![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 15, 2023, 8:24 AM IST
ಕರಾಚಿ: ಪಾಕ್ ತಂಡ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಇತ್ತೀಚೆಗೆ ಬಾಲಿವುಡ್ ನಟಿ ಐಶ್ವರ್ಯಾ ರೈ ಅವರ ಕುರಿತಾಗಿ ನೀಡಿದ ಹೇಳಿಕೆಯೊಂದು ವಿವಾದಕ್ಕೀಡು ಮಾಡಿತ್ತು. ರಜಾಕ್ ವಿರುದ್ದ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ತನ್ನ ಮಾತಿಗೆ ಅವರು ಕ್ಷಮೆಯಾಚಿಸಿದ್ದಾರೆ.
ಹೇಳಿದ್ದೇನು?:
ಪಾಕಿಸ್ತಾನ ವಿಶ್ವಕಪ್ ಟೂರ್ನಿಯಲ್ಲಿ ನೀಡಿದ ನಿರಾಶದಾಯಕ ಪ್ರದರ್ಶನದ ಬಗ್ಗೆ ಪ್ರಶ್ನೆ ಕೇಳಿದಾಗ, ಇದಕ್ಕೆ ಉತ್ತರವಾಗಿ ರಜಾಕ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟೀಕಿಸುವ ಭರದಲ್ಲಿ ಉದಾಹರಣೆಯಾಗಿ ಸಂಬಂಧವೇ ಇಲ್ಲದ ಐಶ್ವರ್ಯಾ ರೈ ಅವರ ಹೆಸರನ್ನು ತಂದು ವಿವಾಕ್ಕೀಡಾಗಿದ್ದರು.
“ಯೂನಿಸ್ ಖಾನ್ ನಾಯಕನಾಗಿ ಉತ್ತಮ ಉದ್ದೇಶವನ್ನು ಹೊಂದಿದ್ದರು ಮತ್ತು ಇದು ನನಗೆ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ನೀಡಿತ್ತು. ನಾವೆಲ್ಲ ಪಾಕಿಸ್ತಾನ ತಂಡದ ಉದ್ದೇಶದ ಬಗ್ಗೆ ಮಾತನಾಡುತ್ತೇವೆ. ವಾಸ್ತವವಾಗಿ ನಾವು ಪಾಕಿಸ್ತಾನದಲ್ಲಿ ಆಟಗಾರರನ್ನು ಅಭಿವೃದ್ಧಿಪಡಿಸುವ ಮತ್ತು ಬೆಳೆಸುವ ಉತ್ತಮ ಉದ್ದೇಶವನ್ನು ಹೊಂದಿಲ್ಲ. ಒಂದು ವೇಳೆ ನಾನು ಐಶ್ವರ್ಯಾ ರೈಯನ್ನು ಮದುವೆಯಾಗುವುದರಿಂದ ಸನ್ನಡತೆಯ ಮಕ್ಕಳು ಹುಟ್ಟುತ್ತವೆ ಎಂದು ನೀವು ಭಾವಿಸಿದರೆ ಅದು ಎಂದಿಗೂ ಸಂಭವಿಸುವುದಿಲ್ಲ”ಎಂದಿದ್ದರು.
ಈ ಮಾತು ಅನೇಕರನ್ನು ಕೆರಳಿಸಿತ್ತು. ಸ್ವತಃ ಪಾಕ್ ತಂಡ ಮಾಜಿ ವೇಗಿ ಶೋಯೆಬ್ ಅಖ್ತರ್ ಕೂಡ “ಯಾವ ಹೆಣ್ಣಿಗೂ ಹೀಗೆ ಅಗೌರವ ನೀಡಬಾರದು” ಎಂದು ರಜಾಕ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಇತ್ತ ಕೆಲವರು ಇದೊಂದು ಥರ್ಡ್ ಕ್ಲಾಸ್ ಹೇಳಿಕೆಯೆಂದು ಟೀಕಿಸಿದ್ದರು.
ಇದೀಗ ಅಬ್ದುಲ್ ರಜಾಕ್ ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ. ಟಿವಿಯೊಂದರಲ್ಲಿ ಮಾತನಾಡಿದ ಅವರು,“ನಿನ್ನೆ, ನಾವು ಕ್ರಿಕೆಟ್ ಕೋಚಿಂಗ್ ಮತ್ತು ಉದ್ದೇಶಗಳ ಬಗ್ಗೆ ಮಾತನಾಡುತ್ತಿದ್ದೆವು. ಆಗ ನಾನು ಬಾಯಿ ತಪ್ಪಿ ಐಶ್ವರ್ಯಾ ರೈ ಹೆಸರನ್ನು ತೆಗೆದುಕೊಂಡೆ. ನಾನು ಅವರ ಬಳಿ ವೈಯಕ್ತಿಕವಾಗಿ ಕ್ಷಮೆಯಾಚಿಸುತ್ತೇನೆ. ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶ ನನಗಿರಲಿಲ್ಲ” ಎಂದಿದ್ದಾರೆ.
ಹಲವಾರು ಮಾಜಿ ಸಹ ಆಟಗಾರರು ಮತ್ತು ಕ್ರಿಕೆಟ್ ಸಮುದಾಯದ ಪ್ರಮುಖ ವ್ಯಕ್ತಿಗಳು ರಜಾಕ್ ಅವರ ಕಾಮೆಂಟ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ನಂತರ ಅವರು ಕ್ಷಮೆಯಾಚಿಸಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.