![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 16, 2023, 1:55 PM IST
ತೀರ್ಥಹಳ್ಳಿ : ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕರಾದ ಯತೀಂದ್ರ ಅವರು ಮಾತನಾಡಿದ ವಿಡಿಯೋ ವೈರಲ್ ಆಗಿರೋದನ್ನ ಎಲ್ಲರೂ ನೋಡುತ್ತಿದ್ದೇವೆ. ಇದರ ಬಗ್ಗೆ ತನಿಖೆ ಆಗಲೇಬೇಕು ಅವರು ಏನು ಮಾತನಾಡುತ್ತಿದ್ದಾರೆ ಯಾರಿಗೆ ನಿರ್ದೇಶನ ನೀಡುತ್ತಿದ್ದಾರೆ. ತಂದೆ ಸಿದ್ದರಾಮಯ್ಯ ಅವರಿಗೆ ಅಧಿಕಾರದ ಹಕ್ಕಿದೆ. ಆದರೆ ಅವರ ಮಗ ಮೂಗು ತೋರಿಸುತ್ತಿರುವುದು ತಪ್ಪು ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ತೀರ್ಥಹಳ್ಳಿಯಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಾತನಾಡಿರುವ ಅವರು ಈ ವಿಚಾರ ನಿಜವಾಗಲೂ ಕೂಡ ರಾಜ್ಯದ ಜನರ ಅರವಿಗೆ ಬರಬೇಕಾಗಿದೆ. ಈ ಬಗ್ಗೆ ತನಿಖೆಯನ್ನು ನಡೆಸಬೇಕು ಹಾಗೆ ಸಿದ್ದರಾಮಯ್ಯ ಅವರು ಜನರಿಗೆ ಏನಾಗಿದೆ ಎಂಬುದರ ಬಗ್ಗೆ ತಿಳಿಸಿಕೊಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಆರು ಪೈಸದ ಅಭಿವೃದ್ಧಿ ಮಾಡುವುದಕ್ಕೆ ಸಿದ್ದರಾಮಯ್ಯ ಅವರು ಹಣ ನೀಡಿಲ್ಲ. ಆದರೆ ಆರು ತಿಂಗಳಲ್ಲಿ ಇಷ್ಟು ಕೆಟ್ಟ ಹೆಸರು ಪಡೆದುಕೊಂಡ ಸರ್ಕಾರ ಮತ್ತೊಂದಿಲ್ಲ ಎಂದಿದ್ದಾರೆ.
135 ಸ್ಥಾನ ಬಂದಿದೆ ಎಂಬ ಕಾರಣಕ್ಕೆ ಈ ರೀತಿ ಮಾಡೋದು ಸರಿಯಲ್ಲ. ತಾವು ಏನು ಮಾಡಿದರು ನಡೆಯುತ್ತದೆ ಎಂದುಕೊಂಡರೆ ಅದು ಖಂಡಿತವಾಗಲೂ ಆಗೋದಿಲ್ಲ. ಬಿಜೆಪಿ ಸರ್ಕಾರ ಇದ್ದಾಗ 40 ಪರ್ಸೆಂಟ್ ಸರ್ಕಾರ ಎಂದು ಬೊಬ್ಬೆ ಹೊಡೆದು ಈಗ ಇವರು ಮಾಡುತ್ತಿರುವುದು ಏನು? ತೀವ್ರವಾದ ಭ್ರಷ್ಟಾಚಾರ ಹಾಗೆ ಎಲ್ಲದರಲ್ಲೂ ಮೂಗು ತರಿಸುವುದು ಆಡಳಿತ ವೈಖರಿಯ ಇಲ್ಲದ ಸರ್ಕಾರ. ಇದು ನಿಜವಾದರೆ ಸರ್ಕಾರ ತಲೆತಗ್ಗಿಸುವಂತಹ ವಿಚಾರ ಎಂದು ಹೇಳಿದ್ದಾರೆ.
ಇದನ್ನೂ ಓದಿ: Kustagi: ಪಟ್ಟಣ ವ್ಯಾಪ್ತಿಯಲ್ಲಿ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.