Agri: ಕೃಷಿ ಭಾಗ್ಯ ಯೋಜನೆಗೆ ಸರಕಾರದಿಂದ ಮರುಚಾಲನೆ
106 ತಾಲೂಕುಗಳಲ್ಲಿ ಜಾರಿ ಮಳೆಯಾಶ್ರಿತ ಕೃಷಿ ನೀತಿ-2014ರ ಅಡಿ ಅನುಷ್ಠಾನ
Team Udayavani, Nov 17, 2023, 11:45 PM IST
ಬೆಂಗಳೂರು: ರಾಜ್ಯದಲ್ಲಿ ಕೃಷಿ ಭಾಗ್ಯ ಯೋಜ ನೆಯನ್ನು ಮರುಜಾರಿಗೊಳಿಸಿ ಸರಕಾರ ಆದೇಶಿಸಿದ್ದು, ಮಳೆಯಾಶ್ರಿತ ಪ್ರದೇಶಗಳಲ್ಲಿ ಅನುಷ್ಠಾನಕ್ಕೆ ನಿರ್ಧರಿಸಿದೆ.
ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆಯನ್ನು ಆ ಬಳಿಕದ ಸರಕಾರವು ಕೇಂದ್ರ ಸರಕಾರದ ಯೋಜನೆಯೊಂದಿಗೆ ವಿಲೀನಗೊಳಿಸಿತ್ತು. ಇದನ್ನು ಪ್ರತ್ಯೇಕವಾಗಿ ಮರುಜಾರಿ ಮಾಡುವುದಾಗಿ 2023-24ನೇ ಸಾಲಿನ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜಿಲ್ಲಾಧಿಕಾರಿ ಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿಗಳ ಸಭೆಯಲ್ಲಿಯೂ ಕೃಷಿ ಭಾಗ್ಯ ಮರು ಜಾರಿಗೆ ಬೇಡಿಕೆ ಇಡಲಾಗಿತ್ತು. ಪ್ರಸ್ತಾವನೆ ಸಲ್ಲಿಕೆಯಾದ ಕೂಡಲೇ ಆರ್ಥಿಕ ಮತ್ತು ಯೋಜನಾ ಇಲಾಖೆಗಳ ಸಹಮತಿ ಪಡೆದು ಕಳೆದ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಕೂಡ ಕೊಡಲಾಗಿತ್ತು.
ಆಗ ಸರಕಾರದ ಆದೇಶ ಹೊರಬಿದ್ದಿದ್ದು, ಬಜೆಟ್ನಲ್ಲೇ 200 ಕೋಟಿ ರೂ.ಗಳನ್ನು ಒದಗಿಸಿದ್ದರಿಂದ ಈ ವರ್ಷದಿಂದಲೇ ರೈತರಿಗೆ ಇದರ ಪ್ರಯೋಜನ ಸಿಗಲಿದೆ.
ರಾಜ್ಯದ ಶೇ.68ರಷ್ಟು ಸಾಗುವಳಿ ಪ್ರದೇಶವು ಮಳೆ ಯಾಶ್ರಿತವಾಗಿದ್ದು, ಶೇ.55ರಷ್ಟು ಆಹಾರಧಾನ್ಯ ಹಾಗೂ ಶೇ.75 ರಷ್ಟು ಎಣ್ಣೆಕಾಳು ಉತ್ಪಾದನೆಯು ಈ ಪ್ರದೇಶದಲ್ಲೇ ಆಗುವುದು ಹೆಚ್ಚು. ರೈತರ ಜಮೀನಿನಲ್ಲಿ ಬಿದ್ದ ಮಳೆ ನೀರನ್ನು ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ಸಂಗ್ರಹಣೆ ಮಾಡಿ ಬೆಳೆಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೀರನ್ನು ಒದಗಿಸಲು ಕೃಷಿ ಭಾಗ್ಯದಡಿ ಕೃಷಿ ಹೊಂಡಗಳನ್ನು ನಿರ್ಮಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.