ಸಚಿವ ಜಮೀರ್‌ ಎಡವಟ್ಟು: BJP ತರಾಟೆ

ವಿವಾದವಾದ ಚುನಾವಣ ಭಾಷಣ - ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ

Team Udayavani, Nov 18, 2023, 12:03 AM IST

JAMEER AHMED

ಬೆಂಗಳೂರು: ಮುಸ್ಲಿಂ ಸಮುದಾಯದ ಯು.ಟಿ. ಖಾದರ್‌ ಅವರನ್ನು ಸ್ಪೀಕರ್‌ ಮಾಡುವ ಮೂಲಕ ಬಿಜೆಪಿಯ ದೊಡ್ಡ ದೊಡ್ಡ ಶಾಸಕರೂ ಅವರಿಗೆ ನಮಸ್ಕರಿಸಿ ನಿಲ್ಲುವಂತೆ ಮಾಡಿದ್ದೇವೆ ಎನ್ನುವ ಮೂಲಕ ವಸತಿ ಸಚಿವ ಜಮೀರ್‌ ಖಾನ್‌ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಭಾಷಣ ಮಾಡಿರುವ ಜಮೀರ್‌, ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್‌ ಪಕ್ಷ ಹೆಚ್ಚಿನ ಆದ್ಯತೆ ನೀಡುತ್ತಿದೆ ಎನ್ನುವುದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.

ಇದಕ್ಕೆ ವಿಪಕ್ಷ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಗದ್ವೇಷ ಇರುವ ಇಂತಹವರು ಸಚಿವ ಸ್ಥಾನದಲ್ಲಿ ಮುಂದುವರಿಯಬಾರದು. ಅವರೇ ರಾಜೀನಾಮೆ ಕೊಡಬೇಕು, ಇಲ್ಲದಿದ್ದರೆ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ತೆಲಂಗಾಣ ಚುನಾವಣೆಯ ತಾರಾ ಪ್ರಚಾರಕನಾದ ನಾನು ಹೈದರಾಬಾದ್‌ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್‌ ಪಕ್ಷವು ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್‌ ಸ್ಥಾನ ನೀಡಿದೆ. ಎಲ್ಲ ಪಕ್ಷದವರೂ ಅವರನ್ನು “ಸನ್ಮಾನ್ಯ ಸಭಾಧ್ಯಕ್ಷರೇ’ ಎನ್ನುತ್ತೇವೆ. ಅಷ್ಟೊಂದು ಉನ್ನತ ಹುದ್ದೆಗೆ ಏರುವ ಅವಕಾಶ ನೀಡಲಾಗಿದೆ ಎಂದಿದ್ದಾರೆ.

ಜಮೀರ್‌ ಹೇಳಿದ್ದೇನು?
“ನಾವು 9 ಮುಸ್ಲಿಂ ಶಾಸಕರು ಗೆದ್ದಿದ್ದು, ಈ ಪೈಕಿ ಐವರಿಗೆ ಅಧಿಕಾರ ಕೊಡಲಾಗಿದೆ. ಜಮೀರ್‌, ರಹೀಂ ಖಾನ್‌ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಸಲೀಂ ಅಹ್ಮದ್‌ರನ್ನು ಮುಖ್ಯ ಸಚೇತಕ ಮಾಡಲಾಗಿದೆ. ನಜೀರ್‌ ಅಹಮದ್‌ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಮಾಡಲಾಗಿದೆ. ಇದುವರೆಗೆ ಕರ್ನಾಟಕದ ಇತಿಹಾಸದಲ್ಲಿ ಯಾವುದೇ ಮುಸ್ಲಿಂ ನಾಯಕನನ್ನು ಸ್ಪೀಕರ್‌ ಮಾಡಿರಲಿಲ್ಲ. ಯು.ಟಿ.ಖಾದರ್‌ ಅವರನ್ನು ಸ್ಪೀಕರ್‌ ಮಾಡಲಾಗಿದೆ. ಬಿಜೆಪಿ ನಾಯಕರು ನಮ್ಮ ಯು.ಟಿ. ಖಾದರ್‌ ಎದುರು ನಮಸ್ಕಾರ ಮಾಡುತ್ತಾ ನಿಲ್ಲಬೇಕು. ಇದನ್ನು ಮಾಡಿದ್ಯಾರು? ಕಾಂಗ್ರೆಸ್‌..’ ಎಂದು ತೆಲಂಗಾಣದಲ್ಲಿ ಸಚಿವ ಜಮೀರ್‌ ಭಾಷಣ ಮಾಡಿದ್ದರು.

ಹಲವರು ನನ್ನ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡು ವಿವಾದದ ಸ್ವರೂಪ ನೀಡುತ್ತಿದ್ದಾರೆ. ಕಾಂಗ್ರೆಸ್‌ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್‌ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಸ್ಪೀಕರ್‌ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ. ಕಾಂಗ್ರೆಸ್‌ ಪಕ್ಷ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ? –ಜಮೀರ್‌ ಖಾನ್‌, ವಸತಿ ಸಚಿವ

ಜಮೀರ್‌ ಅವರು ಏನು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ತಿಳಿಯದೆ ಪ್ರತಿಕ್ರಿಯಿಸುವುದು ತಪ್ಪಾಗುತ್ತದೆ. ಅವರ ಹೇಳಿಕೆಯನ್ನು ನಾನು ಗಮನಿಸಿಲ್ಲ. ತಿಳಿದ ಬಳಿಕ ಮಾತನಾಡುತ್ತೇನೆ. –ಡಾ| ಜಿ. ಪರಮೇಶ್ವರ್‌, ಗೃಹ ಸಚಿವ

ಜಮೀರ್‌ ಅವರು ಸಚಿವರಾಗಿ ಕಾರ್ಯ ನಿರ್ವಹಿಸಬೇಕಿತ್ತು. ಬದಲಿಗೆ ಒಂದು ಸಮುದಾಯದ ಪರವಾಗಿ ಮಾತನಾಡಿದ್ದು ಅಕ್ಷಮ್ಯ. ಯು.ಟಿ. ಖಾದರ್‌ ಎಂಬ ಕಾರಣಕ್ಕೆ, ಒಂದು ಸಮುದಾಯಕ್ಕೆ, ಮುಸಲ್ಮಾನ ಎನ್ನುವ ಕಾರಣಕ್ಕೆ ತಲೆ ಬಾಗುವುದಲ್ಲ. ಆಡಳಿತ-ವಿಪಕ್ಷಗಳನ್ನು ಸಮಾನವಾಗಿ ತೆಗೆದುಕೊಂಡು ಹೋಗುವ ಆ ಪೀಠಕ್ಕೆ ಬೆಲೆ ಕೊಡುತ್ತೇವೆ. –ಎಂ.ಪಿ. ರೇಣುಕಾಚಾರ್ಯ, ಮಾಜಿ ಸಚಿವ

ಧರ್ಮಾಧಾರಿತವಾಗಿ ಮುಸ್ಲಿಂಗೆ ಹಿಂದೂಗಳು ನಮಸ್ಕರಿಸುವಂತೆ ಮಾಡಿದ್ದೇವೆ ಎನ್ನುವುದು ದಬ್ಟಾಳಿಕೆಯ ಮನಸ್ಥಿತಿ. ಇಂತಹ ಕೀಳುಮಟ್ಟದ ಕಲ್ಪನೆ, ಹೇಳಿಕೆ ನೀಡುವ ಮೂಲಕ ಮುಸಲ್ಮಾನ ಸಮುದಾಯ ಮತ್ತು ಸರಕಾರಕ್ಕೆ ಮುಜುಗರ, ಕಳಂಕ ಹಚ್ಚಿದ್ದಾರೆ. ಜಮೀರ್‌ ರಾಜೀನಾಮೆ ಕೊಡಬೇಕು. ಸೂಕ್ತ. ಸಂಪುಟದಿಂದ ವಜಾಗೊಳಿಸ ಬೇಕು. –ಡಾ|ಸಿ.ಎನ್‌. ಅಶ್ವತ್ಥನಾರಾಯಣ, ಮಾಜಿ ಡಿಸಿಎಂ

ಸಭಾಧ್ಯಕ್ಷರ ಪೀಠದಲ್ಲಿ ಇರುವವರಿಗೆ ಕೊಡುವ ಗೌರವವೇ ಹೊರತು ವ್ಯಕ್ತಿಗಲ್ಲ. ಪ್ರಜಾಪ್ರಭುತ್ವಕ್ಕೆ ಕೊಡುವ ಗೌರವ ಅದು. ಜಮೀರ್‌ ಖಾನ್‌ ಅವರು ಒಂದು ಕೋಮಿನ ಉಸ್ತುವಾರಿ ತೆಗೆದುಕೊಂಡವರಲ್ಲ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರ ಬಾಯಲ್ಲಿ ಇಂತಹ ಮಾತು ದುರದೃಷ್ಟ ಮತ್ತು ಖಂಡನೀಯ. ಅಂತರಾಳವನ್ನು ಬಹಿರಂಗಪಡಿಸಿದ್ದಾರೆ. ಇನ್ನಾದರೂ ಎಚ್ಚರಿಕೆಯಿಂದ ಮಾತನಾಡಿ.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಜಮೀರ್‌ ಅವರು ಸಂವಿಧಾನಕ್ಕೆ ಅಗೌರವ ನೀಡುವ ಹೇಳಿಕೆ ಕೊಟ್ಟಿದ್ದಾರೆ. ಅವರನ್ನು ಕರೆದು ಸಿಎಂ ಬುದ್ಧಿಮಾತು ಹೇಳಬೇಕು. ನಾವೆಲ್ಲರೂ ಪೀಠಕ್ಕೆ ಗೌರವಿಸುತ್ತೇವೆ ಹೊರತು ವ್ಯಕ್ತಿಗತವಾಗಿ ನಮಸ್ಕರಿಸುವುದಿಲ್ಲ.
-ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಿಎಂ

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.