KSRTC ಬೆಳ್ತಂಗಡಿ-ಬೆಂಗಳೂರು ಪಲ್ಲಕ್ಕಿ ಬಸ್‌ ಆರಂಭ


Team Udayavani, Nov 22, 2023, 12:06 AM IST

KSRTC ಬೆಳ್ತಂಗಡಿ-ಬೆಂಗಳೂರು ಪಲ್ಲಕ್ಕಿ ಬಸ್‌ ಆರಂಭ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪಲ್ಲಕ್ಕಿ ಬಸ್‌ನ ಮೂಲಕ ಬೆಳ್ತಂಗಡಿ – ಬೆಂಗಳೂರು ನಡುವಣ ಪ್ರಯಾಣವನ್ನು ಮತ್ತಷ್ಟು ಹತ್ತಿರ ಮತ್ತು ಸುಗಮಗೊಳಿಸಿದೆ. ಪ್ರತೀ ದಿನ ಈ ಬಸ್‌ಗಳ ಸೇವೆ ತಾಲೂಕಿನ ಜನತೆಗೆ ದೊರಕಲಿದೆ ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

ಕೆಎಸ್ಸಾರ್ಟಿಸಿಯು ರಾಜ್ಯಾದ್ಯಂತ ಆರಂಭಿಸಿರುವ ಪಲ್ಲಕ್ಕಿ ಬಸ್‌ ಸೇವೆಯ ಪ್ರಯುಕ್ತ ಸೋಮವಾರ ಬೆಳ್ತಂಗಡಿ ಬಸ್‌ ನಿಲ್ದಾಣದಲ್ಲಿ ಬೆಳ್ತಂಗಡಿ- ಬೆಂಗಳೂರು ಮಧ್ಯೆ ನೂತನ ಬಸ್‌ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪುತ್ತೂರು ವಿಭಾಗಕ್ಕೆ 4 ಪಲ್ಲಕ್ಕಿ ಬಸ್‌ಗಳನ್ನು ಒದಗಿಸಲಾಗಿತ್ತು. 2 ಬಸ್‌ಗಳನ್ನು ಬೆಳ್ತಂಗಡಿಗೆ ನೀಡಲಾಗಿದೆ. 1 ಬಸ್‌ ಬೆಳ್ತಂಗಡಿಯಿಂದ ಬೆಂಗಳೂರಿಗೆ ಮತ್ತೂಂದು ಬೆಂಗಳೂರಿನಿಂದ ಬೆಳ್ತಂಗಡಿಗೆ ಸಂಚರಿಸಲಿದೆ. ತಾಲೂಕಿನ ಜನತೆಗೆ ಉತ್ತಮ ರೀತಿಯ ಬಸ್‌ನ ವ್ಯವಸ್ಥೆ ಬೇಕು ಎನ್ನುವ ಬೇಡಿಕೆ ಇಂದು ಈಡೇರಿದೆ ಎಂದರು.

ಸುಸಜ್ಜಿತ ಬಸ್‌ ಸೇವೆ
ಹಸುರು ನಿಶಾನೆ ತೋರಿಸುವ ಮೂಲಕ ಬಸ್‌ ಸಂಚಾರಕ್ಕೆ ಚಾಲನೆ ನೀಡಿದ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಮಾತನಾಡಿ, ಬದುಕು ಒಂದು ಪಯಣ, ಅದನ್ನು ಸುಂದರವಾಗಿಸಲು ಕೆಎಸ್ಸಾರ್ಟಿಸಿ ಉತ್ತಮವಾದ ವ್ಯವಸ್ಥೆಯನ್ನು ಮಾಡುತ್ತಿದೆ. ಜನತೆಯ ಬೇಡಿಕೆಗೆ ಅನುಗುಣ ವಾಗಿ ಸುಸಜ್ಜಿತ ಬಸ್‌ ಸೇವೆಯಾಗಿ ಇಂದಿನ ಕಾಲದ ಅಗತ್ಯಕ್ಕೆ ತಕ್ಕಂತೆ ಪಲ್ಲಕ್ಕಿ ಬಸ್‌ ಇದೆ ಎಂದು ಹೇಳಿದರು.

ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಘಟಕ ವ್ಯವಸ್ಥಾಪಕ ಉದಯ್‌ ಕುಮಾರ್‌ ಶೆಟ್ಟಿ, ಕಾರ್ಮಿಕ ಕಲ್ಯಾಣಧಿಕಾರಿ ಸೋಮಶೇಖರ್‌, ಭದ್ರತಾ ಮತ್ತು ಜಾಗ್ರತ ಅಧಿಕಾರಿ ಶರತ್‌, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್‌ ಗೌಡ ನಾವೂರು, ಉಪಾಧ್ಯಕ್ಷ ಸೀತಾರಾಮ ಬೆಳಾಲು, ಪಟ್ಟಣ ಪಂಚಾಯತ್‌ ನಿಕಟಪೂರ್ವ ಉಪಾ ಧ್ಯಕ್ಷ ಜಯಾನಂದ ಗೌಡ, ಸದಸ್ಯ ಶರತ್‌ ಕುಮಾರ್‌ಸೇರಿದಂತೆ ಬಿಜೆಪಿ ಪ್ರಮುಖರು, ಕೆಎಸ್ಸಾರ್ಟಿಸಿ ಸಿಬಂದಿ ಉಪಸ್ಥಿತರಿದ್ದರು.

ಪಲ್ಲಕ್ಕಿ ಬಸ್‌ನಲ್ಲಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸರಕಾರದ ಪ್ರತಿನಿಧಿ ಯಾಗಿ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಅವರು ಮೊದಲ ಪ್ರಯಾಣ ಬೆಳೆಸಿದರು.

ರಾಜ್ಯದಲ್ಲಿ 50, ಪುತ್ತೂರು ವಿಭಾಗಕ್ಕೆ 4, ಧರ್ಮಸ್ಥಳ ಘಟಕಕ್ಕೆ 2 ಪಲ್ಲಕ್ಕಿ ಬಸ್‌ಗಳು ಸೇವೆ ಆರಂಭಿಸಿದೆ.

ಬೆಳ್ತಂಗಡಿಯಿಂದ ರಾತ್ರಿ 9.45ಕ್ಕೆ, ಬೆಂಗಳೂರಿಂದ ಬೆಳ್ತಂಗಡಿಗೆ ರಾತ್ರಿ 9.30ಕ್ಕೆ ಸಂಚಾರ ಆರಂಭ

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.