Mangaluru ಸಹಕಾರಿ ಸಂಘದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು
Team Udayavani, Nov 17, 2023, 8:44 PM IST
ಮಂಗಳೂರು: ನಗರದ ಪಂಪ್ವೆಲ್ ಬಳಿ ಇರುವ ನವಯುಗ ಕ್ರೆಡಿಟ್ ಸೌಹಾರ್ದ ಸಹಕಾರದಿಂದ ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಸಂಘದ ಮ್ಯಾನೇಜರ್ ಹಾಗೂ ಅಭಿವೃದ್ಧಿ ವ್ಯವಸ್ಥಾಪಕರು ಗುರುವಾರ ಸಂಜೆ 5.45ರ ಸುಮಾರಿಗೆ ಚಿನ್ನಾಭರಣ ಮತ್ತು ನಗದು ಹಣವನ್ನು ಲಾಕರ್ ರೂಮ್ನ ತಿಜೋರಿಯಲ್ಲಿಟ್ಟು ಲಾಕ್ ಮಾಡಿ ಕೀಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಕೊಠಡಿಯ ಮೇಜಿನ ಡ್ರಾವರ್ನಲ್ಲಿಟ್ಟು ಶಟರ್ ಬಂದ್ ಮಾಡಿ ಹೋಗಿದ್ದರು.
ಶುಕ್ರವಾರ ಬೆಳಗ್ಗೆ 9.40ಕ್ಕೆ ಸಂಘದ ಅಧ್ಯಕ್ಷರು ಮತ್ತು ಸಿಬಂದಿ ಬಂದು ಬಾಗಿಲು ತೆರೆದು ನೋಡಿದಾಗ ಯಾರೋ ಕಳ್ಳರು ಕಿಟಕಿಯ ಸರಳುಗಳನ್ನು ತುಂಡು ಮಾಡಿ ಡ್ರಾವರ್ನಲ್ಲಿದ್ದ ಕೀಗಳ ಸಹಾಯದಿಂದ ತಿಜೋರಿಯ ಬಾಗಿಲು ತೆರೆದು 7 ಲ.ರೂ. ಮೌಲ್ಯದ ಚಿನ್ನಾಭರಣ ಮತ್ತು 57,832 ರೂ. ಕಳವು ಮಾಡಿರುವುದು ಗೊತ್ತಾಗಿದೆ ಎಂದು ಕಂಕನಾಡಿ ನಗರ ಠಾಣಾ ಪೊಲೀಸರಿಗೆ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.