Tunnel ಕಾರ್ಮಿಕರಿರುವ ಸ್ಥಳ ತಲುಪಿದ ಪೈಪ್! ರಕ್ಷಣಾ ಕಾರ್ಯಾಚರಣೆಯ ಮೊದಲ ಹಂತ ಯಶಸ್ವಿ
ವಿಶೇಷ ಆಹಾರ, ಫೋನ್, ಕ್ಯಾಮೆರಾ ರವಾನಿಸಲು ಸಿದ್ಧತೆ
Team Udayavani, Nov 20, 2023, 10:22 PM IST
ಸಿಲ್ಕ್ಯಾರಾ:ಉತ್ತರಾಖಂಡದ ಉತ್ತರಕಾಶಿಯಲ್ಲಿ ಸುರಂಗ ಕುಸಿದು 9 ದಿನಗಳು ಕಳೆದಿದ್ದು, ರಕ್ಷಣಾ ಕಾರ್ಯಾಚರಣೆ ಬಿರುಸು ಪಡೆದಿದೆ. 41 ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ 5 ಅಂಶಗಳ ಕ್ರಿಯಾಯೋಜನೆಯನ್ನು ರೂಪಿಸಲಾಗಿದ್ದು, ಅದರಂತೆ, ಪ್ರತಿ ಯೋಜನೆಯ ಹೊಣೆಯನ್ನು 5 ಪ್ರತ್ಯೇಕ ಏಜೆನ್ಸಿಗಳಿಗೆ ವಹಿಸಲಾಗಿದೆ. ಮೂರು ಬದಿಗಳಿಂದ ಡ್ರಿಲ್ಲಿಂಗ್ ಮಾಡಿ ಒಳಗೆ ಸಿಲುಕಿರುವ ಕಾರ್ಮಿಕರನ್ನು ತಲುಪುವುದೇ ಇದರ ಉದ್ದೇಶವಾಗಿದೆ.
ಮೊದಲ ಹಂತದ ಯಶಸ್ಸು ಎಂಬಂತೆ, ಸೋಮವಾರ 6 ಇಂಚು ಅಗಲದ ಪರ್ಯಾಯ ಪೈಪ್ವೊಂದು ಕಾರ್ಮಿಕರಿದ್ದ ಸ್ಥಳವನ್ನು ತಲುಪಿದೆ. ಇದರ ಮೂಲಕ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಕಾರ್ಮಿಕರಿಗೆ ತಲುಪಿಸಲು ಸಾಧ್ಯವಾಗಲಿದೆ. ಅಲ್ಲದೇ, ಕಾರ್ಮಿಕರೊಂದಿಗೆ ಸಂವಹನ ಸಾಧ್ಯವಾಗುವಂತೆ ಫೋನ್ ಮತ್ತು ಚಾರ್ಜರ್ವೊಂದನ್ನು ರವಾನಿಸಲಾಗಿದೆ.
ಜೊತೆಗೆ, ಎಂಡೋಸ್ಕೊಪಿ ಮಾದರಿಯ ಕ್ಯಾಮೆರಾ ಸಾಧನವನ್ನು ದೆಹಲಿಯಿಂದ ತರಿಸಲಾಗುತ್ತದೆ. ಅದನ್ನು ಈ ಪೈಪ್ ಮೂಲಕ ಕಳುಹಿಸಿದರೆ, ಒಳಗೆ ಸಿಲುಕಿರುವ ಕಾರ್ಮಿಕರೊಂದಿಗೆ ಹೊರಗಿರುವ ರಕ್ಷಣಾ ತಂಡವು ಮುಖ ಮುಖ ನೋಡಿಕೊಂಡು ಪರಸ್ಪರ ಸಂವಹನ ನಡೆಸಲು ಸಾಧ್ಯವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.
ತಜ್ಞರ ತಂಡ, ರೊಬೋಟ್ಗಳ ಆಗಮನ:
ಸೋಮವಾರ ಅಂತಾರಾಷ್ಟ್ರೀಯ ಸುರಂಗ ತಜ್ಞರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಇಂಟರ್ನ್ಯಾಷನಲ್ ಟನೆಲಿಂಗ್ ಆ್ಯಂಡ್ ಅಂಡರ್ಗ್ರೌಂಡ್ ಸ್ಪೇಸ್ ಅಸೋಸಿಯೇಷನ್ ಅಧ್ಯಕ್ಷ ಅರ್ನಾಲ್ಡ್ ಡಿಕ್ಸ್ ಅವರು ಕಾರ್ಮಿಕರ ರಕ್ಷಣೆ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದಾರೆ. ಇದರ ಜೊತೆಗೆ, ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ)ಯ ರೊಬೋಟಿಕ್ಸ್ ತಂಡವೂ ಸ್ಥಳಕ್ಕೆ ಬಂದಿದ್ದು, ಎರಡು ರೊಬೋಟ್ಗಳನ್ನೂ ತರಿಸಲಾಗಿದೆ. ಈ ರೊಬೋಟ್ಗಳು ನೆಲದಲ್ಲಿ ನಡೆದಾಡುವ ಸಾಮರ್ಥ್ಯ ಹೊಂದಿವೆ. ಆದರೆ, ಸುರಂಗ ಕುಸಿದ ಸ್ಥಳದಲ್ಲಿ ನೆಲವು ಜಾರುತ್ತಿರುವ ಕಾರಣ, ಅಲ್ಲಿ ರೊಬೋಟ್ಗೆ ನಡೆಯಲು ಸಾಧ್ಯವಾಗುತ್ತದೋ, ಇಲ್ಲವೋ ಎನ್ನುವ ಅನುಮಾನ ಇದೆ.
ಪ್ರಧಾನಿ-ಸಿಎಂ ಮಾತುಕತೆ:
ಈ ನಡುವೆ, ಸೋಮವಾರ ಪ್ರಧಾನಿ ಮೋದಿಯವರು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಮಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಕೇಂದ್ರದಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಕಾರ್ಮಿಕರ ನೈತಿಕ ಸ್ಥೈರ್ಯ ಕುಂದದಂತೆ ನೋಡಿಕೊಳ್ಳಿ ಎಂದೂ ಸಲಹೆ ನೀಡಿದ್ದಾರೆ. ಈ ಮಧ್ಯೆ, ಕಾರ್ಮಿಕರ ಕುಟುಂಬ ಸದಸ್ಯರ ಪ್ರಯಾಣ, ಆಹಾರ ಮತ್ತು ವಸತಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಧಮಿ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.