ಬಸವಣ್ಣನ ಹೆಸರಿನಲ್ಲಿ ಕೋಟಿ ಕೋಟಿ ಹಣ ಕೊಳ್ಳೆ ಹೊಡೆಯುವವರು ಹುಟ್ಟಿಕೊಂಡಿದ್ದಾರೆ: ಸಚಿವ ಸೇಡಂ


Team Udayavani, Nov 24, 2023, 3:02 PM IST

ಬಸವಣ್ಣನ ಹೆಸರಿನಲ್ಲಿ ಕೋಟಿ ಕೋಟಿ ಹಣ ಕೊಳ್ಳೆ ಹೊಡೆಯುವವರು ಹುಟ್ಟಿಕೊಂಡಿದ್ದಾರೆ: ಸಚಿವ ಸೇಡಂ

ವಾಡಿ: ವಚನ ಸಾಹಿತ್ಯದ ಮೂಲಕ ವ್ಯವಸ್ಥೆಯ ವಿರುದ್ಧ ಬಂಡೆದ್ದ ಬಸವಣ್ಣನ ಹೆಸರಿನಲ್ಲಿ ಕೋಟಿ ಕೋಟಿ ಹಣ ಕೊಳ್ಳೆ ಹೊಡೆಯುವವರು ಹುಟ್ಟಿಕೊಂಡಿದ್ದಾರೆ. ಆದರೆ ಬಸವಕಲ್ಯಾಣ ಅಭಿವೃದ್ಧಿ ಕಾಣದೆ ಭಣಗುಡುತ್ತಿದೆ ಎಂದು ಮಾಜಿ ಸಂಸದ ಡಾ.ಬಸವರಾಜ ಪಾಟೀಲ ಸೇಡಂ ಅಸಮಾದಾನ ವ್ಯಕ್ತಪಡಿಸಿದರು.

ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ವತಿಯಿಂದ ಚಿತ್ತಾಪುರ ತಾಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ “ನಾಗಾವಿ ನಾಡಿನ ಸಾಹಿತಿಗಳು” ಗ್ರಂಥ ಲೋಕಾರ್ಪಣೆ, ಪರಿಷತ್ತಿನ ಪ್ರಥಮ ವಾರ್ಷಿಕೋತ್ಸವ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ತಳಹದಿಯ ಅನುಭವ ಮಂಟಪ ಸ್ಥಾಪನೆಗೊಂಡಿದ್ದ ನೆಲ ಬಸವಕಲ್ಯಾಣ ಇಂದಿಗೂ ಭಾರತದ ಪ್ರವಾಸೋದ್ಯಮದ ಪಟ್ಟಿಯಲ್ಲಿ ಸೇರಿಲ್ಲ. 12ನೇ ಶತಮಾನದ ಶಿವಶರಣೆಯರ ಇತಿಹಾಸವನ್ನೂ ಕಡೆಗಣಿಸಲಾಗಿದೆ. ಶರಣರು ಬದುಕಿ ಬಾಳಿದ ಐತಿಹಾಸಿಕ ಸ್ಥಳಗಳು ಸ್ಮಾರಕಗಳಾಗಿ ಅಭಿವೃದ್ಧಿ ಹೊಂದಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಒಳ್ಳೆಯ ಸಾಹಿತಿಗಳು ಬೇಗ ಜಗತ್ತಿಗೆ ಗೊತ್ತಾಗಲ್ಲ. ಅಂತಹ ಪ್ರತಿಭೆಗಳನ್ನು ಗುರುತಿಸಿ ಬೆಳಕು ಚೆಲ್ಲುವ ಕಾರ್ಯ ಸಾಹಿತ್ಯ ವೇದಿಕೆಗಳು ಮಾಡಬೇಕು. ಬರಹ ಲೋಕದಲ್ಲಿ ಬೆಳೆಯಲು ಬಯಸಿದ ಬಂಡಾಯ ಸಾಹಿತಿ ಚೆನ್ನಣ್ಣ ವಾಲೀಕಾರ ವಾದಗಳಲ್ಲಿ ಸಿಲುಕಿ ಸಂಘರ್ಷದಲ್ಲೇ ಸಾಹಿತ್ಯ ಬದುಕು ಮುಗಿಸಿದರು. ವಾದಗಳು ಭಿನ್ನವಾಗಿದ್ದರೂ ಚರ್ಚೆ ಸಂಘರ್ಷ ನಡೆದರೂ ಒಬ್ಬರನ್ನೊಬ್ಬರು ಪರಸ್ಪರ ಸೇರಲೇಬೇಕು. ಗುಡಿಸಲಲ್ಲಿ ಹಚ್ಚಿದ ಸಾಹಿತ್ಯ ದೀಪ ಸಾವಿರಾರು ಜ್ಯೋತಿ ಗಳಾಗಿ ಬೆಳಗಬೇಕು ಎಂದರು.

ಗ್ರಂಥ ಪರಿಚಯಿಸಿ ಮಾತನಾಡಿದ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರು, ಕಲಬುರಗಿ ಜಿಲ್ಲೆಯಲ್ಲಿ ಸಾಹಿತಿಗಳ ಕೊರತೆಯಿಲ್ಲ. ಚಿತ್ತಾಪುರ ತಾಲುಕಿನಲ್ಲೂ ಬರಹಗಾರ ಕೊರತೆಯಿಲ್ಲ. ಚಿತ್ತಾಪುರ ಸಾಂಸ್ಕೃತಿಕವಾಗಿ ಹಿಂದುಳಿದಿಲ್ಲ. ಬರೆದ ಸಾಹಿತ್ಯವನ್ನು ಪ್ರಕಟಿಸುವಲ್ಲಿ ಚಿತ್ತಾಪುರದ ಬರಹಗಾರರು ಹಿಂದುಳಿದಿದ್ದಾರೆ.

ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಕಾಶೀನಾಥ ಗುತ್ತೇದಾರ ಅಧ್ಯಕ್ಷತೆ ವಹಿಸಿದ್ದರು. ರಾಯಚೂರು ಕೃಷಿ ವಿವಿ ಮಾಜಿ ನಿರ್ದೇಶಕ ವೀರಣ್ಣಗೌಡ ಪರಸರೆಡ್ಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬದವರಾಜ ಬಳೂಂಡಗಿ, ಕ್ರೈಂ ಪಿಎಸ್ ಐ ಚಂದ್ರಾಮಪ್ಪ, ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಜನಪದ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿ.ಎಸ್.ಮಾಲಿಪಾಟೀಲ, ಸಾಹಿತಿ ಲಿಂಗಪ್ಪ ಮಲ್ಕನ್, ಸಿದ್ದಯ್ಯಸ್ವಾಮಿ ಮಲಕೂಡ ಸೇರಿದಂತೆ ತಾಲೂಕಿನ ಬರಹಗಾರರು ಪಾಲ್ಗೊಂಡಿದ್ದರು. ವೀರಸಂಗಪ್ಪ ಸುಲೇಗಾಂವ ಸ್ವಾಗತಿಸಿದಿದರು. ನರಸಪ್ಪ ಚಿನ್ನಾಕಟ್ಟಿ ನಿರೂಪಿಸಿ, ವಂದಿಸಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: Shivamogga: ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

ಟಾಪ್ ನ್ಯೂಸ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.