Rajasthan: ಶೇ.68 ಮತದಾನ: ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ

ಇನ್ನು ತೆಲಂಗಾಣ ಮಾತ್ರ ಬಾಕಿ

Team Udayavani, Nov 25, 2023, 11:51 PM IST

ELECTION 1

ಹೊಸದಿಲ್ಲಿ: ಒಂದೆರಡು ಅಹಿತಕರ ಘಟನೆ ಹೊರತುಪಡಿಸಿದರೆ, ರಾಜಸ್ಥಾನದ 199 ವಿಧಾನಸಭೆ ಕ್ಷೇತ್ರಗಳಿಗೆ ಶನಿವಾರ ಶಾಂತಿಯುತವಾಗಿ ಮತದಾನ ನಡೆದಿದ್ದು, ಸಂಜೆ 5ರ ವೇಳೆಗೆ ಶೇ.68ಕ್ಕೂ ಹೆಚ್ಚು ಮತದಾನ ದಾಖಲಾಗಿದೆ. ಕಳೆದ ಚುನಾವಣೆಯಲ್ಲಿ ಶೇ.74.06ರಷ್ಟು ಮತದಾನ ದಾಖಲಾಗಿತ್ತು.

ಈ ಬಾರಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ವಿಪಕ್ಷ ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿದ್ದು, 5.25 ಕೋಟಿ ಮತದಾರರು ಶನಿವಾರ 1,862 ಅಭ್ಯರ್ಥಿಗಳ ಭವಿಷ್ಯವನ್ನು ಬರೆದಿದ್ದಾರೆ. ಡಿ.3ರಂದು ಫ‌ಲಿತಾಂಶ ಪ್ರಕಟವಾಗಲಿದೆ. ಸಿಕಾರ್‌ನ ಫ‌ತೇಪುರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು,ಯೋಧ ರೊಬ್ಬರು ಗಾಯ ಗೊಂಡಿದ್ದಾರೆ. ಡೀಗ್‌ ಜಿಲ್ಲೆಯಲ್ಲಿ ಕಲ್ಲುತೂರಾಟ ನಡೆದಿದೆ. ಟೋಂಕ್‌ ಜಿಲ್ಲೆಯಲ್ಲಿ 40-50 ಜನರ ಗುಂಪು ಮತಗಟ್ಟೆಯೊಂದಕ್ಕೆ ನುಗ್ಗಲು ಯತ್ನಿಸಿದ್ದು, ಕೂಡಲೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

ಡಿ.3ರಂದು ರಾಜ್ಯದಲ್ಲಿ ಕಮಲ ಅರಳಲಿದೆ ಎಂದು ಬಿಜೆಪಿ ನಾಯಕಿ, ಮಾಜಿ ಸಿಎಂ ವಸುಂಧರಾ ರಾಜೇ ಹೇಳಿದರೆ, ಆಡಳಿತ ವಿರೋಧಿ ಅಲೆ ಇಲ್ಲ, ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೇರಲಿದೆ ಎಂದು ಹಾಲಿ ಸಿಎಂ ಅಶೋಕ್‌ ಗೆಹ್ಲೋಟ್‌ ಹೇಳಿದ್ದಾರೆ.

ರಾಹುಲ್‌ ವಿರುದ್ಧ ದೂರು: ರಾಜಸ್ಥಾನ ಚುನಾವಣೆಯ ದಿನವೇ ಕಾಂಗ್ರೆಸ್‌ಗೆ ಮತ ಹಾಕುವಂತೆ ಟ್ವಿಟರ್‌ನಲ್ಲಿ(ಎಕ್ಸ್‌)ನಲ್ಲಿ ಬರೆದುಕೊಂಡ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ವಿರುದ್ಧ ಬಿಜೆಪಿ ದೂರು ನೀಡಿದೆ. ಇವರಿಬ್ಬರೂ ಚುನಾವಣ ನೀತಿ ಸಂಹಿತೆ ಉಲ್ಲಂ ಸಿದ್ದು, ಕೂಡಲೇ ಇವರ ಸಾಮಾಜಿಕ ಜಾಲತಾಣಗಳ ಖಾತೆಯನ್ನು ಅಮಾನತಿನಲ್ಲಿಟ್ಟು, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ರಾಹುಲ್‌ ಮತ್ತು ಪ್ರಿಯಾಂಕಾ, “ರಾಜಸ್ಥಾನವು ಗ್ಯಾರಂಟಿಗಳ ಸರಕಾರವನ್ನು ಆಯ್ಕೆ ಮಾಡಿಕೊಳ್ಳಲಿದೆ. ಅಗ್ಗದ ದರದ ಗ್ಯಾಸ್‌ ಸಿಲಿಂಡರ್‌, ಬಡ್ಡಿರಹಿತ ಕೃಷಿ ಸಾಲ, ಆಂಗ್ಲ ಶಿಕ್ಷಣ, ಒಪಿಎಸ್‌, ಜಾತಿಗಣತಿಯನ್ನು ಆಯ್ಕೆ ಮಾಡಿಕೊಳ್ಳಲಿದೆ’ ಎಂದು ಬರೆದುಕೊಂಡಿದ್ದರು.

ಕೀಳು ಹೇಳಿಕೆ: ಹೈದರಾಬಾದ್‌ನಲ್ಲಿ ಶನಿವಾರ ಚುನಾವಣ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪ್ರಧಾನಿ ಮೋದಿ ಅವರನ್ನು “ಅಪಶಕುನ’ ಎನ್ನುವ ರಾಹುಲ್‌ಗಾಂಧಿ ಹೇಳಿಕೆ ಅತ್ಯಂತ ಕೀಳುಮಟ್ಟದ್ದಾಗಿದ್ದು, ಅಸೆಂಬ್ಲಿ ಚುನಾವಣೆಯಲ್ಲಿ ಜನರು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ ಎಂದಿದ್ದಾರೆ.

ಜನಪದ ಕಲಾವಿದರೊಂದಿಗೆ ಪ್ರಿಯಾಂಕಾ ನೃತ್ಯ
ತೆಲಂಗಾಣದಲ್ಲಿ ಶನಿವಾರ ಕಾಂಗ್ರೆಸ್‌ ರೋಡ್‌ಶೋ ವೇಳೆ ಪಕ್ಷದ ನಾಯಕಿ ಪ್ರಿಯಾಂಕಾ ವಾದ್ರಾ ಅವರು ಜನಪದ ಕಲಾವಿದರೊಂದಿಗೆ ಹಾಡಿಗೆ ಹೆಜ್ಜೆಹಾಕಿದ್ದಾರೆ. ಕಲಾವಿದರು ವಾಹನದ ಮೇಲೆ ನಿಂತು ನೃತ್ಯ ಮಾಡುತ್ತಿದ್ದರೆ, ಪ್ರಿಯಾಂಕಾ ಕೂಡ ಚಪ್ಪಾಳೆ ತಟ್ಟುತ್ತಾ, ತಾವೂ ಹೆಜ್ಜೆ ಹಾಕುತ್ತಾ ಹುರಿದುಂಬಿಸಿರುವ ವೀಡಿಯೋ ವೈರಲ್‌ ಆಗಿದೆ.

ಹೆಸರು ಬದಲಾವಣೆಯಿಂದ “ಭ್ರಷ್ಟಾಚಾರ”ದ ಕಳಂಕ ತೊಲಗಲ್ಲ
ಟಿಆರ್‌ಎಸ್‌ ತನ್ನ ಹೆಸರನ್ನು ಬಿಆರ್‌ಎಸ್‌ ಎಂದು ಬದಲಿ ಸಿಕೊಂಡರೂ, ಯುಪಿಎ ತನ್ನ ಹೆಸರನ್ನು ಐಎನ್‌ಡಿಐಎ(ಇಂಡಿಯಾ) ಎಂದು ಬದಲಿಸಿಕೊಂಡರೂ, ಆ ಪಕ್ಷಗಳ ಭ್ರಷ್ಟಾಚಾರ ಮತ್ತು ದುರಾಡಳಿತದ ಕಳಂಕಗಳು ಮಾತ್ರ ತೊಲಗುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಶನಿವಾರ ತೆಲಂಗಾಣದ ಕಮರೆಡ್ಡಿಯಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳು ಜನರಿಗೆ ದ್ರೋಹ ಮಾಡಲು ಎಲ್ಲ ರೀತಿಯ ತಂತ್ರಗಳನ್ನೂ ಬಳಸುತ್ತವೆ. ದೇಶದ ಜನರಿಗೆ ಈ ಟ್ರಿಕ್‌ಗಳೆಲ್ಲ ಗೊತ್ತು. ರಾಜ್ಯದ ಜನರಿಗೆ ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ನಿಂದ ವಿಮೋಚನೆ ಬೇಕಿದೆ. ಗಾಳಿಯು ಬಿಜೆಪಿ ಕಡೆ ಬೀಸುತ್ತಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.