Stag Beetle: ಮಳೆಗಾಲದ ಸೈರನ್‌, ಜಿರ್ರೆನ್ನುವ ಜೀರುಂಡೆ


Team Udayavani, Nov 19, 2023, 4:29 PM IST

Stag Beetle: ಮಳೆಗಾಲದ ಸೈರನ್‌, ಜಿರ್ರೆನ್ನುವ ಜೀರುಂಡೆ

ಪಶ್ಚಿಮಘಟ್ಟ ಪ್ರದೇಶದ ಮಲೆನಾಡಿನ ಜೀವ ವೈವಿಧ್ಯವೇ ಒಂಥರಾ ವಿಭಿನ್ನ. ಇಲ್ಲಿ ಸುಮ್ಮನೆ ಮನೆ­ಯಂಗಳ ಮತ್ತು ತೋಟದಲ್ಲಿ ಸುತ್ತಾಡಿಕೊಂಡು ಬಂದರೆ ಅನೇಕ ವಿಸ್ಮಯಗಳು ಕಾಣಿಸುತ್ತವೆ. ಒಂದಷ್ಟು ವಿಷಯಗಳು ಕಿವಿಗೆ ಬೀಳುತ್ತವೆ. ಮಲೆನಾಡಿನ ಮಳೆಗಾಲವೇ ವಿಭಿನ್ನವಾಗಿದ್ದು, ಜಿಟಿ ಜಿಟಿ ಮಳೆ ಬೀಳುವ ಸಂದರ್ಭದಲ್ಲಿ ಊರಿಗೆ ಹೋದಾಗ ಹೀಗೇ ಆಯಿತು. ಸಂಜೆಯ ವೇಳೆಗೆ ಮನೆಯಂಗಳದಲ್ಲಿ ಅಮ್ಮ ಬೆಳೆಸಿದ್ದ ವಿವಿಧ ರೀತಿಯ ಹೂವಿನ ಗಿಡಗಳನ್ನು ಮತ್ತು ಅದರಲ್ಲಿ ಅರಳಿದ್ದ ಹೂವುಗಳನ್ನು ನೋಡುತ್ತಾ ಮೊಬೈಲ್‌ ಕ್ಯಾಮರಾದಲ್ಲಿ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದೆ. ಜುಲೈ ಮತ್ತು ಅಗಸ್ಟ್‌ ತಿಂಗಳಲ್ಲಿ ಧೋ… ಎಂದು ಸುರಿಯುವ ಜಡಿ ಮಳೆಯಲ್ಲಿ ಮನುಷ್ಯ, ಪಕ್ಷಿ, ಪ್ರಾಣಿಗಳೆಲ್ಲವೂ ಆದಷ್ಟು ಬೇಗನೇ ತಮ್ಮ ತಮ್ಮ ಬೆಚ್ಚನೆಯ ಗೂಡನ್ನು ಸೇರಿಕೊಂಡು ಬಿಡುತ್ತವೆ. ಹುಳು ಹುಪ್ಪಟೆಗಳು, ಸರೀಸೃಪಗಳಿಗೆ, ಪಾಚಿ ಮತ್ತು ಕಳೆ ಗಿಡಗಳಿಗೆ ಮತ್ತು ಕೀಟಗಳಿಗೆ ವರ್ಷದ ಅಜ್ಞಾತ­ವಾಸವನ್ನು ಮುಗಿಸಿ ಹೊರಬಂದು ತಮ್ಮ ಹೊಸ ಬಾಳ ಸಂಗಾತಿಯೊಂದಿಗೆ ಸಂತಾನೋತ್ಪತ್ತಿಯ ಕಾಲ.

ಹೀಗೇ ಗಿಡಗಳನ್ನೆಲ್ಲಾ ನೋಡುತ್ತಾ ತೋಟದ ದಾರಿಯಲ್ಲಿ ಸಾಗುತ್ತಿದ್ದೆ, ಮಂದಾರ ಗಿಡದ ಕಾಂಡದಲ್ಲಿ ಗಂಟು ಬೆಳೆದಂತೆ ಕಾಣಿಸಿತು. ಏನಿರಬಹುದೆಂದು ಹತ್ತಿರ ಹೋಗಿ ನೋಡಿದಾಗ ಈ ಗಿಡದಲ್ಲಿ ಹತ್ತಾರು ಕಡೆಗಳಲ್ಲಿ ಕೀಟದಂತ ಹುಳುಗಳು ಕಂಡು ಬಂದವು. ಮುಟ್ಟಿ ನೋಡಿದರೆ ಇವುಗಳಿಗೆ ಜೀವ­ವಿದ್ದಂತೆ ಕಂಡುಬರಲಿಲ್ಲ. ಎಲ್ಲೊ ಈ ಕೀಟಗಳನ್ನು ದೊಡ್ಡ ಕೀಟ ಅಥವಾ ಜೇಡ ಒಳಭಾಗವನ್ನೆಲ್ಲ ತಿಂದು ಹೊರ ಚರ್ಮವನ್ನು ಉಳಿಸಿರಬಹುದು ಅಥವಾ ಯಾವುದೋ ಕೀಟವು ತನ್ನ ಒಂದು ಹಂತದಿಂದ ರೂಪಾಂತರಗೊಳ್ಳುವಾಗ ಉಳಿದ ಹೊರ ಚರ್ಮ ಇರಬಹುದೇನೋ ಅಂದುಕೊಂಡೆ. ಅಮ್ಮನನ್ನು ಕರೆದು ತೋರಿಸಿ ಕೇಳಿದೆ, “ಇದೇನಮ್ಮಾ ಗಿಡದ ತುಂಬಾ ಅಲ್ಲಲ್ಲಿ ಕೀಟಗಳ ಹೊರಮೈ’ ಎಂದು. ಅದಕ್ಕೆ ಅಮ್ಮ, “ಅದು ನಡೆಯುವ ಕಡ್ಡಿ, ಸ್ಥಳೀಯವಾಗಿ ಹಾರುವ ಎಲೆ, ವೈಜ್ಞಾನಿಕವಾಗಿ ಸಿಕಾಡ’ ಎನ್ನುತ್ತಾರೆ ಎಂದರು.

ಸಿಕಾಡ ಅಥವಾ ಸ್ಥಳೀಯವಾಗಿ ಕರೆಯಲಾಗುವ ಜೀರುಂಡೆಗಳದು ಅತ್ಯಂತ ಕೌತುಕದ ಜೀವನ ಚಕ್ರ. ಗಿಡ ಮರಗಳಲ್ಲೇ ಬಹುವಾಗಿ ವಾಸಿಸುವ ಇವುಗಳು ಸಸ್ಯಗಳ ಕಾಂಡದಲ್ಲಿ ಕುಳಿತು ಕಾಂಡದ ರಸವನ್ನು ಹೀರುತ್ತವೆ. ಗಂಡು ಕೀಟವು ತನ್ನ ಹಿಂಭಾಗದಲ್ಲಿರುವ ಟಿಂಬಲ್ಸ್‌ ಎಂಬ ಅಂಗದಿಂದ ವಿಶಿಷ್ಟವಾದ ಹಾಗೂ ಕಿವಿ ಕೋರೈಸುವ ವಿಚಿತ್ರ ಶಬ್ದವನ್ನು ಹೊರಡಿಸುತ್ತವೆ. ಇದರ ಈ ಅಂಗವು ತಬಲಾ, ಮೃದಂಗ ಮೊದಲಾದ ಚರ್ಮವಾದ್ಯಗಳಂತೆ ಕೆಲಸ ಮಾಡುತ್ತದೆ. ತನ್ನ ಟಿಂಬಲ್ಸ್‌ನ್ನು ವೇಗವಾಗಿ ಕಂಪಿಸುವಾಗ ವಿಚಿತ್ರವಾದ ಶಬ್ಧವು ಹೊರಹೊಮ್ಮುತ್ತದೆ. ಈ ಶಬ್ದವು ಕೇಳುವಾಗ ಹಕ್ಕಿಗಳ ಹಾಡಿನಂತೆ ಅನಿಸುತ್ತದೆ. ಸಿಕಾಡಗಳ ಕೂಗಿನ ಮುಖ್ಯ ಉದೇªಶ ಸಂಗಾತಿಯನ್ನು ಆಕರ್ಷಿಸುವುದು. ಹೆಣ್ಣು ಸಿಕಾಡವು ಮರಗಳ ತೊಗಟೆಯ ಸಂದಿಯಲ್ಲಿ ಮೊಟ್ಟೆಗಳನ್ನಿಡುತ್ತದೆ. ಸಂತಾನೋತ್ಪತ್ತಿ ಆದೊಡನೆ ತಾಯಿ ಸಿಕಾಡವು ಸಾಯುತ್ತದೆ.

ವರ್ಣಮಯ ಜೀವಜಗತ್ತು…

ಮೊಟ್ಟೆಯು ಒಡೆದು ಹೊರಬರುವ ಮರಿ ಜೀರುಂಡೆಗೆ ರೆಕ್ಕೆಗಳಿರುವುದಿಲ್ಲ. ಅದು ಮರವನ್ನಿಳಿದು ನಿಧಾನವಾಗಿ ಮಣ್ಣಿನಲ್ಲಿರುವ ಮರದ ಬೇರನ್ನು ತಲುಪುತ್ತವೆ. ಅಲ್ಲಿ ಬೇರಿನ ರಸವನ್ನು ಕುಡಿಯುತ್ತಾ ಬೆಳೆಯುತ್ತವೆ. ಸುಮಾರು 2-3 ವರ್ಷಗಳ ಕಾಲ ಅಲ್ಲೇ ಉಳಿಯುತ್ತವೆ. ಉತ್ತರ ಅಮೇರಿಕಾದ ಕೆಲ ಸಿಕಾಡಗಳು 13-17 ವರ್ಷಗಳಷ್ಟು ದೀರ್ಘಾವಧಿಯವರೆಗೆ ಮರಿಗಳಾಗಿ ನೆಲದೊಳಗೇ ಇರುತ್ತವೆಂದು ಅಧ್ಯಯನಗಳು ಹೇಳಿವೆ. ಬೆಳೆದ ಮರಿಗಳು ಮತ್ತೆ ಮಣ್ಣಿನಿಂದ ಹೊರಬಂದು ಮರಗಳನೇ°ರುತ್ತವೆ. ಯಾವುದಾದರೊಂದು ರೆಂಬೆಯನೋ° ಎಲೆಯನೋ° ಮುಂಗಾಲುಗಳಿಂದ ಗಟ್ಟಿಯಾಗಿ ಹಿಡಿದು ಕುಳಿತುಕೊಳ್ಳುತ್ತವೆ. ಆಗ ಆ ಮರಿಯ ಬೆನ್ನಿನ ಚರ್ಮ ನಿಧಾನವಾಗಿ ಬಿರಿಯುತ್ತದೆ. ಬಿರಿದು ಬಾಯಿಬಿಟ್ಟ ಚರ್ಮದೊಳ­ಗಿಂದ ರೆಕ್ಕೆಯುಳ್ಳ ಜೀರುಂಡೆ ಹೊರಬರುತ್ತದೆ. ಆಗ ಆ ಜೀರುಂಡೆಯ ಹೊರ ಚರ್ಮವು ಹೀಗೆ ಗಿಡಮರಗಳಿಗೆ ಅಂಟಿಕೊಂಡಂತೆ ಉಳಿಯುತ್ತದೆ.

ಪ್ರಪಂಚದಲ್ಲಿ ಸರಿಸುಮಾರು ಎರಡೂವರೆ ಸಾವಿರ ಜಾತಿಯ ಸಿಕಾಡಗಳಿವೆ ಎಂದು ಜೀವಶಾಸ್ತ್ರಜ್ಞರು ಹೇಳುತ್ತಾರೆ. ಇವುಗಳನ್ನು ಭಕ್ಷಿಸುವ ಪ್ರಿಡೇಟರ್‌ ಕೀಟಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಇವುಗಳು ಇಷ್ಟು ದೀರ್ಘ‌ಕಾಲ ಮಣ್ಣಿನಲ್ಲಿ ಅಡಗುತ್ತವೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಜೀರುಂಡೆಗಳ ರೊಂಯ್‌ ರೊಂಯ್‌ ರೊಂಯ್‌ ಶಬ್ದವು ಮಲೆನಾಡಿನಲ್ಲಿ ಮಳೆಗಾಲ ಪ್ರಾರಂಭದ ಸೈರನ್‌ ಎಂದೇ ಪರಿಗಣಿಸಲಾಗುತ್ತದೆ.

-ಸಂತೋಷ್‌ ರಾವ್‌ ಪೆರ್ಮುಡ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

2

Short Stories: ಸಣ್ಕತೆ ಸಾಮ್ರಾಜ್ಯ: ಪುಟ್‌ ಪುಟ್‌ ಕತೆ, ಪುಟಾಣಿ ಕತೆ…

ಹಸಿರು ವನಸಿರಿ ಸಂಡೂರಿನ ಸಿರಿ

ಹಸಿರು ವನಸಿರಿ ಸಂಡೂರಿನ ಸಿರಿ

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.