Politics: ಕರೆಂಟ್ ವಾರ್: ನಿಮ್ಮಷ್ಟು ದೊಡ್ಡ ಕಳ್ಳ ನಾನಲ್ಲ- ಎಚ್ಡಿಕೆ
- 68 ಸಾವಿರ ರೂ. ದಂಡ ಪಾವತಿಸಿದ ಮಾಜಿ ಸಿಎಂ- 6 ತಿಂಗಳು ಲುಲು ಮಾಲ್ಗೆ ಬಳಕೆ ಮಾಡಿದ ವಿದ್ಯುತ್ ಎಲ್ಲಿಂದ ಬಂತು ಎಂದು ಪ್ರಶ್ನೆ
Team Udayavani, Nov 17, 2023, 9:51 PM IST
ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ “ಟಾರ್ಗೆಟ್ ಕಾಂಗ್ರೆಸ್” ಮುಂದುವರಿದಿದ್ದು, ಗುರುವಾರವಷ್ಟೇ ಸಿಎಂ ಪುತ್ರ ಯತೀಂದ್ರ ಅವರ ವಿಡಿಯೋ ಆಧರಿಸಿ ಸಿದ್ದರಾಮಯ್ಯ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ್ದ ಅವರು, ಈಗ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕರೆಂಟ್ ಬಾಣ ಬಿಟ್ಟಿದ್ದಾರೆ.
ಅಲ್ಲದೆ “ನಾನು ದಂಡ ಕಟ್ಟಿದ್ದೇನೆ. ಈಗಲಾದರೂ ಕರೆಂಟ್ ಕಳ್ಳ ಅನ್ನೋದು ಬಿಡಿ. ನಾನು ನಿಮ್ಮಷ್ಟು ದೊಡ್ಡ ಕಳ್ಳ ಅಲ್ಲ’ ಅಂತ ಹೇಳಿರುವ ಕುಮಾರಸ್ವಾಮಿ, ನನ್ನನ್ನು ಕರೆಂಟ್ ಕಳ್ಳ ಅನ್ನುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಕದಲ್ಲಿಯೇ ಕೂರುವ ಮಹಾನ್ ಕಳ್ಳನ ಕಡೆಯೂ ನೋಡಬೇಕು. ಅಷ್ಟೇ ಅಲ್ಲ ಲುಲು ಮಾಲ್ನ ವಿದ್ಯುತ್ ಬಳಕೆ ವಿಚಾರ ಪ್ರಸ್ತಾಪಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ರನ್ನು ಕಟಕಟೆಯಲ್ಲಿ ನಿಲ್ಲಿಸಿದ್ದಾರೆ.
ದೀಪಾವಳಿ ವೇಳೆ ನಮ್ಮನೆ ಹುಡುಗರು ದೀಪಾಲಂಕಾರ ಮಾಡುವಾಗ ಅಚಾತುರ್ಯ ಆಗಿತ್ತು. ಇದಕ್ಕೆ ನಾನೇ ವಿಷಾದ ವ್ಯಕ್ತಪಡಿಸಿ ದಂಡ ಪಾವತಿಸುವುದಾಗಿ ಹೇಳಿದ್ದೆ. ನನ್ನ ಮೇಲಿನ ವಿದ್ಯುತ್ ಕಳ್ಳತನ ಆರೋಪಕ್ಕೆ 68 ಸಾವಿರ ರೂ. ದಂಡ ಕಟ್ಟಿದ್ದೇನೆ. ಆದರೆ, ಆರಂಭಕ್ಕೂ ಮುನ್ನ 6 ತಿಂಗಳು ವಿದ್ಯುತ್ ಬಿಲ್ ಕಟ್ಟದ ಲುಲು ಮಾಲ್ ಕತೆ ಏನು ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ನನ್ನ “ಗುಲಗಂಜಿ’ ವಿಚಾರವನ್ನು ಬೆಟ್ಟದಷ್ಟು ಮಾಡಲಾಗಿದೆ ಎಂಬ ಧಾಟಿಯಲ್ಲಿ ಮಾತನಾಡಿದ್ದಾರೆ.
ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದಂಡ ಪಾವತಿಸಿದ ರಸೀದಿ ಪ್ರದರ್ಶಿಸಿದ ಕುಮಾರಸ್ವಾಮಿ, ಲುಲು ಮಾಲ್ ಆರಂಭಕ್ಕೆ ಮೊದಲು 6 ತಿಂಗಳು ವಿದ್ಯುತ್ ಬಿಲ್ ಕಟ್ಟಲು ಬಿಟ್ಟಿಲ್ಲ. ಹಾಗಾದರೆ, ಅವರು ಎಲ್ಲಿಂದ ವಿದ್ಯುತ್ ಬಳಸಿದರು. ಆಕಾಶದಿಂದ ವಿದ್ಯುತ್ ಉತ್ಪಾದನೆ ಮಾಡಿದ್ರಾ? ಇವರ ಯೋಗ್ಯತೆಗೆ ನನ್ನನ್ನು ಕಳ್ಳ ಕಳ್ಳ ಅಂತಾರೆ ಎಂದರು.
ಲುಲು ಮಾಲ್ ಆರಂಭಕ್ಕೂ ಮುನ್ನ 6 ತಿಂಗಳು ಬಳಕೆ ಮಾಡಿದ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂ ವಿಚಕ್ಷಣ ದಳ ಮಾಹಿತಿ ನೀಡುತ್ತಾ? ಅದರ ಮಾಹಿತಿ ಬಹಿರಂಗ ಮಾಡುತ್ತಾರಾ? ಲುಲುಗೆ ಬಳಸಿದ್ದ ಬಿಲ್ಗೆ ದಂಡ ಕಟ್ಟಿದ್ದಾರಾ? ಮಾಲ್ ಕೆಳಗಡೆ ಹೈ ಟೆನ್ಷನ್ ವೈರ್ ಅಂಡರ್ ಗ್ರೌಂಡ್ನಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಅದಕ್ಕೆ ಅವರು ಎಷ್ಟು ಹಣ ಕಟ್ಟಿದ್ದಾರೆ? ಸುಜಾತ ಟಾಕೀಸ್ ಮುಂದೆ ಇದ್ದ ಹೈ ಟೆನ್ಷನ್ ವೈರ್ ಹೇಗೆ ಅಂಡರ್ ಗ್ರೌಂಡ್ಗೆ ಹೋಯಿತು? ಇದನ್ನು ಜನರಿಗಾಗಿ ಮಾಡಿದರಾ ಅಥವಾ ಸ್ವಾರ್ಥಕ್ಕಾಗಿ ಮಾಡಿದರಾ ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಈ ಬಗ್ಗೆ ತನಿಖೆ ಮಾಡಿಸಿ ಎಂದು ಆಗ್ರಹಿಸಿದರು.
ಬೆಸ್ಕಾಂ ವಿರುದ್ಧ ಎಚ್ಡಿಕೆ ಕಿಡಿ
ಬೆಸ್ಕಾಂ ವಿಧಿಸಿರುವ ದಂಡದ ಮೊತ್ತ ಲೋಪದಿಂದ ಕೂಡಿದ್ದು ಈ ಬಗ್ಗೆ ತಮಗೆ ಸ್ಪಷ್ಟನೆ ಕೊಡಬೇಕು ಎಂದು ಇಂಧನ ಇಲಾಖೆಯನ್ನು ಒತ್ತಾಯಿಸಿರುವ ಕುಮಾರಸ್ವಾಮಿ, ಜೆ.ಪಿ.ನಗರದ ತಮ್ಮ ಮನೆಗೆ ಕಂಬದಿಂದ ವಿದ್ಯುತ್ ಪಡೆದಿರುವುದಕ್ಕೆ ಬೆಸ್ಕಾಂ ವಿಚಕ್ಷಣಾ ದಳ ವಿಧಿಸಿರುವ ದಂಡವೇ ಅಕ್ರಮ ಎಂದು ಆರೋಪ ಮಾಡಿದ್ದಾರೆ. ನನ್ನ ಮನೆಗೆ ನಾನು 33ಕೆವಿ ಅನುಮತಿ ಪಡೆದಿದ್ದೇನೆ. ವಿದ್ಯುತ್ ಕಳವು ಆರೋಪದಲ್ಲಿ 2.5 ಕೆವಿ ವಿದ್ಯುತ್ ಪಡೆಯಲಾಗಿದೆ ಎಂದು ಬೆಸ್ಕಾಂ ಹೇಳಿದೆ. ಅಸಲಿಗೆ 1 ಕೆವಿ ವಿದ್ಯುತ್ ಮಾತ್ರ ನಮ್ಮ ಮನೆಯ ಲೈಟಿಂಗ್ಗೆ ಬಳಕೆ ಮಾಡಲಾಗಿತ್ತು. ಆದರೂ ಬೆಸ್ಕಾಂ ಅಧಿಕಾರಿಗಳು 2.5 ಕೆವಿ ಅಂತ ಸುಳ್ಳು ಲೆಕ್ಕ ತೋರಿಸಿದ್ದಾರೆ. ಯಾರದ್ದೋ ಒತ್ತಡಕ್ಕೆ ಮಣಿದು ಹೀಗೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.