![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 24, 2023, 10:37 PM IST
ಶಿರಸಿ: 2022-23ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಕ್ಷೇತ್ರಕ್ಕೆ ಸಂಬಂಧಿಸಿ 78.39 ಕೋಟಿ ರೂ.ನಷ್ಟು ವಿಮಾ ಪರಿಹಾರದ ಮೊತ್ತ ಆಧಾರ ಲಿಂಕ್ ಆದ ರೈತರ ಉಳಿತಾಯ ಖಾತೆಗೆ ನೇರವಾಗಿ ವಿಮಾ ಕಂಪನಿಯಿಂದ ಜಮಾ ಆಗಿದೆ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
2022-23 ನೇ ಸಾಲಿನಲ್ಲಿ ಸರಕಾರದ ಆದೇಶದಂತೆ ಮುಂಗಾರು ಅವಧಿಗೆ ಸಂಬಂಧಿಸಿ ಹವಾಮಾನ ಆಧಾರಿತ ಬೆಳೆವಿಮಾ ಯೋಜನೆಯಡಿಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಕ್ಷೇತ್ರಕ್ಕೆ ಕೆಡಿಸಿಸಿ ಬ್ಯಾಂಕು ಸಹಕಾರ ಸಂಘಗಳ ಮೂಲಕ ಒಟ್ಟು 79643 ಪ್ರಸ್ತಾವನೆಗಳನ್ನು ಬೆಳೆ ವಿಮಾ ವ್ಯಾಪ್ತಿಗೆ ಒಳಪಡಿಸಿತ್ತು. ಈ ಪೈಕಿ ರೈತರು ಹೊಂದಿರುವ79, 197 ಸರ್ವೆ ನಂಬರುಗಳಿಗೆ ಅಂತೂ78.39 ಕೋಟಿ ರೂ. ವಿಮಾ ಪರಿಹಾರದ ರಖಂ ಘೋಷಣೆ ಆಗಿದ್ದು, ರೈತರ ಆಧಾರ ಲಿಂಕ್ ಆದ ಉಳಿತಾಯ ಖಾತೆಗಳಿಗೆ ಜಮಾ ಆಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಪೈಕಿ ಅಂತೂ ಅಡಿಕೆ ಬೆಳೆಗೆ 75776 ಪ್ರಸ್ತಾವನೆಗಳಿಗೆ 77.18 ಕೊಟಿ ರೂ ವಿಮಾ ಪರಿಹಾರ ದೊರಕಿದ್ದು, ಕಾಳುಮೆಣಸು ಬೆಳೆಗೆ ಸಂಬಂಧಿಸಿ ೩೪೨೧ ಪ್ರಸ್ತಾವನೆಗಳಿಗೆ ೧.೨೧ಕೋಟಿ ರೂ. ವಿಮಾ ಪರಿಹಾರ ದೊರಕಿದೆ. ಮಳೆ ಕೊರತೆಯಿಂದ ಬರಗಾಲದ ಸಂಕಷ್ಟದಲ್ಲಿರುವ ರೈತಾಪಿ ವರ್ಗಕ್ಕೆ ಬೆಳೆ ವಿಮಾ ಯೋಜನೆಯ ಪರಿಹಾರವು ಜಮಾ ಆಗಿರುವುದು ವರದಾನವಾಗಿದೆ. ಕೇಂದ್ರ, ರಾಜ್ಯ ಸರಕಾರದ ಯೋಜನೆ ಅಳವಡಿಸಿಕೊಂಡು 2022-23 ನೇ ಸಾಲಿನ ಹಂಗಾಮಿಗೆ ಸಂಬಂಧಿಸಿ ಬೆಳೆ ವಿಮೆ ಮೊತ್ತ ರೈತರಿಗೆ ಸಕಾಲದಲ್ಲಿ ದೊರೆತಿರುವುದು ಕೆನರಾ ಡಿ.ಸಿ.ಸಿ. ಬ್ಯಾಂಕು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಗಲಿರುಳು ಶ್ರಮಿಸಿರುವುದರ ಫಲಶೃತಿ ಆಗಿದೆ. ಶಿರಸಿ 2957.62 ಲ. ರೂ. ಸಿದ್ದಾಪುರ1348.03 ಲ.ರೂ., ಮುಂಡಗೋಡ 926.23 ಲ.ರೂ., ಯಲ್ಲಾಪುರ 1678.13 ಲ.ರೂ., ಜೊಯಿಡಾ131.00 ಲ.ರೂ., ಅಂಕೋಲಾ462.82 ಲ.ರೂ., ಕುಮಟಾ 52.82 ಲ.ರೂ, ಹೊನ್ನಾವರ 176.00 ಲ.ರೂ., ಭಟ್ಕಳ106.68 ಲ.ರೂ. ವಿಮೆ ಬಿಡುಗಡೆಗೊಂಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.