![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 21, 2023, 5:53 PM IST
ಲಕ್ನೋ: ಕ್ಷುಲಕ ಕಾರಣಕ್ಕೆ ಮಗನನ್ನೇ ಕೊಲೆಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಭಾನುವಾರ(ನ.19 ರಂದು) ನಡೆದ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಈ ಘಟನೆ ನಡೆದಿದೆ.
ಮನೆಯಲ್ಲಿ ಗಣೇಶ್ ಪ್ರಸಾದ್ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸುತ್ತಿದ್ದರು. ಈ ವೇಳೆ ಮಗ ದೀಪಕ್ ನಿಶಾದ್ ಅಪ್ಪ ಮೊದಲು ರಾತ್ರಿಯ ಊಟವನ್ನು ತಯಾರಿಸಿ ನಂತರ ಕ್ರಿಕೆಟ್ ನೋಡಿಯೆಂದು ಹೇಳಿದ್ದಾನೆ. ಎಷ್ಟು ಹೇಳಿದರೂ ಕೇಳದ್ದಕ್ಕೆ ಮಗ ದೀಪಕ್ ಸೀದಾ ಹೋಗಿ ಟಿವಿಯ ಸ್ವಿಚ್ ನ್ನು ಆಫ್ ಮಾಡಿದ್ದಾನೆ. ಇದರಿಂದ ತಂದೆ – ಮಗನ ನಡುವೆ ವಾಗ್ವಾದ ಶುರುವಾಗಿದೆ. ಇದಾದ ಬಳಿಕ ದೈಹಿಕವಾಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸಿಟ್ಟಾದ ತಂದೆ ಗಣೇಶ್ ವಿದ್ಯುತ್ ತಂತಿಯಿಂದ ಮಗನ ಕತ್ತು ಹಿಸುಕಿ ಕೊಲೆ ಮಾಡಿ, ಪರಾರಿ ಆಗಿದ್ದು, ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದಾರೆ.
ದೀಪಕ್ ಮತ್ತು ಗಣೇಶ್ ನಡುವೆ ಕುಡಿತದ ಚಟದ ಬಗ್ಗೆ ಆಗಾಗ ವಾಗ್ವಾದಗಳು ನಡೆಯುತ್ತಿದ್ದವು. ಕ್ರಿಕೆಟ್ ಪಂದ್ಯದ ವೇಳೆ ನಡೆದ ವಾಗ್ವಾದ ಕೊಲೆಗೆ ಕಾರಣವಾಯಿತೆಂದು ಚಾಕೇರಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಬ್ರಿಜ್ ನಾರಾಯಣ್ ಸಿಂಗ್ ಹೇಳಿದ್ದಾರೆ.
ಆರೋಪಿಯನ್ನು ಕಸ್ಟಡಿಗೆ ಒಪ್ಪಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.