Bengaluru ಕಂಬಳದ ಜೊತೆಗೆ ಕರಾವಳಿ ಸಂಸ್ಕೃತಿಯ ಅನಾವರಣ; ನೋಡಬನ್ನಿ ರಾಜ ಮಹಾರಾಜಾ ಕಂಬಳ


Team Udayavani, Nov 24, 2023, 3:21 PM IST

11-bng-kambala

ಬೆಂಗಳೂರು: ಇದುವರೆಗೆ ಹಲವು ರೀತಿಯ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹೊಸ ಲೋಕವೇ ತೆರೆದಂತಿದೆ. ವಿಶಾಲ ಮೈದಾನದಲ್ಲಿ ಒಂದೆಡೆ ಕೋಣಗಳ ಓಟಕ್ಕೆ ಸಜ್ಜಾಗಿರುವ ಸುಂದರ ಕಂಬಳ ಕೆರೆಯಾದರೆ ಮತ್ತೊಂದೆಡೆ ಯಾವಾಗ ಸ್ಪರ್ಧೆ ಆರಂಭವಾಗುತ್ತದೆಯೋ ಎಂದು ಕಾದು ಕುಳಿತಿರುವ ಕೋಣಗಳು, ಯಜಮಾನರು.

ಮೈದಾನದ ಮತ್ತೊಂದೆಡೆ ಸಾಂಸ್ಕೃತಿಕ ವೈಭವಕ್ಕೆ ಸಜ್ಜಾಗಿರುವ ವಿಶಾಲ ವೇದಿಕೆ, ಮತ್ತೊಂದೆಡೆ ಆಹಾರ ಮೇಳದ ಟೆಂಟ್ ಗಳಿಂದ ಘಮ್ಮನೆ ಬರುತ್ತಿರುವ ಸುವಾಸನೆ… ಇದಕ್ಕೆಲ್ಲ ಕಾರಣವಾಗಿರುವುದು ಐತಿಹಾಸಿಕ ದಾಖಲೆ ಬರೆಯಲು ಮುಂದಾದ ಬೆಂಗಳೂರು ರಾಜ ಮಹಾರಾಜಾ ಜೋಡುಕೆರೆ ಕಂಬಳ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶಾಲ ಪ್ರದೇಶದಲ್ಲಿ ಇದೆ ಮೊದಲ ಬಾರಿಗೆ ಕಂಬಳ ಆಯೋಜಿಸಲು ಬೆಂಗಳೂರು ಕಂಬಳ ಸಮಿತಿ ಮುಂದಾಗಿದೆ. ಕರಾವಳಿಯಿಂದ ಹೊರಗೆ ಇದೆ ಮೊದಲ ಬಾರಿಗೆ ಕಂಬಳ ನಡೆಯುತ್ತಿದೆ. ಹೀಗಾಗಿ ಕೇವಲ ಕಂಬಳ ಮಾತ್ರವಲ್ಲದೆ ಕರಾವಳಿ ಮಣ್ಣಿನ ಸೊಗಡಿನ ಕಂಪನ್ನು ರಾಜಧಾನಿ ಬೆಂಗಳೂರಿಗೆ ಪಸರಿಸಲು ಸಿದ್ಧತೆ ನಡೆಸಲಾಗಿದೆ

ಕಂಬಳ ಕರೆಯ ಪಕ್ಕದಲ್ಲಿರುವ ವಿಶಾಲ ಜಗದಲ್ಲಿ ಆಹಾರ ಮೇಳಕ್ಕೆ ಅವಕಾಶ ಕಲ್ಪಿಸಲಾಗಿದೆ. ಕರಾವಳಿಯ ಆಹಾರ ಪದ್ದತಿಯ ಪ್ರಮುಖವಾಗಿ ಸೇರಿದಂತೆ ಸುಮಾರು 150ಕ್ಕೂ ಹೆಚ್ಚು ಆಹಾರ ಮಳಿಗೆಗಳು ಇಲ್ಲಿವೆ.

ಇಲ್ಲಿನ ಮೈದಾನದಲ್ಲಿ ತುಳುನಾಡು ಮತ್ತು ಕರಾವಳಿಯನ್ನು ಪ್ರತಿನಿಧಿಸುವ ಹಲವು ಪ್ರತಿಕೃತಿಗಳನ್ನು ಸ್ಥಾಪಿಸಲಾಗಿದೆ. ಯಕ್ಷಗಾನದ ವೇಷಧಾರಿ, ಯಕ್ಷಗಾನದ ಬೃಹತ್ ಕಿರೀಟ, ಬತ್ತದ ಕಣಜ, ಸಿರಿ ತುಪ್ಪೆ, ಕಂಬಳ ಕೋಣಗಳು, ಎತ್ತಿನಗಾಡಿ, ಗೋಮಟೇಶ್ವರ ಪ್ರತಿಮೆ, ಕೋಟಿ  ಚೆನ್ನಯರ ಮೂರ್ತಿಗಳನ್ನು ಇಲ್ಲಿ ಇರಿಸಲಾಗಿದೆ.

ಕಂಬಳ ಆರಂಭಕ್ಕೆ ಒಂದು ದಿನ ಮೊದಲೇ ಬಂದಿರುವ ಜನರು ಇದರ ಬಳಿ ಫೋಟೋ, ಸೆಲ್ಫಿ ಪಡೆಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಇಷ್ಟೇ ಅಲ್ಲದೆ ತುಳುನಾಡ ಮೂಲ ನಂಬಿಕೆಯಾದ  ನಾಗಾರಾಧನೆಯ ನಾಗಬನ, ದೈವಾರಾಧನೆಯ ದೈವದ ಮನೆಯ ಮಾದರಿಯನ್ನು ಮಾಡಿ ಬೆಂಗಳೂರಿಗರಿಗೆ ತುಳುನಾಡ ಸಂಸ್ಕೃತಿಯ ಪರಿಚಯ ಮಾಡುವ ಪ್ರಯತ್ನ ನಡೆಯುತ್ತಿದೆ.

-ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.