Elephant: ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ
Team Udayavani, Nov 22, 2023, 6:59 PM IST
ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸದಸ್ಯನೇ ಬಲಿಯಾದ ಘಟನೆ ನಡೆದಿದೆ.
ಕಾರ್ತಿಕ್ ಗೌಡ (26) ಮೃತ ದುರ್ದೈವಿಯಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆಯಿಂದ ಎರಡು ತಿಂಗಳಲ್ಲಿ ಮೂರು ಜನ ಕಾಡಾನೆ ದಾಳಿಗೆ ಬಲಿಯಾದಂತಾಗಿದೆ.
20 ದಿನಗಳೊಳಗೆ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತ ಕಾರ್ತಿಕ್ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿಯಾಗಿದ್ದು, ಸರಕಾರ ರಚಿಸಿದ್ದ ಆನೆ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದರು.ಆನೆ ಓಡಿಸುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.20 ದಿನದ ಹಿಂದೆ ಆಲ್ದೂರಿನಲ್ಲಿ ವೀಣಾ ಎನ್ನುವವರು,ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪ ಚಿನ್ನಿ ಎನ್ನುವವರು ಆನೆ ದಾಳಿಗೆ ಬಲಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.