Udupi ಧರ್ಮಪ್ರಾಂತ: ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ


Team Udayavani, Nov 26, 2023, 11:33 PM IST

Udupi ಧರ್ಮಪ್ರಾಂತ: ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಉಡುಪಿ: ಉಡುಪಿ ಕೆಥೋಲಿಕ್‌ ಧರ್ಮಪ್ರಾಂತದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ರವಿವಾರ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಜರಗಿತು. ಪರಮಪ್ರಸಾದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಪ್ರಧಾನ ಬಲಿಪೂಜೆ ನೇತೃತ್ವವನ್ನು ವಹಿಸಿದ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ| ರೈ| ರೆ| ಜೆರಾಲ್ಡ್ ಐಸಾಕ್‌ ಲೋಬೊ ಸಂದೇಶ ನೀಡಿದರು.

ನಾವು ತೋರಿಸುವ ಪ್ರೀತಿ ಕೇವಲ ತೋರ್ಪಡಿಕೆಯಾಗಿರದೆ ಅದನ್ನು ಕಾರ್ಯದ ಮೂಲಕ ಮಾಡಿ ತೋರಿಸುವಂತಿರಬೇಕು. ಪ್ರೀತಿಯ ಸೇವೆ ಕ್ರೈಸ್ತ ಧರ್ಮದ ಮೂಲ ತತ್ವವಾಗಿದೆ. ಯೇಸು ಸ್ವಾಮಿ ಶಿಲುಬೆಗೇರಿ ನಮ್ಮೆಲ್ಲರ ಪಾಪಗಳನ್ನು ಕ್ಷಮಿಸಿ ಮನುಕುಲಕ್ಕೆ ಮಾದರಿಯಾದರು. ಅದರಂತೆ ನಾವು ಜೀವನದಲ್ಲಿ ಕ್ಷಮೆ, ಪ್ರೀತಿ, ಸೇವೆಯ ಮೂಲಕ ದೈವ ಸಾಮ್ರಾಜ್ಯವನ್ನು ಕಟ್ಟುವಲ್ಲಿ ಪಣತೊಡುವಂತಾಗುವಂತೆ ಡಾ| ಜೆರಾಲ್ಡ್ ಐಸಾಕ್‌ ಕರೆ ನೀಡಿದರು.

ಪವಿತ್ರ ಬಲಿಪೂಜೆ ಬಳಿಕ ಧರ್ಮಗುರು ವಂ| ಸಿರಿಲ್‌ ಲೋಬೊ ಪರಮಪ್ರಸಾದ ಆರಾಧನೆ ನೆರವೇರಿಸಿದರು. ಬಳಿಕ ಪರಮಪ್ರಸಾದವನ್ನು ವಿಶೇಷವಾಗಿ ಅಲಂಕರಿಸಲ್ಪಟ್ಟ ತೆರೆದ ವಾಹನದಲ್ಲಿ ರಾಜಬೀದಿಯಲ್ಲಿ ಮೆರವಣಿಗೆಯ ಮೂಲಕ ಕೊಂಡೊಯ್ದು ಸಂತೆಕಟ್ಟೆ ಕಲ್ಯಾಣಪುರ ಮೌಂಟ್‌ ರೋಸರಿ ಚರ್ಚ್‌ನ ಮೈದಾನದಲ್ಲಿ ಬಹಿರಂಗ ಪ್ರಾರ್ಥನೆ ಮೂಲಕ ಗೌರವ ಸಲ್ಲಿಸಲಾಯಿತು.

ಉದ್ಯಾವರ ಸಂತ ಫ್ರಾನ್ಸಿಸ್‌ ಝೇವಿಯರ್‌ ಚರ್ಚ್‌ನ ಸಹಾಯಕ ಧರ್ಮಗುರು ವಂ| ಲಿಯೊ ಪ್ರವೀಣ್‌ ಡಿ’ಸೋಜಾ ಬೈಬಲ್‌ ವಾಚನ ಮಾಡಿದರು. ಧರ್ಮಪ್ರಾಂತ ವ್ಯಾಪ್ತಿಯ 51 ಚರ್ಚ್‌ಗಳಿಂದ 3 ಸಾವಿರಕ್ಕೂ ಅಧಿಕ ಮಂದಿ ಭಕ್ತರು, 50ಕ್ಕೂ ಅಧಿಕ ಧರ್ಮಗುರುಗಳು, 100ಕ್ಕೂ ಅಧಿಕ ಧರ್ಮಭಗಿನಿಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ ಮಟ್ಟದ ಕ್ರಿಸ್ತ ಜಯಂತಿ ಆಚರಣೆ -2025ನೇ ವರ್ಷದ ಸಿದ್ಧತೆಗೆ ಲೋಗೊ ಅನಾವರಣಗೊಳಿಸುವ ಮೂಲಕ ಧರ್ಮಾಧ್ಯಕ್ಷರು ಚಾಲನೆ ನೀಡಿದರು.

ಧರ್ಮಪ್ರಾಂತದ ವಿಕಾರ್‌ ಜನರಲ್‌ ಮೊನ್ಸಿಂಜೊರ್‌ ಫ‌ರ್ಡಿನಾಂಡ್‌ ಗೊನ್ಸಾಲ್ವಿಸ್‌, ಕುಲಪತಿ ಡಾ| ರೋಶನ್‌ ಡಿ’ಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ಡೆನಿಸ್‌ ಡೆಸಾ, ಕಲ್ಯಾಣಪುರ, ಶಿರ್ವ, ಕಾರ್ಕಳ, ಉಡುಪಿ ವಲಯಗಳ ಪ್ರಧಾನ ಧರ್ಮಗುರು ವಂ| ವಲೇರಿಯನ್‌ ಮೆಂಡೊನ್ಸಾ, ವಂ| ಡಾ| ಲೆಸ್ಲಿ ಡಿಸೋಜಾ, ವಂ| ಪಾವ್ಲ್ ರೇಗೊ, ವಂ| ಚಾರ್ಲ್ಸ್ ಮಿನೇಜಸ್‌, ಮೌಂಟ್‌ ರೋಸರಿ ಚರ್ಚ್‌ನ ಧರ್ಮಗುರು ವಂ| ರೋಕ್‌ ಡೆಸಾ, ಧರ್ಮಪ್ರಾಂತದ ಪಾಲನ ಸಮಿತಿ ಕಾರ್ಯದರ್ಶಿ ಲೆಸ್ಲಿ ಅರೋಝಾ ಉಪಸ್ಥಿತರಿದ್ದರು.

ಕ್ರಿಸ್ತ ಜಯಂತಿ ಜುಬಿಲಿ ಸಂಭ್ರಮಾಚರಣೆಗೆ ಸಿದ್ಧತೆ
ಮಂಗಳೂರು/ಉಡುಪಿ: ಜಗತ್ತಿನಾದ್ಯಂತ ಕ್ರೈಸ್ತ ಧರ್ಮಸಭೆಯಲ್ಲಿ ಯೇಸು ಕ್ರಿಸ್ತರ ಜನನದ 2025 ವರ್ಷಗಳ ಸ್ಮರಣಾರ್ಥವಾಗಿ ಕ್ರಿಸ್ತ ಜಯಂತಿ ಜುಬಿಲಿ 2025 ಸಂಭ್ರಮಾಚರಣೆಗೆ ಎರಡು ವರ್ಷ ಗಳ ಪೂರ್ವ ಸಿದ್ಧತೆಗಳು ಆರಂಭ ಗೊಂಡಿವೆ. ಮಂಗಳೂರು ಬಿಷಪ್‌ ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ನಗರದ ಹೋಲಿ ರೋಜರಿ ಕೆಥೆಡ್ರಲ್‌ನಲ್ಲಿ ರವಿವಾರ ಚಾಲನೆ ನೀಡಿದರೆ, ಉಡುಪಿ ಬಿಷಪ್‌ ಡಾ| ಜೆರಾಲ್ಡ್ ಐಸಾಕ್‌ ಲೋಬೊ ಅವರು ಕಲ್ಯಾಣಪುರದ ಮೌಂಟ್‌ ರೋಸರಿ ಚರ್ಚ್‌ನಲ್ಲಿ ಚಾಲನೆ ನೀಡಿದರು.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.