World Cup ಫೈನಲ್ನಲ್ಲಿ ಭಾರತಕ್ಕೆ ಸೋಲು; ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಮೃತ್ಯು
Team Udayavani, Nov 20, 2023, 4:46 PM IST
ಹೈದರಾಬಾದ್: ಟೀಮ್ ಇಂಡಿಯಾ ವಿಶ್ವಕಪ್ ಟ್ರೋಫಿ ಗೆಲ್ಲುವ ಕನಸನ್ನು ಆಸೀಸ್ ಭಗ್ನಗೊಳಿಸಿದೆ. ಟೂರ್ನಿ ಇಡೀ ಉತ್ತಮ ಪ್ರದರ್ಶನ ನೀಡಿ ಟೇಬಲ್ ಟಾಪರ್ ಆಗಿದ್ದ ರೋಹಿತ್ ಪಡೆ ಫೈನಲ್ ಹಂತದಲ್ಲಿ ಸೋತು ಟ್ರೋಫಿ ಎತ್ತುವ ಕನಸನ್ನು ಕೈಚೆಲ್ಲಿದೆ.
ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಭಾರತದ ಸೋಲಿನಿಂದ ಹತಾಶರಾಗಿದ್ದು, ಅಭಿಮಾನಿಗಳ ಕನಸು ನುಚ್ಚುನೂರಾಗಿದೆ. ಆದರೆ ಸೋಲಿನ ಹತಾಶೆಯಲ್ಲಿ ಅಭಿಮಾನಿಯೊಬ್ಬನ ಪ್ರಾಣ ಹೋಗಿರುವ ಘಟನೆ ತಿರುಪತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಜ್ಯೋತಿಶ್ ಕುಮಾರ್ ಯಾದವ್ (35) ದೀಪಾವಳಿ ರಜೆಯ ಪ್ರಯುಕ್ತ ತನ್ನ ಊರಾದ ತಿರುಪತಿಗೆ ಬಂದಿದ್ದರು. ಕ್ರಿಕೆಟ್ ಅಭಿಮಾನಿಯಾಗಿದ್ದ ಜ್ಯೋತಿಶ್ ಭಾನುವಾರ(ನ.19 ರಂದು) ಭಾರತ – ಆಸೀಸ್ನ ಡುವಿನ ವಿಶ್ವಕಪ್ ಫೈನಲ್ ಪಂದ್ಯವನು ವೀಕ್ಷಣೆ ಮಾಡುತ್ತಿದ್ದರು.
ಇತ್ತ ಗೆಲುವಿನ ನಿರೀಕ್ಷೆಯಲ್ಲಿದ್ದ ಪಂದ್ಯದಲ್ಲಿ ಭಾರತ ಸೋಲಿನ ಹಂತಕ್ಕೆ ಬಂದಾಗ, ಟಿವಿ ನೋಡುತ್ತಿದ್ದ ಜ್ಯೋತಿಶ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹತ್ತಿರದ ತಿರುಪತಿಯ ಶ್ರೀ ವೆಂಕಟೇಶ್ವರ ರಾಮನಾರಾಯಣ್ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅವರು ಹೃದಯಾಘಾತವಾಗಿ ಆದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ
Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.