Bengaluru Kambala; ಕರಾವಳಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣ ಹೇಗಿರಲಿದೆ? ವಿಶೇಷತೆಯೇನು?


Team Udayavani, Nov 20, 2023, 4:22 PM IST

Bengaluru Kambala; ಕರಾವಳಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣ ಹೇಗಿರಲಿದೆ? ವಿಶೇಷತೆಯೇನು?

ಮಣಿಪಾಲ: ಇಷ್ಟು ವರ್ಷ ಕರಾವಳಿಯಲ್ಲಿ ಕೇಳಿ ಬರುತ್ತಿದ್ದ ಕಂಬಳದ ಕೊಂಬಿನ ಕಹಳೆ ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೂ ಕೇಳಿಬರಲಿದೆ. ಎಲ್ಲರಿಗೂ ಗೊತ್ತಿರುವಂತೆ ಮುಂದಿನ ಶನಿವಾರ ಮತ್ತು ಭಾನುವಾರ ಅಂದರೆ ನ.25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ನಡೆಯಲಿದೆ.

ಪುತ್ತೂರು ಶಾಸಕ ಅಶೋಕ್ ರೈಗಳ ಸಾರಥ್ಯದಲ್ಲಿ ಬೆಂಗಳೂರು ಕಂಬಳಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. 2023-24ರ ಕಂಬಳ ಸೀಸನ್ ಈಗಾಗಲೇ ಆರಂಭವಾಗಿದ್ದು, ಬಂಟ್ವಾಳ ತಾಲೂಕಿನ ಕಕ್ಯಪದವು ಎಂಬಲ್ಲಿ ಮೊದಲ ಕಂಬಳ ನಡೆದಿದೆ. 189 ಜೋಡಿ ಕೋಣಗಳು ಈ ಕೂಟದಲ್ಲಿ ಭಾಗವಹಿಸಿದ್ದವು. ಇದೀಗ ಈ ಕೋಣಗಳು ಬೆಂಗಳೂರು ಲಾರಿ ಏರಲು ಸಿದ್ದವಾಗಿವೆ.

ಉಪ್ಪಿನಂಗಡಿಯಿಂದ ಪ್ರಯಾಣ: ಗುರುವಾರ (ನ.23) ಉಭಯ ಜಿಲ್ಲೆಯ ಎಲ್ಲಾ ಓಟದ ಕೋಣಗಳೊಂದಿಗೆ ಯಜಮಾನರುಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಉಪ್ಪಿನಂಗಡಿಯ ಕಾಲೇಜು ಮೈದಾನದಲ್ಲಿ ಸೇರಲಿದ್ದಾರೆ. ಅಲ್ಲಿ ಗಣಹೋಮ ನಡೆದು, ಬಳಿಕ ಉಪಹಾರ ಸೇವಿಸಿ 10.30ಕ್ಕೆ ಸರಿಯಾಗಿ ಬೆಂಗಳೂರು ಕಡೆ ಪ್ರಯಾಣ ಆರಂಭಿಸಲಿದ್ದಾರೆ. ಇದಕ್ಕಾಗಿ ಶಾಸಕರ ನೇತೃತ್ವದಲ್ಲಿ ತಯಾರಿ ನಡೆಯುತ್ತಿದ್ದು, ಸ್ಥಳೀಯ ಸಾಮಾಜಿಕ ಮುಂದಾಳುಗಳು ಸಾಥ್ ನೀಡಲಿದ್ದಾರೆ.

ಓಟದ ಕೋಣಗಳಿಗೆ ಅನುಕೂಲವಾಗುವಂತೆ ಕರಾವಳಿಯಿಂದಲೇ ನೀರು, ಬೈಹುಲ್ಲು, ಹುರುಳಿಯನ್ನು ಬೆಂಗಳೂರಿಗೆ ಕೊಂಡೊಯ್ಯಲಾಗುತ್ತದೆ. ನೂರಕ್ಕೂ ಹೆಚ್ಚು ಲಾರಿಗಳು ಸಾಲಾಗಿ ಕರಾವಳಿಯ ಸಾಂಸ್ಕೃತಿಕ ಮೆರುಗನ್ನು ಹೊತ್ತು ರಾಜಧಾನಿಯತ್ತ ಸಾಗಲಿವೆ.

ಗುರುವಾರ ಮಧ್ಯಾಹ್ನ 2 ಗಂಟೆಯಿಂದ ಐದು ಗಂಟೆಯ ತನಕ ವಿರಾಮ ನೀಡಲಾಗಿದೆ. ಅಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ನೇತೃತ್ವದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ಊಟೋಪಚಾರವೂ ಇಲ್ಲೇ ನಡೆಯಲಿದೆ. ಈ ವೇಳೆ ಕೋಣಗಳನ್ನು ಲಾರಿಯಿಂದ ಇಳಿಸಿ ವಿಶ್ರಾಂತಿ ನೀಡಲಾಗುವುದು.

ಸಂಜೆ ಐದು ಗಂಟೆಯಿಂದ ಹಾಸನದಿಂದ ಹೊರಟ ಕೋಣಗಳಿಗೆ ಚನ್ನರಾಯಪಟ್ಟಣದಲ್ಲಿ ಸ್ವಾಗತ ನೀಡಲಾಗುವುದು. ಬಳಿಕ ನೆಲಮಂಗಲ ಬೆಂಗಳೂರು ಪ್ರವೇಶಿಸಿ ಸುಮಾರು 11 ಗಂಟೆಗೆ ಅರಮನೆ ಮೈದಾನಕ್ಕೆ ಆಗಮಿಸಲಿದೆ.

ಈಗಾಗಲೇ 179 ಜೋಡಿ ಕೋಣಗಳ ಯಜಮಾನರು ಬೆಂಗಳೂರು ಕಂಬಳಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಕಕ್ಯಪದವು ಕಂಬಳದಲ್ಲಿ ಅವುಗಳ ಓಟವನ್ನು ಪರಿಶೀಲಿಸಿ ಪರಿಷ್ಕರಣೆ ಮಾಡಲಾಗುತ್ತಿದೆ.

ಕಂಬಳದ ಜತೆ ಸಾಂಸ್ಕೃತಿಕ ಕಾರ್ಯಕ್ರಮ

ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದಲ್ಲಿ ಕೋಣಗಳ ಸ್ಪರ್ಧೆ ಒಂದು ಕಡೆಯಾದರೆ ಮತ್ತೊಂದೆಡೆ ಕರಾವಳಿಯ ಸಾಂಸ್ಕೃತಿಯ ಸೊಗಡನ್ನು ಪ್ರತಿನಿಧಿಸುವ ಕಾರ್ಯಕ್ರಮಗಳು ನಡೆಯಲಿದೆ. ತೆಂಕು ಮತ್ತು ಬಡಗು ತಿಟ್ಟಿನ ಯಕ್ಷಗಾನ ಸೇರಿದಂತೆ ಸಂಗೀತ ನಿರ್ದೇಶಕ ಗುರು ಕಿರಣ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದೆ.

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.