ಒತ್ತುವರಿ ಜಾಗದಲ್ಲಿ ಎಚ್ಡಿಕೆ ತೋಟದ ಮನೆ
Team Udayavani, Nov 16, 2023, 11:07 PM IST
ಬೆಂಗಳೂರು: ಒತ್ತುವರಿ ಜಾಗದಲ್ಲಿ ಬಿಡದಿ ತೋಟದ ಮನೆ ನಿರ್ಮಾಣ ಪ್ರಕರಣ ಸಂಬಂಧ ಮಾಜಿ ಸಿಎಂ ಎಂಬ ಯಾವ ಮುಲಾಜನ್ನೂ ಕುಮಾರಸ್ವಾಮಿ ಅವರಿಗೆ ತೋರಿಸುವು ದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಡದಿ ಜಮೀನಿನ ವಿಚಾರದಲ್ಲಿ ನ್ಯಾಯಾಲಯದ ಆದೇಶ ಇದೆ. ಅದನ್ನು ನಮ್ಮ ಸರಕಾರ ಪಾಲಿಸಲಿದೆ. ಏನು ಮಾಡಬೇಕೋ ಅದನ್ನು ಮಾಡುತ್ತದೆ ಎಂದು ಹೇಳಿದರು.
ಅಕ್ರಮ ವಿದ್ಯುತ್ ಸಂಪರ್ಕದ ವಿಷಯಕ್ಕೂ ಆಸ್ತಿ ಏರಿಕೆ ವಿಷಯಕ್ಕೂ ಸಂಬಂಧವಿರಲಿಲ್ಲ. ಆಸ್ತಿ ತನಿಖೆಗೆ ಯಾರ ವಿರೋಧವೂ ಇಲ್ಲ. ವಿಷಯಾಂತರ ಮಾಡಲು ಆಸ್ತಿ ವಿಷಯವನ್ನು ಮುಂದಿಟ್ಟಿದ್ದಾರೆ. ಯಾರ ಆಸ್ತಿ ಅವೈಜ್ಞಾನಿಕವಾಗಿ ಏರಿಕೆಯಾಗಿದೆಯೋ ತನಿಖೆ ಆಗಲಿ. ಕೇಂದ್ರದ ಬಳಿ ದೊಡ್ಡ ತನಿಖಾ ಸಂಸ್ಥೆಗಳಿವೆ. ಪ್ರಧಾನಿಗಳು ನಮಗೇನೂ ಹತ್ತಿರದಲ್ಲಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.
ದಾಸನಪುರ ಹೋಬಳಿಯಲ್ಲಿ ಮಾಕಳಿ ಕೆರೆ ನುಂಗಿರುವ ಸಚಿವರು
ಕೃಷಿ ಸಚಿವ ಚಲುವರಾಯಸ್ವಾಮಿ ತಮ್ಮ ವಿರುದ್ಧ ಮಾಡಿದ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ನನ್ನ ಆಸ್ತಿ ಬಗ್ಗೆ ತನಿಖೆ ಮಾಡಬೇಕು ಎಂದು ಒಬ್ಬ ಸಚಿವರು ಅಪ್ಪಣೆ ಕೊಡಿಸಿದ್ದಾರೆ. ಆದರೆ ಅವರು ಒಂದು ಕೆರೆಯನ್ನೇ ನುಂಗಿ ನೀರು ಕುಡಿದಿದ್ದಾರೆ. ಅದಕ್ಕೆ ಯಾವ ತನಿಖೆ ನಡೆಸುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಮಂಡ್ಯ ಜಿಲ್ಲೆಯ ಮಹಾ ನಾಯಕರೊಬ್ಬರು ದಾಸನಪುರ ಹೋಬಳಿಯ ಸರ್ವೇ ನಂಬರ್ 13ರಲ್ಲಿರುವ ಮಾಕಳಿ ಕೆರೆಯನ್ನೇ ಸ್ವಾಹ ಮಾಡಿ¨ªಾರೆ. ಅವರ ಬಗ್ಗೆಯೂ ತನಿಖೆ ಮಾಡಿಸಬೇಕು ಅಲ್ಲವೇ ಎಂದು ಪ್ರಶ್ನಿಸಿದರು.
ನಾನು ಹೇಗೆ ರಾಜಕೀಯ ಮಾಡಿದೆ, ಯಾವ ರೀತಿ ನಡೆದುಕೊಂಡಿದ್ದೇನೆ ಎನ್ನುವುದನ್ನು ರಾಜ್ಯದ ಜನರು ನೋಡಿದ್ದಾರೆ. ಇವರು ಏನು ಎನ್ನುವುದು ನಾಡಿನ ಜನರಿಗೆ ಗೊತ್ತಿದೆ. ಮಾಕಳಿ ಗ್ರಾಮದ ಆ ಮೂರು ಎಕರೆ ಮೂವತ್ತು ಗುಂಟೆ ನುಂಗಿದ್ದು ಯಾರು? ನಾನು ಕೆರೆ ನುಂಗುವ ಕೆಲಸ ಮಾಡಿಲ್ಲ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.