High Court ಕೆ. ನಾಗಣ್ಣ ಗೌಡ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ
Team Udayavani, Nov 20, 2023, 10:15 PM IST
ಬೆಂಗಳೂರು: ಕೇಂದ್ರ ಸರಕಾರ ಅಧಿಸೂಚಿತ ಸಂಸ್ಥೆಗಳಿಗೆ, ಹುದ್ದೆಗಳ ನೇಮಕಕ್ಕೆ ಆಯ್ಕೆ ಸಮಿತಿ ರಚನೆ ಮಾಡಿರುವಾಗ ಅಂಥ ಹುದ್ದೆಗೆ ಯಾರು ಅರ್ಹರು ಎಂದು ನ್ಯಾಯಾಲಯಗಳು ನಿರ್ಧರಿಸಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷರ ಹುದ್ದೆಗೆ ಕೆ. ನಾಗಣ್ಣ ಗೌಡ ಅವರನ್ನು ನೇಮಿಸಿದ್ದ ಸರಕಾರದ ಆದೇಶವನ್ನು ಎತ್ತಿಹಿಡಿದಿದೆ.
ನಾಗಣ್ಣ ಗೌಡರ ನೇಮಕವನ್ನು ರದ್ದುಗೊಳಿಸಿ ಹೊಸದಾಗಿ ನೇಮಕ ಪ್ರಕ್ರಿಯೆ ನಡೆಸುವಂತೆ ಕೋರಿ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷರ ಹುದ್ದೆಯ ಆಕಾಂಕ್ಷಿಯಾಗಿದ್ದ ವಕೀಲ ಆಶೋಕ್ ಡಿ.ಸನಾದಿ ಎಂಬವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಸರಕಾರದ ನೇಮಕಾತಿಗಳನ್ನು ನ್ಯಾಯಿಕ ಪರಾಮರ್ಶೆ ಮಾಡುವ ಸಂದರ್ಭದಲ್ಲಿ ನ್ಯಾಯಾಲಯವು ಆಯ್ಕೆ ಸಮಿತಿ ಹಾಗೂ ಮೇಲ್ಮನವಿ ನ್ಯಾಯಾಧಿಕರಣದಂತೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ನ್ಯಾಯಾಲಯಗಳು ಎಲ್ಲ ಸಂದರ್ಭದಲ್ಲಿ ತಮ್ಮ ವಿವೇಚನಾಧಿಕಾರ ಬಳಸುವುದಕ್ಕೆ ಸಾಧ್ಯವಿಲ್ಲ. ಆದರೆ ಸರಕಾರದ ನೇಮಕಾತಿಯು ಕಾನೂನಿನ ಉಲ್ಲಂಘನೆ ಅಥವಾ ನಿರಂಕುಶತೆಯಿಂದ ಕೂಡಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಬಹುದಾಗಿದೆ ಎಂದು ಪೀಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.