Pruthvi Shamanur: ಪೃಥ್ವಿಯಲ್ಲಿ ಭರವಸೆಯ ಬೆಳಕು


Team Udayavani, Nov 24, 2023, 6:12 PM IST

Pruthvi Shamanur: ಪೃಥ್ವಿಯಲ್ಲಿ ಭರವಸೆಯ ಬೆಳಕು

ಕಳೆದ ವರ್ಷ ತೆರೆಕಂಡ “ಪದವಿ ಪೂರ್ವ’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟನಾಗಿ ಪರಿಚಯವಾದ ಪ್ರತಿಭೆ ಪೃಥ್ವಿ ಶಾಮನೂರ್‌.ಮೊದಲ ಸಿನಿಮಾದಲ್ಲೇ ಸಿನಿಪ್ರಿಯರು ಮತ್ತು ಸಿನಿಮಾ ಮಂದಿಯ ಗಮನ ಸೆಳೆದ ದಾವಣಗೆರೆ ಮೂಲದ ಪೃಥ್ವಿ, ಇತ್ತೀಚೆಗೆ ತೆರೆಕಂಡ ಯೋಗರಾಜ್‌ ಭಟ್‌ ನಿರ್ದೇಶನದ, ಬಿ. ಸಿ. ಪಾಟೀಲ್‌ ನಿರ್ಮಾಣದ “ಗರಡಿ’ ಸಿನಿಮಾದಲ್ಲೂ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಬಾಲ್ಯದ ಪಾತ್ರದಲ್ಲೂ ಮಿಂಚಿದ್ದರು.

ತಮ್ಮ ಚೊಚ್ಚಲ ಸಿನಿಮಾದ ಅಭಿನಯಕ್ಕಾಗಿ “ಸೈಮಾ’ ಅತ್ಯುತ್ತಮ ಚೊಚ್ಚಲ ನಟ, “ಚಂದನವನ ಕ್ರಿಟಿಕ್ಸ್‌ ಅವಾರ್ಡ್ಸ್‌’ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಪೃಥ್ವಿ, ಸದ್ಯ ಉತ್ತರ ಕರ್ನಾಟಕದ ಕಥಾಹಂದರ ಹೊಂದಿರುವ ಸದ್ಯ ಮತ್ತೂಂದು ಔಟ್‌ ಆ್ಯಂಡ್‌ ಔಟ್‌ ಮಾಸ್‌ ಕಮರ್ಷಿಯಲ್‌ ಎಂಟರ್‌ಟೈನ್ಮೆಂಟ್‌ ಸಿನಿಮಾಕ್ಕೆ ತೆರೆಮರೆಯಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

“ದಾವಣಗೆರೆಯ ಸಣ್ಣ ಹಳ್ಳಿಯಲ್ಲಿದ್ದ ನಾನು ಮಾಡೆಲಿಂಗ್‌ ಲೋಕಕ್ಕೆ ಬಂದು, ಅಲ್ಲಿಂದ ಸಿನಿಮಾಕ್ಕೆ ಬಂದು ಇಂದು ಒಬ್ಬ ಕಲಾವಿದನಾಗಿ ಗುರುತಿಸಿಕೊಳ್ಳುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಮೊದಲ ಸಿನಿಮಾ “ಪದವಿ ಪೂರ್ವ’ ನನಗೆ ಸಾಕಷ್ಟು ವಿಷಯಗಳನ್ನು ಕಲಿಸಿತು. ಎರಡು-ಮೂರು ಸಿನಿಮಾದಲ್ಲಿ ಕಲಿಯಬೇಕಾಗಿರುವುದನ್ನು ಒಂದೇ ಸಿನಿಮಾದಲ್ಲಿ ಕಲಿಯುವ ಅವಕಾಶ ಸಿಕ್ಕಿತು. ಯೋಗರಾಜ್‌ ಭಟ್‌, ಹರಿಪ್ರಸಾದ್‌ ಅವರಂಥ ನಿರ್ದೇಶಕರು ನನ್ನನ್ನು ಒಬ್ಬ ನಟನಾಗುವಂತೆ ಮಾಡಿದರು’ ಎನ್ನುತ್ತಾರೆ ಪೃಥ್ವಿ.

“ಪದವಿ ಪೂರ್ವ’ ಸಿನಿಮಾಕ್ಕೆ ಒಳ್ಳೆಯ ಓಪನಿಂಗ್‌ ಸಿಕ್ಕಿತು. ಸಿನಿಮಾವನ್ನು ಥಿಯೇಟರ್‌, ಓಟಿಟಿ ಮತ್ತು ಟಿ.ವಿಯಲ್ಲಿ ನೋಡಿದ ಪ್ರೇಕ್ಷಕರು ಕೂಡ ನಮ್ಮ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿದರು. “ಪದವಿ ಪೂರ್ವ’ ಸಿನಿಮಾ ನಡೆಯುತ್ತಿರುವಾಗಲೇ “ಗರಡಿ’ ಸಿನಿಮಾದ ಆಫ‌ರ್‌ ಸಿಕ್ಕಿತು. ಅಲ್ಲೂ ನನಗೊಂದು ಪ್ರಮುಖ ಪಾತ್ರ ಸಿಕ್ಕಿತು. ನಿರ್ದೇಶಕ ಯೋಗರಾಜ್‌ ಭಟ್‌, ನಿರ್ಮಾಪಕ ಬಿ. ಸಿ. ಪಾಟೀಲ್‌ ನನ್ನನ್ನು ನಂಬಿ ಒಳ್ಳೆಯ ಪಾತ್ರ ಕೊಟ್ಟರು. ಸುಮಾರು ಮೂರು ತಿಂಗಳು “ಗರಡಿ’ ಸಿನಿಮಾಕ್ಕೆ ಕುಸ್ತಿ ತರಬೇತಿ ಪಡೆದುಕೊಂಡೆ. ಕುಸ್ತಿ ಪಟ್ಟುಗಳನ್ನು ಕಲಿತು ಸಿನಿಮಾದಲ್ಲಿ ಅಭಿನಯಿಸಿದೆ. ಇತ್ತೀಚೆಗೆ “ಗರಡಿ’ ರಿಲೀಸ್‌ ಆಗಿದ್ದು, ಆ ಪಾತ್ರಕ್ಕೆ ಏನೂ ಎಫ‌ರ್ಟ್‌ ಹಾಕಿದ್ದೆವೋ, ಅದಕ್ಕೆ ತಕ್ಕಂಥ ರೆಸ್ಪಾನ್ಸ್‌ ಸಿಕ್ಕಿತು. ಅನೇಕ ಹಿರಿಯ ಕಲಾವಿದರು ನನ್ನ ಪಾತ್ರವನ್ನು ಮೆಚ್ಚಿ ಮಾತನಾಡಿದರು. ಅದು ನನಗೆ ಹೊಸ ಜೋಶ್‌ ಕೊಟ್ಟಿತು’ ಎನ್ನುತ್ತಾರೆ ಪೃಥ್ವಿ.

ಸದ್ಯ ತಮ್ಮ ಹೋಂ ಬ್ಯಾನರ್‌ನಲ್ಲಿ ಅಮೂಲ್‌ ಪಾಟೇಲ್‌ ನಿರ್ದೇಶನದಲ್ಲಿ ಹೊಸ ಸಿನಿಮಾಕ್ಕೆ ಪೃಥ್ವಿ ಸದ್ದಿಲ್ಲದೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇಡೀ ಸಿನಿಮಾದ ಕಥೆ ಬಿಜಾಪುರದಲ್ಲಿ ನಡೆಯಲಿದ್ದು, ಅದಕ್ಕಾಗಿ ಬಿಜಾಪುರ ಭಾಷೆಯನ್ನೂ ಕಲಿಯುತ್ತಿದ್ದಾರೆ. “ಸಿನಿಮಾಕ್ಕೆ ಬಂದು ಸುಮಾರು ಮೂರು ವರ್ಷವಾಯ್ತು. ಫ್ಯಾಮಿಲಿ-ಫ್ರೆಂಡ್ಸ್‌ ಹೀಗೆ ಎಲ್ಲರ ಸಹಕಾರದಿಂದ ಸಿನಿಮಾ ಯಾನ ಸಲೀಸಾಗಿ ನಡೆಯುತ್ತಿದೆ. ಒಮ್ಮೆ ಹಿಂತಿರುಗಿ ನೋಡಿದ್ರೆ, ಈ ಜರ್ನಿ ಸಾಕಷ್ಟು ಕಲಿಸಿದೆ ಎಂದು ಖುಷಿಯಾಗುತ್ತದೆ’ ಎನ್ನುತ್ತಾರೆ ಪೃಥ್ವಿ.

 

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.