Desi swara ಯೋಚಿಸಿದರೆ ಪರಿಹಾರ ಸಿಗುವುದು


Team Udayavani, Nov 25, 2023, 7:25 PM IST

Desi swara ಯೋಚಿಸಿದರೆ ಪರಿಹಾರ ಸಿಗುವುದು

ಒಂದು ಊರಿನಲ್ಲಿ ಒಬ್ಬ ರೈತನಿದ್ದ. ಅವನು ಸೇಬು ಹಣ್ಣುಗಳ ಕೃಷಿ ಮಾಡುತ್ತಿದ್ದ. ಅವನು ಉತ್ಕೃಷ್ಟ ಮಟ್ಟದ ಸೇಬಿನ ಹಣ್ಣುಗಳನ್ನು ಬೆಳೆಯುತ್ತಿದ್ದುದರಿಂದ ಜನಪ್ರಿಯವಾಗಿದ್ದ. ಇದರಿಂದ ಅವನ ಕುಟುಂಬದಲ್ಲಿಯೂ ಬಹಳ ನೆಮ್ಮದಿಯ ವಾತಾವರಣವಿತ್ತು. ಕಷ್ಟಪಟ್ಟು ಕೆಲಸ ಮಾಡಿ ಕೊನೆಗೆ ಸುಖ ಪಡೆಯುತ್ತಿದ್ದ ಅವನ ಮುಖದಲ್ಲಿ ಏನೋ ಸಾಧಿಸಿದ ಭಾವ.

ಹೀಗಿರುವಾಗ ಒಂದು ದಿನ ತನ್ನ ಸೇಬಿನ ತೋಟಕ್ಕೆ ತನ್ನ ಮುದ್ದಿನ ಸಾಕುನಾಯಿಯ ಜತೆ ತೆರಳಿದ್ದ. ಈ ಸಂದರ್ಭದಲ್ಲಿ ಕೆಲವೊಂದು ಮರಗಳಲ್ಲಿ ಒಳ್ಳೆಯ ಸೇಬುಗಳ ಜತೆ ಹಾಳಾದ, ರೋಗಗ್ರಸ್ಥ ಸೇಬುಗಳು ಇರುವುದನ್ನು ನೋಡಿ, ಇವುಗಳನ್ನು ಹಾಗೆಯೇ ಬಿಟ್ಟರೆ ಉಳಿದ ಸೇಬಿಗೂ ರೋಗ ಹರಡಿ ಹಾಳಾಗಬಹುದು ಎಂದುಕೊಳ್ಳುತ್ತಾನೆ. ಆದರೆ ಅವುಗಳು ಎತ್ತರದಲ್ಲಿರುವುದರಿಂದ ಅವುಗಳನ್ನು ಏನು ಮಾಡಬಹುದೆಂದು ಚಿಂತೆಗೊಳಗಾಗುತ್ತಾನೆ.
ಹಾಗಿದ್ದರೂ ದೋಟಿಯ ಸಹಾಯದಿಂದ ಆ ಹಾಳಾದ ಸೇಬುಗಳನ್ನು ಬೀಳಿಸಲು ಮುಂದಾಗುತ್ತಾನೆ. ಕಲ್ಲುಗಳನ್ನು ಎಸೆಯುತ್ತಾನೆ. ಹೀಗೆ ತನ್ನ ಕೈಲಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಾನೆ. ಆದರೂ ಯಾವುದೇ ಉಪಾಯಗಳು ಫ‌ಲಿಸುವುದಿಲ್ಲ. ಬಳಿಕ ಇದೇ ಗುಂಗಿನಲ್ಲಿ ನೇರವಾಗಿ ಮನೆಗೆ ತೆರಳುತ್ತಾನೆ.

ರೈತ ಸಪ್ಪೆಯಾಗಿ ತಲೆಯ ಮೇಲೆ ಕೈಯಿಟ್ಟು ಕುಳಿತಿರಬೇಕಾದರೆ, ಮನೆಯ ಹಿಂಬದಿಯಿಂದ ದಡಾರ್‌! ಎಂಬ ಶಬ್ದವೊಂದು ಕೇಳಿಬರುತ್ತದೆ. ಏನದು ಶಬ್ದವೆಂದು ರೈತ ಹೋಗಿ ನೋಡುವಾಗ ತನ್ನ ಸಾಕುನಾಯಿಯು ಮನೆಯ ಹಿಂಬದಿಯಲ್ಲಿ ಆಟವಾಡುತ್ತಿದ್ದಾಗ ಅಕಾಸ್ಮಾತ್‌ ಆಗಿ ನೇರವಾಗಿರಿಸಿದ್ದ ಏಣಿಯನ್ನು ಬೀಳಿಸಿತ್ತು. ಇದನ್ನು ನೋಡಿದ ರೈತನಿಗೆ ತನ್ನ ಸಾಕುನಾಯಿ ತನಗೋಸ್ಕರ ಉಪಾಯವೊಂದನ್ನು ನೀಡಿತು ಎಂದು ಬಹಳ ಖುಷಿ ಪಡುತ್ತಾನೆ. ಅನಂತರ ಏಣಿ ಸಹಾಯದಿಂದ ಎಲ್ಲ ಹಾಳಾದ ಸೇಬುಗಳನ್ನು ಉದುರಿಸಿ ನಿಟ್ಟುಸಿರು ಬಿಡುತ್ತಾನೆ.
ಇಲ್ಲಿ ನಿಜವಾಗಿಯೂ ನಾಯಿ ಸಹಾಯ ಮಾಡಿತೇ? ಅಥವಾ ಕೇವಲ ಕಾಕತಾಳೀಯವೇ ಸ್ಪಷ್ಟತೆಯಿಲ್ಲವಾದರೂ, ನೀತಿಯನ್ನಂತೂ ರೈತನಿಗೆ ಕಲಿಸಿಕೊಟ್ಟಿತು. ಕಷ್ಟ ಬಂತೆಂದು ಸುಮ್ಮನೆ ಕುಳಿತರೆ ಎಂದಿಗೂ ಆ ಕಷ್ಟವನ್ನು ಪರಿಹರಿಸಲು ಸಾಧ್ಯವಿಲ್ಲ ಬದಲಾಗಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುತ್ತದೆ. ಹಾಗಾಗಿ ಕಷ್ಟ ಬಂತೆಂದರೆ ಅದನ್ನು ಪರಿಹರಸಲು ಏನೆಲ್ಲ ಉಪಾಯಗಳನ್ನು ಮಾಡಬಹುದೆಂದು ಯೋಚಿಸಿ ನಿರ್ಧರಿಸಿದರೆ, ಸತತವಾಗಿ ಪ್ರಯತ್ನಿಸುತ್ತಿದ್ದರೆ ಖಂಡಿತವಾಗಿಯೂ ಕಷ್ಟಗಳಿಂದ ಹೊರಬರಲು ಸಾಧ್ಯ.

ಟಾಪ್ ನ್ಯೂಸ್

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.