Hardik Pandya: ಗುಜರಾತ್ಗೆ ಹಾರ್ದಿಕ್ ಗುಡ್ ಬೈ; ಮತ್ತೆ ಮುಂಬೈಗೆ ಬರೋದು ಪಕ್ಕಾ?
Team Udayavani, Nov 25, 2023, 10:26 AM IST
ಮುಂಬಯಿ: ಮುಂದಿನ ವರ್ಷದ ಐಪಿಎಲ್ ಬಗ್ಗೆ ಈಗಾಗಲೇ ಕ್ರಿಕೆಟ್ ವಲಯದಲ್ಲಿ ಚರ್ಚೆ ಆರಂಭವಾಗಿದೆ. 2024 ರ ಐಪಿಎಲ್ ನ ಮಿನಿ ಹರಾಜು ಪ್ರಕ್ರಿಯೆ ಮುಂದಿನ ತಿಂಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಂಡಗಳು ಆಟಗಾರರ ಟ್ರೇಡ್ ನಲ್ಲಿ ನಿರತವಾಗಿವೆ.
ಮುಂದಿನ ಋತುವಿನ ಐಪಿಎಲ್ ಗಾಗಿ ಕೆಲ ಆಟಗಾರರನ್ನು ಫ್ರಾಂಚೈಸಿಗಳು ರಿಲೀಸ್ ಮಾಡಿದ್ದು, ಇನ್ನು ಕೆಲ ಆಟಗಾರರನ್ನು ವಿನಿಮಯ ಮಾಡಿಕೊಂಡಿದೆ. ಆಟಗಾರರ ರಿಲೀಸ್ ಪಟ್ಟಿಯಲ್ಲಿ ಕೇಳಿ ಬರುತ್ತಿರುವ ದೊಡ್ಡ ಹೆಸರು ಅಂದರೆ ಅದು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರದು.
ಹರಾಜು ಪ್ರಕ್ರಿಯೆಗೂ ಮುನ್ನ ಟ್ರೇಡ್ ವಿಂಡೋ ಓಪನ್ ಆಗಿದ್ದು, ಇದರಲ್ಲಿ ಫ್ರಾಂಚೈಸಿಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳಲು ಮುಂದಾಗಿದೆ.
ಮೂಲಗಳ ಪ್ರಕಾರ ಈ ಬಾರಿಯ ಟ್ರೇಡ್ ನಲ್ಲಿ ದೊಡ್ಡ ಟ್ರೇಡ್ ವೊಂದನ್ನು ಮುಂಬೈ ಮಾಡಲಿದೆ ಎನ್ನಲಾಗಿದೆ. ಗುಜರಾತ್ ಟೈಟಾನ್ಸ್ ತಂಡವನ್ನು ಸತತ ಎರಡು ಬಾರಿ ಫೈನಲ್ ಗೆ ಕರೆದೊಯ್ದು, ಒಂದು ಬಾರಿ ಚಾಂಪಿಯನ್ ಪಟ್ಟವನ್ನು ಪಡೆದ ಮುಂಬೈ ಇಂಡಿಯನ್ಸ್ ಮಾಜಿ ಆಟಗಾರ ಹಾರ್ದಿಕ್ ಪಾಂಡ್ಯ ಅವರನ್ನು ಮತ್ತೆ ಮುಂಬೈಗೆ ಕರೆತರುವ ಯೋಜನೆ ಸಿದ್ದಗೊಂಡಿದೆ ಎನ್ನಲಾಗಿದೆ.
ಗುಜರಾತ್ ಟೈಟಾನ್ಸ್ ಮ್ಯಾನೇಜ್ಮೆಂಟ್ ಹಾರ್ದಿಕ್ ನಡುವೆ ಭಿನ್ನಾಭಿಪ್ರಾಯಗಳಿದ್ದು, ಈ ಕಾರಣದಿಂದ ಹಾರ್ದಿಕ್ ಕಳೆದ ಕೆಲ ಸಮಯದ ಹಿಂದೆಯೇ ಗುಜರಾತ್ ತೊರೆಯುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ರೋಹಿತ್ ಶರ್ಮಾ ಅವರ ಬಳಿಕ ಮುಂಬೈ ತಂಡವನ್ನು ಹಾರ್ದಿಕ್ ಮುನ್ನಡೆಸಲಿದ್ದಾರೆ ಎನ್ನಲಾಗಿದೆ.
ಟ್ರೇಡಿಂಗ್ ವಿಂಡೋ ನ.26 ರಂದು ಕ್ಲೋಸ್ ಆಗಲಿದ್ದು, ಅಷ್ಟರೊಳಗೆ ವಿಚಾರಕ್ಕೊಂದು ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.
ಹಾರ್ದಿಕ್ 2015 ರಿಂದ 2021ರ ವರೆಗೆ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. 2022ರಲ್ಲಿ ಗುಜರಾತ್ ಟೈಟಾನ್ಸ್ ಐಪಿಎಲ್ನಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಯಿತು. ಬಳಿಕ 2023 ರಲ್ಲಿ ತಂಡವು ಅವರ ನಾಯಕತ್ವದಲ್ಲಿ ರನ್ನರ್ ಅಪ್ ಆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.