Kollywood: ʼಫೀನಿಕ್ಸ್ʼ ಮೂಲಕ ಹೀರೋ ಆಗಿ ಎಂಟ್ರಿ ಆಗಲಿದ್ದಾರೆ ಸೇತುಪತಿ ಪುತ್ರ
Team Udayavani, Nov 24, 2023, 4:33 PM IST
ಚೆನ್ನೈ: ನಟ ವಿಜಯ್ ಸೇತುಪತಿ ಅವರ ಪುತ್ರ ಮೊದಲ ಬಾರಿಗೆ ನಾಯಕರಾಗಿ ಸಿನಿಮಾವೊಂದರಲ್ಲಿ ಕಾಣಿಸಿಕೊಳ್ಳಲಿದ್ದು, ಸಿನಿಮಾದ ಮುಹೂರ್ತ ಶುಕ್ರವಾರ (ನ.24 ರಂದು) ಚೆನ್ನೈನಲ್ಲಿ ನೆರವೇರಿದೆ.
ವಿಜಯ್ ಸೇತುಪತಿ ಅವರ ಮಗ ಸೂರ್ಯ ಸೇತುಪತಿಗೆ ಸಿನಿಮಾರಂಗ ಹೊಸತಲ್ಲ. ಬಾಲನಟನಾಗಿ ಈಗಾಗಲೇ ನಟನೆಯಲ್ಲಿ ಮಿಂಚಿರುವ ಅವರು ಪೂರ್ಣ ಪ್ರಮಾಣದಲ್ಲಿ ನಾಯಕರಾಗಿ ʼ ಫೀನಿಕ್ಸ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
‘ನಾನು ರೌಡಿ ಧಾನ್’ ಮತ್ತು ‘ಸಿಂಧುಬಾಧ್’ ಸಿನಿಮಾದಲ್ಲಿ ಸೂರ್ಯ ಪಾತ್ರಗಳನ್ನು ಮಾಡಿದ್ದಾರೆ. ‘ಸಿಂಧುಬಾಧ್’ 2019 ರಲ್ಲಿ ಬಂದ ಸೇತುಪತಿ ಅವರ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಸೂರ್ಯ ತನ್ನ ತಂದೆಯೊಂದಿಗೆ ತೆರೆಹಂಚಿಕೊಂಡಿದ್ದರು.
ಕಾಲಿವುಡ್ ಸಿನಿರಂಗದ ಸಾಹಸ ನಿರ್ದೇಶಕ ಅನಲ್ ಅರಸು ʼಫೀನಿಕ್ಸ್ʼ ಮೊಲಕ ನಿರ್ದೇಶಕರಾಗಲಿದ್ದಾರೆ. ಇದೊಂದು ಮಾಸ್ ಕಥೆಯ ಸಿನಿಮಾವಾಗಲಿದ್ದು, ಮುಹೂರ್ತ ಕಾರ್ಯಕ್ರಮದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಬ್ರೇವ್ ಮ್ಯಾನ್ ಪಿಕ್ಚರ್ಸ್ ಅಡಿಯಲ್ಲಿ ರಾಜಲಕ್ಷ್ಮಿ ಅರಸಕುಮಾರ್ ಅವರು ‘ಫೀನಿಕ್ಸ್’ ನ್ನು ನಿರ್ಮಿಸಿದ್ದಾರೆ. ಚಿತ್ರದ ತಾಂತ್ರಿಕ ತಂಡದಲ್ಲಿ ಸಂಯೋಜಕ ಸ್ಯಾಮ್ ಸಿಎಸ್, ಛಾಯಾಗ್ರಾಹಕ ವೆಲ್ರಾಜ್ ಮತ್ತು ಸಂಕಲನಕಾರ ಪ್ರವೀಣ್ ಕೆಎಲ್ ಇದ್ದಾರೆ.
ಅಂದಹಾಗೆ ಮಗನ ಸಿನಿಮಾದಲ್ಲಿ ವಿಜಯ್ ಸೇತುಪತಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.