Fraud ಆರೋಪಿಯಿಂದ ತಪ್ಪು ಮಾಹಿತಿ: ಕುತ್ಲೂರಿನ ಮನೆಗೆ ತಡರಾತ್ರಿ ನಕ್ಸಲರ ಭೇಟಿ ವದಂತಿ


Team Udayavani, Nov 23, 2023, 12:41 AM IST

Fraud ಆರೋಪಿಯಿಂದ ತಪ್ಪು ಮಾಹಿತಿ: ಕುತ್ಲೂರಿನ ಮನೆಗೆ ತಡರಾತ್ರಿ ನಕ್ಸಲರ ಭೇಟಿ ವದಂತಿ

ಬೆಳ್ತಂಗಡಿ: ಕುತ್ಲೂರಿನಲ್ಲಿ ಮನೆಯೊಂದಕ್ಕೆ ಮಂಗಳವಾರ ತಡರಾತ್ರಿ ನಕ್ಸಲರು ಭೇಟಿ ನೀಡಿದ್ದರು ಎಂಬ ವದಂತಿಯೊಂದು ಬುಧವಾರ ಬೆಳಗ್ಗೆ ಸೃಷಿಯಾಗಿತ್ತು. ಆದರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಮತ್ತು ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರು ಸ್ಪಷ್ಟನೆ ನೀಡಿದ್ದು, ಪ್ರಕರಣವೊಂದರ ತನಿಖೆಗಾಗಿ ಮೂಡುಬಿದಿರೆ ಪೊಲೀಸರು ಅಲ್ಲಿಗೆ ತೆರಳಿದ್ದರು ಎಂದು ತಿಳಿಸಿದ್ದಾರೆ.

ಕುತ್ಲೂರು ಗ್ರಾಮದ ನಿವಾಸಿ ಜೋಸಿ ಆಂಟೋನಿ ತನ್ನ ಮನೆಗೆ ರಾತ್ರಿಯ ವೇಳೆ ಮಹಿಳೆ ಸೇರಿದಂತೆ ಅಪರಿಚಿತರ ತಂಡ ಬಂದು ಬಾಗಿಲು ಬಡಿದಿದೆ; ಆದರೆ ನಾನು ಬಾಗಿಲು ತೆರೆಯಲಿಲ್ಲ ಎಂದು ನ. 21ರ ರಾತ್ರಿ ಪೊಲೀಸರ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ ಹೇಳಿದ್ದರು. ಅವರು ಪೊಲೀಸರು ಎಂದು ಹೇಳಿದರೂ ಸಮವಸ್ತ್ರದಲ್ಲಿರದ ಕಾರಣ ಅನುಮಾನವಿದೆ, ನಕ್ಸಲರಾಗಿ ರಬಹುದು ಎಂಬ ಹೇಳಿಕೆಯನ್ನು ನೀಡಿದ್ದು ಇದು ಹಲವಾರು ಗೊಂದಲ ಗಳಿಗೆ ಕಾರಣವಾಗಿತ್ತು.

ಮಾಹಿತಿ ತಿಳಿದ ತತ್‌ಕ್ಷಣ ಬೆಳ್ತಂಗಡಿ ವೃತ್ತನಿರೀಕ್ಷಕ ನಾಗೇಶ್‌ ಕದ್ರಿ, ವೇಣೂರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು.

ನಿಜ ವಿಚಾರ ಏನು?
ಇಲ್ಲಿನ ಜೋಸಿ ಆಂಟೋನಿ ತನ್ನ ಒಂದು ಜಾಗವನ್ನು ಬೆಂಗಳೂರಿನ ಸುಹನಾ ಅವರಿಗೆ 45 ಲಕ್ಷಕ್ಕೆ ರೂ.ಗೆ ಅಗ್ರಿಮೆಂಟ್‌ ಮಾಡಿದ್ದು 24 ಲಕ್ಷ ರೂ. ಚೆಕ್‌ ಮೂಲಕ ಪಡೆದಿದ್ದರು. ಅಂತೆಯೇ ಬೆಂಗಳೂರಿನ ಶರತ್‌ ಅವರಿಗೆ 48 ಲಕ್ಷ ರೂ.ಗೆ ಅಗ್ರಿಮೆಂಟ್‌ ಮಾಡಿ 19 ಲಕ್ಷ ರೂ. ಚೆಕ್‌ ಮೂಲಕ ಪಡೆದು ವಂಚಿಸಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ನ. 17ರಂದು ಮೂಡುಬಿದಿರೆ ಪೊಲೀಸ್‌ ಠಾಣೆಗೆ ಸಂತ್ರಸ್ತರಿಂದ ದೂರು ಬಂದಿದ್ದು, ವಿಚಾರಣೆಗಾಗಿ ಪೊಲೀಸರು ಫೋನ್‌ ಮೂಲಕ ಸಂಪರ್ಕಸಿದಾಗ ಆತ ಸಂರ್ಪಕಕ್ಕೆ ಸಿಕ್ಕಿರಲಿಲ್ಲ. ಅಂದೇ ಮಧ್ಯಾಹ್ನ ಠಾಣೆಯ ಸಿಬಂದಿ ದೂರುದಾರ ರೊಂದಿಗೆ ಜೋಸಿಯ ಮನೆಗೆ ನೋಟಿಸ್‌ ನೀಡಲು ತೆರಳಿದ್ದು ಆಗಲೂ ಆತ ಮನೆಯಲ್ಲಿ ಇರಲಿಲ್ಲ. ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದ. ಸ್ಥಳೀಯರಲ್ಲಿ ವಿಚಾರಿಸಿದಾಗ ಆತ ಹಗಲು ವೇಳೆ ಮನೆಯಲ್ಲಿ ಇರುವುದಿಲ್ಲ. ರಾತ್ರಿ 9ರ ಬಳಿಕ ಮನೆಗೆ ಬರುತ್ತಾನೆ ಎಂದು ತಿಳಿಸಿದ್ದರು. ಅದರಂತೆ ನ. 21ರಂದು ರಾತ್ರಿ 9 ಗಂಟೆಯ ಅನಂತರ ಪೊಲೀಸರು ಜೋಸಿಯ ಮನೆಗೆ ಹೋಗಿದ್ದರು. ಬಾಗಿಲು ತೆರೆಯದ ಕಾರಣ ನೋಟಿಸ್‌ ಜಾರಿ ಮಾಡದೆ ವಾಪಸಾಗಿದ್ದಾರೆ. ಇದನ್ನು ಜೋಸಿ ತಪ್ಪಾಗಿ ಗ್ರಹಿಸಿ ನಕ್ಸಲರು ಬಂದಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಉಭಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.