Bengaluru kambala: ಅಲೆ… ಬುಡಿಯೆರ್‌ ಬೆಂಗಳೂರಿನಲ್ಲಿ ಕರಾವಳಿ ಕನ್ನಡಿಗರ ಕಂಪು

ಹಲವು ಭಾಗಗಳಲ್ಲಿ ತಮ್ಮದೇ ಆದ ಸಾಂಸ್ಕೃತಿಕ ಸೇರಿದಂತೆ ಹಲವು ಸಂಘಟನೆಗಳನ್ನು ಸ್ಥಾಪಿಸಿದ್ದಾರೆ.

Team Udayavani, Nov 25, 2023, 12:05 PM IST

Bengaluru kambala:ಅಲೆ… ಬುಡಿಯೆರ್‌ ಬೆಂಗಳೂರಿನಲ್ಲಿ ಕರಾವಳಿ ಕನ್ನಡಿಗರ ಕಂಪು

ಚಂದ್ರನ ಮೇಲ್ಮೈನಲ್ಲಿ ಮೊದಲ ಬಾರಿಗೆ ಕಾಲಿಟ್ಟು ನಡೆದಾಡಿದ ಹೆಗ್ಗಳಿಕೆ ನೀಲ್‌ ಆರ್ಮ್ ಸ್ಟ್ರಾಂಗ್‌ ಅವರದ್ದು. ಅವರು ಅಲ್ಲಿಗೆ ತಲಪುವ ಮೊದಲೇ ಕೇರಳದ ವ್ಯಕ್ತಿ ಅಲ್ಲಿ ಚಾಯ್‌ ಚಾಯ್‌ ಎಂದು ತಿರುಗಾಡುತ್ತಿದ್ದ ಎಂಬ ತಮಾಷೆಯ ಮಾತಿದೆ.ಅದೇ ಮಾತನ್ನು ಕರಾವಳಿಯ ಕನ್ನಡಿಗರಿಗೆ ಅನ್ವಯಿಸಿದರೆ ಖಂಡಿತವಾಗಿಯೂ ತಪ್ಪಾಗಲಾರದು.

ಗ್ರಾಮ ಮಟ್ಟದಿಂದ ಹಿಡಿದು ಜಗತ್ತಿನ ಮಟ್ಟದ ವರೆಗೆ ಅನುಸರಣೀಯ ಕ್ಷೇತ್ರದಲ್ಲಿ ತಮ್ಮದೇ ಆಗಿರುವ ಛಾಪುಗಳನ್ನು ಮೂಡಿಸಿದ ಹೆಗ್ಗಳಿಕೆ ಕರಾವಳಿ ಕನ್ನಡಿಗರದ್ದು. ಹೀಗಾಗಿ, ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಎಂದರೆ ಕೇಳಬೇಕೇ? ಅದರಲ್ಲಿಯೂ ಹೊಟೇಲ್‌ ಉದ್ಯಮ ಎಂದರೆ ಕರಾವಳಿ ಕನ್ನಡಿಗರದ್ದೇ ಪ್ರಾಬಲ್ಯ ಎಂದರೆ ಅತಿಶಯೋಕ್ತಿ ಎಂದು ಅನಿಸಲಾರದು.

ವಿಶೇಷವಾಗಿ ಹೇಳುವುದಿದ್ದರೆ ಹೊಟೇಲ್‌ ಉದ್ಯಮ, ಶಿಕ್ಷಣ, ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಜನೋಪಯೋಗಿ ವಿಚಾರಗಳಲ್ಲಿ ಕರಾವಳಿ ಕನ್ನಡಿಗರ ಛಾಪು ಇದೆ. ಇಷ್ಟೆಲ್ಲಾ ಪೀಠಿಕೆ ಏಕೆ ಬೇಕಾಯಿತು ಎಂದರೆ ನ.25 ಮತ್ತು ನ.26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಮೊತ್ತಮೊದಲ ತುಳುನಾಡಿನ ಜಾನಪದ ಉತ್ಸವ ಕಂಬಳವನ್ನು ಯಶಸ್ವಿಯಾಗಿ ನಡೆಸಬೇಕು ಎಂಬ ಉತ್ಕಟ ಮನಸ್ಸಿನಿಂದ ಹಲವಾರು ಕರಾವಳಿ ಕನ್ನಡಿಗರಿಗೆ ಸೇರಿದ ಸಂಘಟನೆಗಳು ಕೈಜೋಡಿಸಿವೆ.

ಊರ ಕಡೆಗಳಲ್ಲಿ ಯಾರದ್ದೇ ಮನೆಯಲ್ಲಿ ಕಾರ್ಯಕ್ರಮ ಇದ್ದಾಗ ನೆರೆಹೊರೆಯವರು ಕೈಜೋಡಿಸಿ, ಪರಸ್ಪರ ಸಹಕಾರ, ಕೊಡುಕೊಳ್ಳುವಿಕೆಯ ಮನೋಭಾವನೆಯಿಂದ ಕೆಲಸ ಮಾಡುತ್ತಾರೆ. ಈ ಮೂಲಕ ಅದನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲು ಕಾರಣರಾಗುತ್ತಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಮತ್ತು ಭಾನುವಾರ ನಡೆಯಲಿರುವುದು ಕರಾವಳಿ ಕನ್ನಡಿಗರ ಮನೆತನದ ಕಾರ್ಯಕ್ರಮ. ಹೀಗಾಗಿ, ಅಲ್ಲಿ ಒಂದೇ ನಿರ್ಣಯ, ಒಂದೇ ಆಶಯ- ಎರಡು ದಿನಗಳ ಕಾಲ ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿಕೊಡುವುದು.

ಜೀವನ ಬಂಡಿಯನ್ನು ಸುಲಲಿತವಾಗಿ ಸಾಗಿಸುವ ನಿಟ್ಟಿನಲ್ಲಿ ಕರ್ನಾಟಕದ ರಾಜಧಾನಿಗೆ ಉದ್ಯೋಗಾರ್ಥವಾಗಿ ಬಂದವರು ಕರಾವಳಿ ಕನ್ನಡಿಗರು. ಹೀಗಾಗಿ, ಅವರು ತಮ್ಮ ಸಾಂಸ್ಕೃತಿಕ ವಲಯದಲ್ಲಿ ಹೊಂದಿರುವ ಛಾಪುಗಳನ್ನು ಮತ್ತು ಒಲವನ್ನು ಬಿಟ್ಟುಕೊಟ್ಟಿಲ್ಲ ಎನ್ನುತ್ತಾರೆ ಉದ್ಯಮಿ ಅವಿನಾಶ್‌ ಶೆಟ್ಟಿ. ಬೆಂಗಳೂರಿನ ಸಾಂಸ್ಕೃತಿಕ, ಶಿಕ್ಷಣ, ಉದ್ಯೋಗ, ವ್ಯವಹಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಕರಾವಳಿ ಕನ್ನಡಿಗರ ಕೊಡುಗೆ ದೊಡ್ಡದು ಎನ್ನುತ್ತಾರೆ ಅವರು. ಯಕ್ಷಗಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆಯೇ ಸರಿ ಸುಮಾರು 35 ಒಕ್ಕೂಟಗಳು ಕಾರ್ಯ ನಿರ್ವಹಿಸುತ್ತಿವೆ.

ಹೀಗಾಗಿ, ರಾಜಧಾನಿಯ ಸಾಂಸ್ಕೃತಿಕ ವಲಯವನ್ನು ಮತ್ತಷ್ಟು ಶ್ರೀಮಂತಗೊಳಿಸಿದ ಹೆಗ್ಗಳಿಕೆ ಕರಾವಳಿ ಕನ್ನಡಿಗರದ್ದು ಎಂಬ ಅಭಿಪ್ರಾಯ ಶೆಟ್ಟಿಯವರದ್ದು ಹೇಳಿ ಕೇಳಿ ಬೆಂಗಳೂರಿನ ವ್ಯಾಪ್ತಿ ಈಗ ಹಿರಿದಾಗಿದೆ. ಬೆಂಗಳೂರಿನಲ್ಲಿ ಇರುವ ಕರಾವಳಿ ಕನ್ನಡಿಗರು ಸರಿ ಸುಮಾರು ಐದರಿಂದ ಆರು ತಲೆಮಾರುಗಳ ವರೆಗಿನ ಲೆಕ್ಕಾಚಾರ ನೋಡಿದರೆ ಹಲವರು ಇಲ್ಲಿಯೇ ಹುಟ್ಟಿ ಬೆಳೆದಿದ್ದಾರೆ. ಹೀಗಾಗಿ, ಊರಿನ ಸಂಪರ್ಕ ಇರಲಿ ಎಂಬ ದೃಷ್ಟಿಕೋನದಿಂದ ಹಲವು ಭಾಗಗಳಲ್ಲಿ ತಮ್ಮದೇ ಆದ ಸಾಂಸ್ಕೃತಿಕ ಸೇರಿದಂತೆ ಹಲವು ಸಂಘಟನೆಗಳನ್ನು ಸ್ಥಾಪಿಸಿದ್ದಾರೆ.

ಬೆಂಗಳೂರು ಕಂಬಳದ ಹಿನ್ನೆಲೆಯಲ್ಲಿ ನೋಡುವುದಿದ್ದರೆ ಕರಾವಳಿ ಕನ್ನಡಿಗರ ಸಂಘಟನಾ ಶಕ್ತಿ ನ ಭೂತೋ ನ ಭವಿಷ್ಯತಿ ಎಂಬ ನೆಲೆಯಲ್ಲಿ ಅನಾವರಣಗೊಂಡಿದೆ ಎಂದು ಹೇಳಿದರೆ ನಿಜಕ್ಕೂ ತಪ್ಪಾಗಲಾರದು. ಬರೋಬ್ಬರಿ 60ಕ್ಕೂ ಅಧಿಕ ಸಂಘ
ಸಂಘ ಸಂಸ್ಥೆಗಳು ಒಂದಲ್ಲ ಒಂದು ರೀತಿಯಲ್ಲಿ ನಮ್ಮ ತುಳುನಾಡಿನ ಜಾನಪದ ಉತ್ಸವ ಕಂಬಳ ಯಶಸ್ಸು ಪಡೆಯಬೇಕು ಎಂದು ಕಂಕಣಬದ್ಧರಾಗಿರುವಂತೆ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಕರಾವಳಿ ಕನ್ನಡಿಗರ ಸಂಘಟನೆಗಳ ಕಾರ್ಯವಿಧಾನ ಮತ್ತು ಸಾಧನೆಗಳ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುವ ಕರಾವಳಿ ಕನ್ನಡಿಗ ಮತ್ತು ಯಕ್ಷಗಾನ ಸಂಘಟಕ ಗಣೇಶ್‌ ಭಟ್‌ ಬಾಯಾರು, ರಾಜ್ಯದ ರಾಜಧಾನಿಯ ಅರ್ಥವ್ಯವಸ್ಥೆಗೆ ಗಣನೀಯ ಕೊಡುಗೆ ನೀಡುವಲ್ಲಿ ಕರಾವಳಿಗರದ್ದು ಅದ್ವಿತೀಯ ಪಾತ್ರ ಎನ್ನುತ್ತಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳು, ಉದ್ದಿಮೆಗಳ ಸ್ಥಾಪನೆ, ರಾಜಧಾನಿಯ ಲಕ್ಷಾಂತರ ಮಂದಿಯ ಹೊಟ್ಟೆಯನ್ನು ತಣಿಸುವಂಥ ಶುಚಿ-ರುಚಿಯಾದ ಊಟ-ಉಪಾಹಾರಗಳನ್ನು ಸಿದ್ಧಪಡಿಸಿ, ನೀಡುವ ಹೊಟೇಲ್‌ ಉದ್ಯಮ ಇರಬಹುದು, ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಕರಾವಳಿ
ಕನ್ನಡಿಗರು ಛಾಪು ಮೂಡಿಸಿದ್ದಾರೆ ಎನ್ನುತ್ತಾರೆ ಅವರು ಇದರ ಜತೆಗೆ ಸಂಘಟನಾ ಶಕ್ತಿಯನ್ನು ಪ್ರದರ್ಷಿಸುವ ನಿಟ್ಟಿನಲ್ಲಿ
ತಾವು ವಾಸಿಸುತ್ತಿರುವ ಪ್ರದೇಶಗಳಲ್ಲಿಯೇ ಹಲವಾರು ಸಂಘಟನೆಗಳನ್ನು ಸ್ಥಾಪಿಸಿ ತಾವು ಇರುವ ಊರಿನಲ್ಲಿಯೇ ಮನೆಯ ಹಬ್ಬಗಳನ್ನು ಆಚರಿಸುತ್ತಾರೆ.

ತುಳುವೆರೆಂಕುಲು, ದಕ್ಷಿಣ ಕನ್ನಡಿಗರ ಸಂಘ… ಹೀಗೆ ಹತ್ತು ಹಲವು ಸಂಘಟನೆಗಳನ್ನು ಸ್ಥಾಪಿಸಿ ಕರಾವಳಿ ಕನ್ನಡಿಗರು ಮಾತ್ರವಲ್ಲದೆ, ರಾಜಧಾನಿಯ ಇತರರಿಗೂ ಕೂಡ ಸಂಘಟನೆ ಹೇಗೆ ಇರಬೇಕು ಎಂಬುದರ ಬಗ್ಗೆ ಮಾದರಿಯಾಗಿದ್ದಾರೆ ಎಂದು ಗಣೇಶ್‌ ಭಟ್‌ ಅಭಿಪ್ರಾಯಪಡುತ್ತಾರೆ.

ವಿವಿಧ ಭಾಷಿಕ ಸಂಘಟನೆಗಳೂ ಕೂಡ ಇವೆ. ಅವುಗಳು ಕೂಡ ತಮ್ಮ ತಮ್ಮ ಸಮುದಾಯದ ಆಚರಣೆಗಳನ್ನು ರಾಜಧಾನಿಯ ಇತರ ಎಲ್ಲರ ಜತೆಗೆ ಹೊಂದಿಕೊಂಡು ಬಾಳುತ್ತಿವೆ. ನಮ್ಮ ದೇಶದ ಇತರ ಮಹಾನಗರಗಳು, ಸಣ್ಣ ಪುಟ್ಟ ನಗರಗಳಿಗೆ ಹೋಲಿಕೆ ಮಾಡಿದರೆ ಇಂಥ ಕಾಸ್ಮೋಪಾಲಿಟನ್‌ ಲುಕ್‌ ಇರುವ ಸಂಘಟನಾತ್ಮಕ ಜೀವನ ಇರಲಾರದೇನೋ ಎನ್ನಿಸುವಷ್ಟು ಛಾಪನ್ನು ಕರಾವಳಿ ಕನ್ನಡಿಗರು ಭಾರತದ ಸಿಲಿಕಾನ್‌ ಸಿಟಿ, ಬೆಂಗಳೂರಿನಲ್ಲಿ ಮಾಡಿದ್ದಾರೆ ಎಂದರೆ ತಪ್ಪಾಗಲಾರದು.

ಸಂಘೇ ಶಕ್ತಿಃ ಕಲೌ ಯುಗೈ ಎಂದು ಸಂಸ್ಕೃತ ಸೂಕ್ತಿ ಇದೆ. ಅದಕ್ಕೆ ಅನುಸಾರವಾಗಿ ಕರಾವಳಿಯ ಕನ್ನಡಿಗರು ತಾವು ಇರುವ ಸ್ಥಳದ ಆರ್ಥಿಕಾಭಿವೃದ್ಧಿಗೆ ಕೊಡುಗೆ ನೀಡುವುದಲ್ಲದೆ, ತಾವೂ ಅಭಿವೃದ್ಧಿ ಹೊಂದುವ ಮೂಲಕ ಮಾದರಿಯಾಗಿ ಇರುವುದು ಸ್ತುತ್ಯರ್ಹ ವಿಚಾರವೇ ಹೌದು.

ಸದಾಶಿವ ಕೆ.

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Mang-Airport

Mangaluru ವಿಮಾನ ನಿಲ್ದಾಣ:ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.