸಂಗತಿಗಳು ಸಿಎಜಿ ವರದಿಯಲ್ಲೂ ಉಲ್ಲೇಖವಾಗಿವೆ. ಈ ಮಧ್ಯೆ ಸರಕಾರಗಳು ಬದಲಾಗಿವೆ. ಕುಮಾರಸ್ವಾಮಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದು, ಮರಳಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ. ಆದಾಗಿಯೂ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದವರ ವಿರುದ್ಧ ಯಾವ ಕ್ರಮವೂ ಆಗಿಲ್ಲ. ಲೆಕ್ಕಪತ್ರ ಸಮಿತಿಯಾದರೂ ಈ ವಿಚಾರಕ್ಕೆ ತಾರ್ಕಿಕ ಅಂತ್ಯ ನೀಡುವಂತೆ ಸರಕಾರಕ್ಕೆ ಶಿಫಾರಸು ನೀಡಬಲ್ಲುದೇ ಎಂಬ ಕುತೂಹಲ ಸೃಷ್ಟಿಯಾಗಿದೆ.

ಪ್ರಮುಖ ಆರೋಪಗಳೇನು ?
-ಅದಿರಿನ ಮೌಲ್ಯವನ್ನು ಕಡಿಮೆಯಾಗಿ ನಿರ್ಧರಿಸಿರುವುದು.
-ಕಡಿಮೆ ರಾಜಧನ ಸಂಗ್ರಹ
-ಮೂರು ಉಪನಿರ್ದೇಶಕರ ರಕ್ಷಣೆ
-ಐಬಿಎಂಗೆ ನೀಡಿದ ಲೆಕ್ಕದಲ್ಲಿ ವ್ಯತ್ಯಾಸ

ಐಬಿಎಂ ದಾಖಲೆಯಲ್ಲೂ ವ್ಯತ್ಯಯ
ಸಮಿತಿಗೆ ಸಲ್ಲಿಕೆಯಾಗಿರುವ ದಾಖಲೆಯ ಪೈಕಿ ಗಣಿಗಾರಿಕೆ ಕ್ರಿಯಾ ಯೋಜನೆಯಲ್ಲಿ ಮಂಜೂರಾತಿ ಹೊಂದಿ ಪರಿಮಾಣಕ್ಕಿಂತ ಅಧಿಕ ಪ್ರಮಾಣದಲ್ಲಿ ಖನಿಜಗಳನ್ನು ನಿಕ್ಷೇಪದಿಂದ ತೆಗೆಯಲಾಗಿದೆ. ಭಾರತೀಯ ಗಣಿ ಸಂಸ್ಥೆ (ಐಬಿಎಂ)ಗೆ ಗುತ್ತಿಗೆದಾರರು ವರದಿ ಮಾಡಿದ ಉತ್ಪಾದನ ಅಂಕಿಸಂಖ್ಯೆಗೂ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ರಾಯಧನ ನಿಗದಿ ಮಾಡುವ ಸಂದರ್ಭದಲ್ಲಿ ಪ್ರಸ್ತುತಪಡಿಸಿದ ಅಂಕಿಸಂಖ್ಯೆಗೂ ವ್ಯತ್ಯಾಸ ಕಂಡುಬಂದಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಡಿಮೆ ಪ್ರಮಾಣದಲ್ಲಿ ಉತ್ಪಾದನೆಯನ್ನು ತೋರಿಸಿದೆ. ಹೀಗಾಗಿ ಸರಕಾರದ ಬೊಕ್ಕಸಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ದಾಖಲೆಗಳು ಹೇಳುತ್ತಿವೆ.

-ರಾಘವೇಂದ್ರ ಭಟ್‌

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.