Agri: ಸಂಕಷ್ಟದಲ್ಲಿ “ಕೃಷಿ ಯಂತ್ರಧಾರೆ” ಯೋಜನೆ


Team Udayavani, Nov 17, 2023, 1:19 AM IST

agri tracter

ಕೋಟ: ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಕಡಿಮೆ ಬಾಡಿಗೆಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಒದ ಗಿಸಿ ಖಾಸಗಿ ಕೃಷಿ ಯಂತ್ರಗಳ ಬಾಡಿಗೆ ನಿಯಂತ್ರಿಸಲು 2014-15 ರಲ್ಲಿ ರಾಜ್ಯ ಸರಕಾರ ಜಾರಿಗೆ ತಂದ ಕೃಷಿ ಯಂತ್ರ ಧಾರೆ ಯೋಜನೆ ಸಂಕಷ್ಟಕ್ಕೆ ಸಿಲುಕಿದೆ.

ಹಲವು ಯಂತ್ರ ಕೇಂದ್ರಗಳ ಗುತ್ತಿಗೆ ಅವಧಿ ಮುಗಿದು ವರ್ಷ ಕಳೆದರೂ ನವೀಕರಣವಾಗಿಲ್ಲ. ಜತೆಗೆ ಹೊಸ ಕಂಪೆನಿಗಳು ಗುತ್ತಿಗೆಗೆ ಆಸಕ್ತಿ ತೋರುತ್ತಿಲ್ಲ. ಕೃಷಿ ಇಲಾಖೆಯಡಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಯಂತ್ರಧಾರೆ ಕೇಂದ್ರಗಳನ್ನು ನಡೆಸು ತ್ತಿದ್ದು, ಉಡುಪಿ ಜಿಲ್ಲೆಯಲ್ಲಿ 7 ರ ಪೈಕಿ 4 ಕೇಂದ್ರಗಳ ಗುತ್ತಿಗೆ ಅವಧಿ ಮುಗಿ ದಿದೆ. ದಕ್ಷಿಣ ಕನ್ನಡದ 15 ರಲ್ಲಿ 6 ರ ಗುತ್ತಿಗೆ ಮುಗಿದಿದೆ. ಉಳಿದವೂ ಜನವರಿಯಲ್ಲಿ ಮುಗಿಸಲಿವೆ. ಅದೇ ರೀತಿ ರಾಜ್ಯದ 490 ಹೋಬಳಿಗಳಲ್ಲಿನ 696 ಕೇಂದ್ರದಲ್ಲಿ ಬಹುಪಾಲು ಸ್ಥಗಿ ತಗೊಂಡಿವೆ. ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ನಿರ್ವಹಿಸುತ್ತಿರುವ 25 ಜಿಲ್ಲೆಗಳ 164 ಕೇಂದ್ರಗಳು ಮಾತ್ರ ಚಾಲನೆಯಲ್ಲಿವೆ. ಜನವರಿವರೆಗೆ ಇವುಗಳ ಅವಧಿ.

ಗುತ್ತಿಗೆಗೆ ನಿರುತ್ಸಾಹ ?
ಸರಕಾರದ ಶೇ. 70 ಹಾಗೂ ಗುತ್ತಿಗೆ ವಹಿಸಿಕೊಳ್ಳುವ ಕಂಪೆನಿ ಶೇ. 30 ಅನುದಾನದಲ್ಲಿ ಯಂತ್ರಗಳನ್ನು ಖರೀದಿಸಿ ಕೇಂದ್ರಗಳನ್ನು ಆರಂಭಿಸ ಲಾಗಿತ್ತು. ಭತ್ತ ಕಟಾವು ಯಂತ್ರ, ಟ್ರಾಕ್ಟರ್‌, ಪವರ್‌ ಟಿಲ್ಲರ್‌, ರೋಟರಿ ಟಿಲ್ಲರ್‌, ರೋಟಾವೇಟರ್‌, ಡಿಸ್ಕ್ ನೇಗಿಲು ಸೇರಿದಂತೆ 44 ಬಗೆಯ ಯಂತ್ರೋಪಕರಣಗಳು ಲಭ್ಯವಿ ದ್ದವು. ಸರಕಾರ ಗೊತ್ತುಪಡಿಸಿದ ಬಾಡಿಗೆಗೆ ಈ ಕೇಂದ್ರಗಳು ರೈತರಿಗೆ ಸೇವೆ ನೀಡಬೇಕಿತ್ತು. ಆರಂಭದಲ್ಲಿ ಇದರ ನಿರ್ವಹಣೆಗೆ ಖಾಸಗಿ ಸಂಸ್ಥೆಗಳು ಉತ್ಸಾಹ ತೋರಿದ್ದವು.

ಆದರೆ ಕಡಿಮೆ ಬಾಡಿಗೆ, ಡೀಸೆಲ್‌ ದುಬಾರಿ, ಚಾಲಕರು, ಸಿಬಂದಿ ಕೊರತೆ, ನಿರ್ವಹಣೆಗೆ ಸರಕಾರ ಆಸಕ್ತಿ ವಹಿಸುತ್ತಿಲ್ಲ. ಹೀಗಾಗಿ ಅವಧಿ ಮುಗಿದಿದ್ದರೂ ಇದುವರೆಗೆ ಗುತ್ತಿಗೆ ನವೀಕರಣ ಅಥವಾ ಬದಲಿ ಸಂಸ್ಥೆಗೆ ಹೊಣೆ ವಹಿಸುವ ಕೆಲಸವಾಗಿಲ್ಲ. ಹಲವೆಡೆ ಯಂತ್ರಗಳು ತುಕ್ಕು ಹಿಡಿಯುತ್ತಿವೆ. ಸರಕಾರ ಶೇ. 70 ಅನುದಾನ ನೀಡಿದ್ದು, ಕಂಪೆನಿ ಯಂತ್ರಗಳನ್ನು ಇಲಾಖೆಗೆ ವಾಪಸ್‌ ನೀಡಬೇಕಿದ್ದು ಈ ಪ್ರಕ್ರಿಯೆಯೂ ಸರಿಯಾಗಿ ನಡೆಯುತ್ತಿಲ್ಲ. ಉಡುಪಿ, ದ.ಕ.ದಲ್ಲಿ ಹಿಂದಿನ ಗುತ್ತಿಗೆ ಸಂಸ್ಥೆಗಳೇ ಹೊಸ ವ್ಯವಸ್ಥೆ ಬರುವ ತನಕ ಮುಂದುವರಿಯಲು ಮೌಖೀಕವಾಗಿ ಸೂಚಿಸಲಾಗಿದೆ. ಆದರೆ ಒಪ್ಪಂದವಿ ಲ್ಲದ ಕಾರಣ ಸಮರ್ಪಕ ರೀತಿಯಲ್ಲಿ ಸಾಗದಿರುವುದು ರೈತರಿಗೆ ಸಮಸ್ಯೆ ಸೃಷ್ಟಿಸಿದೆ.

ಯಂತ್ರಧಾರೆಯ ಅಗತ್ಯ

ಕೇಂದ್ರಗಳಲ್ಲಿ ಲಭ್ಯವಿರುವ ಯಂತ್ರ ಗಳಿಗೆ ಕಡಿಮೆ ಬಾಡಿಗೆ ಇರುವು ದರಿಂದ ಖಾಸಗಿ ಯಂತ್ರಗಳ ದರ ಸಮರ, ರೈತರ ಶೋಷಣೆ ತಡೆಯಲು ಅವಕಾಶವಿದೆ. ಉದಾಹರಣೆಗೆ ಕರಾವಳಿವಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಖಾಸಗಿಯಲ್ಲಿ 2,200 – 2,300 ರೂ. ತನಕ ಬಾಡಿಗೆ ಇದ್ದರೆ ಯಂತ್ರಧಾರೆಯಲ್ಲಿ 1,800ರಿಂದ 2,000 ರೂ. ನೊಳಗೆ ಬಾಡಿಗೆ ಇದೆ.

ಕೃಷಿ ಯಂತ್ರಧಾರೆ ಕೇಂದ್ರಗಳಿಂದ ಸಾಕಷ್ಟು ಅನುಕೂಲವಿದೆ. ಇದರ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಎನ್‌. ಚೆಲುವರಾಯಸ್ವಾಮಿ, ರಾಜ್ಯ ಕೃಷಿ ಸಚಿವ

 ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.