KYC Fraud: ಆಮಿಷವೊಡ್ಡಿ ಜನರ ಕೆವೈಸಿ ಪಡೆದು ವಂಚನೆ


Team Udayavani, Nov 18, 2023, 10:54 AM IST

KYC Fraud: ಆಮಿಷವೊಡ್ಡಿ ಜನರ ಕೆವೈಸಿ ಪಡೆದು ವಂಚನೆ

ಬೆಂಗಳೂರು: ಅಮಾಯಕರಿಗೆ ದುಡ್ಡಿನ ಆಮಿಷವೊಡ್ಡಿ ಆಧಾರ್‌, ಪ್ಯಾನ್‌ ಕಾರ್ಡ್‌ ದಾಖಲೆ ಮೂಲಕ ಬೇನಾಮಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಒದಗಿಸಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಆರು ಮಂದಿ ಆರೋಪಿಗಳನ್ನು ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಮೊಹಮ್ಮದ್‌ ಹಸನ್‌, ಮೊಹಮ್ಮದ್‌ ಇರ್ಫಾನ್‌, ಸಮೀರ್‌, ಆಯನ್‌ ಬಾಬು, ತಂಝೀಲ್ ಸಾಹುಲ್, ಬೆಂಗಳೂರಿನ ಮಂಜುನಾಥ್‌ ಬಂಧಿತರು. ಆರೋಪಿಗಳು ಬೇನಾಮಿಯಾಗಿ ತೆರೆದಿದ್ದ 126 ಬ್ಯಾಂಕ್‌ ಖಾತೆಗಳು ಪತ್ತೆಯಾಗಿದ್ದು, ಬೆಂಗಳೂರು ಸೇರಿದಂತೆ ದೇಶಾದ್ಯಂತ 75 ಸೈಬರ್‌ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದೆ. ‌

ಈ ವಂಚಕರ ತಂಡವು ಅಮಾಯಕ ಜನರನ್ನು ನಂಬಿಸಿ ಅವರಿಂದ ಗುರುತಿನ (ಕೆವೈಸಿ) ದಾಖಲಾತಿಗಳನ್ನು ಪಡೆದು ಅವರ ಹೆಸರಿನಲ್ಲಿ ಬೇರೆ ಬೇರೆ ಬ್ಯಾಂಕ್‌ಗಳಲ್ಲಿ ಬೇನಾಮಿ ಖಾತೆಗಳನ್ನು ತೆರೆಯುತ್ತಿದ್ದರು. ಆ ಖಾತೆಗಳ ದಾಖಲೆಗಳನ್ನು ಸೈಬರ್‌ ವಂಚಕರಿಗೆ ಒದಗಿಸುತ್ತಿದ್ದರು. ಜತೆಗೆ ಆನ್‌ಲೈನ್‌ ಟ್ರೇಡಿಂಗ್‌ ಹೆಸರಿನಲ್ಲಿ ಅಮಾಯಕ ಜನರಿಗೆ ವಂಚಿಸಿ ಸಂಗ್ರಹಿಸಿದ ಹಣವನ್ನು ಈ ಬ್ಯಾಂಕ್‌ ಖಾತೆಗಳ ಮೂಲಕ ವರ್ಗಾಯಿಸಿಕೊಂಡು ಅದನ್ನು ನಗದು ರೂಪಕ್ಕೆ ಪರಿವರ್ತಿಸಿ ವಂಚಕರಿಗೆ ತಲುಪಿಸುತಿದ್ದರು.

ದುಡ್ಡಿನ ಆಮಿಷವೊಡ್ಡಿ ದಾಖಲೆ ಸಂಗ್ರಹ: ಬೆಂಗಳೂರಿನ ಮತ್ತಿಕೆರೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಆರೋಪಿ ಸಮೀರ್‌ ಜತೆಗೆ ವಿದೇಶಗಳಲ್ಲಿ ಸೈಬರ್‌ ವಂಚನೆ ಬಗ್ಗೆ ತರಬೇತಿ ಪಡೆದಿದ್ದ ಇರ್ಫಾನ್‌, ಮತ್ತೂಬ್ಬ ಆರೋಪಿ ಹಸನ್‌ ಸೇರಿದಂತೆ ಆರು ಮಂದಿ ಸೈಬರ್‌ ವಂಚನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆರೋಪಿಗಳು ಸಣ್ಣ-ಪುಟ್ಟ ಅಂಗಡಿ ಸಿಬ್ಬಂದಿ, ಡೆಲಿವರಿ ಬಾಯ್‌, ಬಡ ಜನರನ್ನೇ ಟಾರ್ಗೆಟ್‌ ಮಾಡಿ ಅವರಿಗೆ 5-6 ಸಾವಿರ ರೂ. ದುಡ್ಡಿನ ಆಮಿಷವೊಡ್ಡಿ ಅವರ ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌ ಸೇರಿದಂತೆ ಕೆವೈಸಿ ದಾಖಲಾತಿ ಪಡೆಯುತ್ತಿದ್ದರು. ಆರೋಪಿ ಮಂಜುನಾಥ್‌ ಸಾರ್ವಜನಿಕರಿಂದ ಸಹಿ ಹಾಕಿರುವ ದಾಖಲೆ ಸಂಗ್ರಹಿಸಿ ಬ್ಯಾಂಕ್‌ ಖಾತೆ ತೆರೆಯುತ್ತಿದ್ದ. ಆರೋಪಿಗಳು ಇದೇ ದಾಖಲೆ ಬಳಸಿಕೊಂಡು ಸಿಮ್‌ ಕಾರ್ಡ್‌ ಖರೀದಿಸುತ್ತಿದ್ದರು. ಈ ಸಿಮ್‌ಕಾರ್ಡ್ ಗಳಿಂದ ಅಪರಿಚಿತರಿಗೆ ಸಂದೇಶ ಅಥವಾ ಮೊಬೈಲ್‌ ಕರೆ ಮಾಡಿ ಉದ್ಯೋಗ ಕೊಡಿಸುವುದಾಗಿ, ದುಡ್ಡು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದು ಸೇರಿದಂತೆ ವಿವಿಧ ಬಗೆಯ ಆಮಿಷವೊಡ್ಡುತ್ತಿದ್ದರು. ‌

ಇವರ ಗಾಳಕ್ಕೆ ಬಿದ್ದವರಿಗೆ ಲಕ್ಷಾಂತರ ರೂ. ವಂಚಿಸಿ ಸಿಮ್‌ಕಾರ್ಡ್‌ ಎಸೆಯುತ್ತಿದ್ದರು. ಸೈಬರ್‌ ವಂಚನೆ ಎಸಗಲೆಂದೇ ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಪ್ಲ್ರಾಟ್‌ ಖರೀದಿಗೆ ಆರೋಪಿಗಳು ಮುಂದಾಗಿದ್ದರು ಎಂದು ತಿಳಿದು ಬಂದಿದೆ.

ಆರೋಪಿಗಳು ಸಿಕ್ಕಿ ಬಿದ್ದಿದ್ದು ಹೇಗೆ?: ಈ ಕೃತ್ಯ ಎಸಗಲೆಂದೇ ಆರೋಪಿಗಳು ಮತ್ತಿಕೆರೆಯಲ್ಲಿ ಮನೆ ಬಾಡಿಗೆಗೆ ಪಡೆದಿದ್ದರು. ಇತ್ತೀಚೆಗೆ ಮಂಜೇಶ್‌ ಎಂಬುವವರ ಸ್ನೇಹಿತ ಇಲ್ಲಿಗೆ ತೆರಳಿ ಆರೋಪಿಗಳಿಗೆ ಆಧಾರ್‌, ಪಾನ್‌ಕಾರ್ಡ್‌ ನೀಡಿ ದುಡ್ಡು ಪಡೆಯಲು ಮುಂದಾಗಿದ್ದ. ಈ ವಿಚಾರವನ್ನು ಮಂಜೇಶ್‌ಗೂ ತಿಳಿಸಿದ್ದ. ಮಂಜೇಶ್‌ ಆರೋಪಿಗಳ ಮನೆಯಲ್ಲಿದ್ದ ಹಲವಾರು ಬ್ಯಾಂಕ್‌ ಪುಸ್ತಕ, ಇತರ ದಾಖಲೆ ಕಂಡು ದಂಗಾಗಿದ್ದ. ಮಂಜೇಶ್‌ಗೂ ಕೆವೈಸಿ ದಾಖಲೆ ಕೊಟ್ಟರೆ 10 ಸಾವಿರ ರೂ. ನೀಡುವುದಾಗಿ ಹೇಳಿದ್ದರು. ಇದರಿಂದ ಅನುಮಾನಗೊಂಡ ಮಂಜೇ ಶ್‌ ನಗರ ಸೈಬರ್‌ ಕ್ರೈಂ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಜಾಡು ಹಿಡಿದು ಹೊರಟಾಗ ಸೈಬರ್‌ ಕಳ್ಳರ ಜಾಲದ ಬಗ್ಗೆ ಸುಳಿವು ಸಿಕ್ಕಿತ್ತು.

ದುಬೈನಲ್ಲಿ ಸೈಬರ್‌ ಕ್ರೈಂ ತರಬೇತಿ ಪಡೆದಿರುವ ಶಂಕೆ: ಸೈಬರ್‌ ವಂಚನೆಗೆ ಸಂಬಂಧಿಸಿದಂತೆ ದುಬೈನಲ್ಲಿ ನಡೆದ ಕಾರ್ಯಾಗಾರಗಳಲ್ಲಿ ಆರೋಪಿ ಇರ್ಫಾನ್‌ ಭಾಗವಹಿಸಿದ್ದ. ಅಲ್ಲಿ ಸೈಬರ್‌ ವಂಚನೆ ಬಗ್ಗೆ ತರಬೇತಿ ಪಡೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಂತರ ಬೆಂಗಳೂರಿಗೆ ವಾಪಸ್ಸಾಗಿ ತನ್ನ ಸ್ನೇಹಿತರಾದ ಇತರ ಆರೋಪಿಗಳ ಜೊತೆಗೆ ಸೇರಿ ಕೃತ್ಯ ಎಸಗುತ್ತಿದ್ದ. ಪ್ರಕರಣದ ಕಿಂಗ್‌ಪಿನ್‌ ದುಬೈನಲ್ಲಿದ್ದುಕೊಂಡು ಬಂಧಿತ ಆರೋಪಿಗಳಿಗೆ ಸೂಚನೆ ಕೊಡುತ್ತಿದ್ದ ಎನ್ನಲಾಗಿದೆ. ಆತನ ಸೂಚನೆ ಮೇರೆಗೆ ಆರೋಪಿಗಳು ಇಲ್ಲಿ ಕೃತ್ಯ ಎಸಗುತ್ತಿದ್ದರು ಎನ್ನಲಾಗಿದೆ.

 

ಟಾಪ್ ನ್ಯೂಸ್

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.