Open AI: ಸಿಇಒ ಆಗಿ ಆಲ್ಟ್ಮನ್‌ ವಾಪಸ್‌!


Team Udayavani, Nov 23, 2023, 12:15 AM IST

altman

ಸ್ಯಾನ್‌ ಫ್ರಾನ್ಸಿಸ್ಕೋ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ (ಎ.ಐ.) ಕಂಪೆನಿ ಓಪನ್‌ ಎಐನಲ್ಲಿ ಮತ್ತೂಮ್ಮೆ ನಾಟಕೀಯ ಬೆಳವಣಿಗೆಗಳು ನಡೆದಿವೆ. ಕೆಲವೇ ದಿನಗಳ ಹಿಂದೆ ಆ ಸಂಸ್ಥೆಯ ಹುಟ್ಟಿಗೆ ಕಾರಣರಾಗಿದ್ದ ಸ್ಯಾಮ್‌ ಆಲ್ಟ್ಮನ್‌ರನ್ನು ಹೊರಹಾಕಲಾಗಿತ್ತು. ಇದೀಗ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ ಮಧ್ಯಸ್ಥಿಕೆಯೊಂದಿಗೆ, ಸಿಇಒ (ಮುಖ್ಯ ಕಾರ್ಯನಿರ್ವಹಣಾ­ಧಿಕಾರಿ) ಆಗಿ ಆಲ್ಟ್ ಮನ್‌ ಕಂಪೆನಿಗೆ ಮರಳಿದ್ದಾರೆ! ಮುಂದಿನ ಐದು ದಿನಗಳಲ್ಲಿ ಈ ಪ್ರಕ್ರಿಯೆಗಳು ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಇದರ ಜತೆಗೆ ಓಪನ್‌ ಎಐಗೆ ಹೊಸ ಆಡಳಿತ ಮಂಡಳಿಯನ್ನೂ ರಚಿಸಲಾಗಿದೆ. ಸೇಲ್ಸ್‌ಫೋರ್ಸ್‌ ಎಂಬ ಸಾಫ್ಟ್ವೇರ್‌ ಕಂಪೆನಿಯ ಮಾಜಿ ಸಹ ಸಿಇಒ ಬ್ರೆಟ್‌ ಟೇಲರ್‌ ಅದರ ನೇತೃತ್ವ ವಹಿಸಲಿದ್ದಾರೆ. ಹೊಸತರಲ್ಲಿ ಆಲ್ಟ್ ಮನ್‌ ಅವರನ್ನು ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಆ್ಯಡಮ್‌ ಡಿ ಆ್ಯಂಗ್ಲೋ, ಅಮೆರಿಕದ ಹಣಕಾಸು ಖಾತೆ ಮಾಜಿ ಸಚಿವ ಲಾರಿ ಸಮನ್ಸ್‌ ಸೇರಿದಂತೆ ಹಲವರು ಇರಲಿದ್ದಾರೆ.

ಆಲ್ಟ್ಮನ್‌ ಹೇಳಿದ್ದೇನು?: ಈ ಬೆಳವಣಿಗೆಯ ಅನಂತರ ಸ್ಯಾಮ್‌ ಆಲ್ಟ್ಮನ್‌ ಟ್ವೀಟ್‌ ಮಾಡಿದ್ದು “ನಾನು ಓಪನ್‌ ಎಐ ಕಂಪೆನಿಯನ್ನು ಪ್ರೀತಿಸುತ್ತೇನೆ. ಕಳೆದ ಕೆಲವು ದಿನಗಳಿಂದ ಸಂಸ್ಥೆಗಾಗಿ ಮತ್ತು ಹಾಲಿ ತಂಡಕ್ಕಾಗಿ ಕೆಲಸ ಮಾಡುತ್ತಿದ್ದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿಕೊಂಡು ಮುಂದಕ್ಕೆ ಸಾಗೋಣ’ ಎಂದು ಬರೆದುಕೊಂಡಿದ್ದಾರೆ. ಇದರ ಜತೆಗೆ ಗ್ರೆಗ್‌ ಬ್ರೋಕ್‌ಮನ್‌ ಅವರು ಕೂಡ ಕಂಪೆನಿಗೆ ಮರಳಿದ್ದಾರೆ. ಈ ನಿಟ್ಟಿನಲ್ಲಿ ಅವರು ತಮ್ಮ ಸಹೋದ್ಯೋಗಿಗಳ ಜತೆಗೆ ಸೆಲ್ಫಿ ತೆಗೆದುಕೊಂಡು “ನಾವು ಮತ್ತೆ ಬಂದಿದ್ದೇವೆ’ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ

ಹಿಂದೆ ಆಗಿದ್ದೇನು?: ನ.19ರಂದು ನಡೆದಿದ್ದ ನಾಟಕೀಯ ಬೆಳವಣಿಗೆಯಲ್ಲಿ ಸ್ಯಾಮ್‌ ಆಲ್ಟ್ಮನ್‌ ಮತ್ತು ಅಧ್ಯಕ್ಷ ಗ್ರೆಗ್‌ ಬ್ರೋಕ್‌ಮನ್‌ ಅವರನ್ನು ವಜಾ ಮಾಡಲಾಗಿತ್ತು. ಇದಾದ ಬಳಿಕ ಓಪನ್‌ ಎಐನ 750ಕ್ಕೂ ಅಧಿಕ ಮಂದಿ ಹುದ್ದೆಗೆ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದರು. ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ ಸೇರಿದಂತೆ ತಾಂತ್ರಿಕ ಕ್ಷೇತ್ರದ ಮಾತುಕತೆಯ ಬಳಿಕ ವಿವಾದ ಸುಖಾಂತ್ಯಗೊಳ್ಳುವತ್ತ ಸಾಗಿದೆ. ಓಪನ್‌ ಎಐನಲ್ಲಿ ಮೈಕ್ರೋಸಾಫ್ಟ್ ಕೂಡ ಬಂಡವಾಳ ಹೂಡಿಕೆ ಮಾಡಿತ್ತು. ಹೀಗಾಗಿ ನಾದೆಳ್ಲ ಸ್ಯಾಮ್‌ ಆಲ್ಟ್ಮನ್‌ರನ್ನು ಹುದ್ದೆಯಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಂಗಳವಾರ ನಡೆದಿದ್ದ ಮತ್ತೂಂದು ಬೆಳವಣಿಗೆಯಲ್ಲಿ ಮೈಕ್ರೋಸಾಫ್ಟ್ನ ಹೊಸ ಕೃತಕ ಬುದ್ಧಿಮತ್ತೆ ಸಂಶೋಧನ ತಂಡಕ್ಕೆ ಸ್ಯಾಮ್‌ ಆಲ್ಟ್ ಮನ್‌ರನ್ನೇ ಸಿಇಒ ಆಗಿ ನೇಮಿಸಿರುವ ಬಗ್ಗೆ ನಾದೆಳ್ಲ ಪ್ರಕಟಿಸಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.