Miracle: ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ… ವಿಸ್ಮಯ ಕಣ್ತುಂಬಿಕೊಂಡ ಭಕ್ತರು

ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

Team Udayavani, Nov 27, 2023, 9:21 AM IST

Miracle: ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ… ವಿಸ್ಮಯ ಕಣ್ತುಂಬಿಕೊಂಡ ಭಕ್ತರು

ಕೊಟ್ಟಿಗೆಹಾರ: ಮಲೆನಾಡಿನ ಮಡಿಲಲ್ಲಿ ಅನೇಕ ಧಾರ್ಮಿಕ ವಿಸ್ಮಯಗಳು ನಡೆಯುತ್ತಿರುತ್ತವೆ. ಅವುಗಳ ಸರದಿಯಲ್ಲಿ ಬಗ್ಗಸಗೋಡು-ಬಾನಳ್ಳಿಯ ಅಂಚಿನಲ್ಲಿ ಉಣ್ಣಕ್ಕಿ ಹುತ್ತ ಹಲವು ವರ್ಷಗಳಿಂದ ಅಲುಗಾಡಿ ವಿಸ್ಮಯ ಸೃಷ್ಟಿಸುವ ಮೂಲಕ ಮನೆ ಮಾತಾಗಿದೆ. ಅಂದು ಸಹಸ್ರಾರು ಭಕ್ತರು ಅಲುಗಾಡುವ ಹುತ್ತವನ್ನು ಕಣ್ತುಂಬಿಸಿಕೊಳ್ಳುತ್ತಾರೆ.

ಮೂರು ಶತಮಾನಗಳ ಹಿಂದೆ ನೈಸರ್ಗಿಕವಾಗಿ ಸೃಷ್ಟಿಯಾಗಿರುವ ಮಳೆಗೂ ಕರಗದೇ ನಿಂತಿರುವ ಉಣ್ಣಕ್ಕಿ ಹುತ್ತ ವೈಜ್ಞಾನಿಕ ಲೋಕಕ್ಕೆ ಸವಾಲಾಗಿದೆ.ವಿಸ್ಮಯ ಮೂಡಿಸುವ ಹುತ್ತ ರಾತ್ರಿ ಮಹಾಮಂಗಳಾರತಿ ವೇಳೆ ಕೊಂಚ ಅಲುಗಾಡಿ ಪವಾಡ ಉಂಟು ಮಾಡಿರುವುದರ ಜೊತೆಗೆ ಪ್ರತಿವರ್ಷ ಹುತ್ತ ದೊಡ್ಡದಾಗುತ್ತಿದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಮಣ್ಣಿನಿಂದಲೇ ನಿರ್ಮಾಣವಾದ ಹುತ್ತ 10 ಅಡಿ ಎತ್ತರವಿದ್ದು ಮಣ್ಣಿನಿಂದಲೇ ಆವೃತ್ತವಾಗಿದೆ.ಈ ಭಾಗದಲ್ಲಿ ದನಕರುಗಳಿಗೆ ಮನುಷ್ಯ ರಿಗೆ ಕಾಯಿಲೆ ಬಂದರೆ ಈ ಹುತ್ತದ ಮಣ್ಣು ಕೈಗೆ ಹಚ್ಚುವುದರಿಂದ ಕಾಯಿಲೆ ದೂರವಾಗುತ್ತದೆ ಎಂಬ ನಂಬಿಕೆಯೂ ಭಕ್ತರಲ್ಲಿ ಅಚಲವಾಗಿ ಉಳಿದಿದೆ.

ಬಗ್ಗಸಗೋಡು- ಬಾನಳ್ಳಿಯ ಅಂಚಿನಲ್ಲಿ ನಡೆಯುವ ಈ ವಿಸ್ಮಯದ ಉತ್ಸವಕ್ಕೆ ಬರೀ ಸ್ಥಳೀಯರೇ ಅಲ್ಲದೇ ದೂರದ ಊರುಗಳಿಂದಲೂ ಪ್ರತಿ ವರ್ಷ ಜಾತ್ರೆಗೆ ಸಹಸ್ರಾರು ಜನ ಸೇರಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಈ ವಿಶೇಷ ಪೂಜೆಗೆ ಹಾಲು ಮತ್ತು ಅಕ್ಕಿಯನ್ನು ಸಮರ್ಪಿಸಿ ಭಕ್ತರು ಭಕ್ತಿ ಮೆರೆಯುತ್ತಾರೆ ಎಂದು ಗ್ರಾಮಸ್ಥರಾದ ವಿನಯ್ ಹೇಳುತ್ತಾರೆ.

ದೀಪಾವಳಿ ಕಳೆದ ನಂತರ ಬರುವ ಹುಣ್ಣಿಮೆ ದಿನ ಅಂದರೆ ಇಂದು ಭಾನುವಾರ ಉಣ್ಣಕ್ಕಿ ಜಾತ್ರಾಮಹೋತ್ಸವ ವಿಜೃಂಭಣೆಯಿಂದ ಜರುಗುತ್ತದೆ.ಬೆಳಗ್ಗೆ ವಿಶೇಷ ಪೂಜೆಗಳ ತಯಾರಿ ನಡೆಯುತ್ತದೆ.ಸಂಜೆ ಆರು ಗಂಟೆಯ ನಂತರ ವಿಶೇಷ ಹೂಗಳಿಂದ ಹಾಗೂ ವಿದ್ಯುತ್ ಅಲಂಕಾರದ ಮಂಟಪದ ಒಳಗಡೆ ಈ ಹುತ್ತ ಭಕ್ತರನ್ನು ಅಕರ್ಷಿಸುತ್ತದೆ.

ಕಾಯಿಲೆ ವಾಸಿ: ಜಾತ್ರೆಗೆ ಬಂದ ಭಕ್ತರಿಗೆ ಹಾಲಕ್ಕಿಯನ್ನು ವಿತರಣೆ ಮಾಡಲಾಗುತ್ತದೆ. ಅದನ್ನು ಗ್ರಾಮಸ್ಥರು ಮನೆಗಳಿಗೆ ಹೋಗಿ ಹೊಲ, ಮನೆಯ ಆವರಣದಲ್ಲಿ ಹಾಕುವುದರಿಂದ ಸ್ಥಳ ಶುದ್ಧೀಕರಣ ಆಗುತ್ತದೆಂಬ ನಂಬಿಕೆ ಭಕ್ತರಲ್ಲಿದೆ.

ರಾತ್ರಿ ಮಹಾಮಂಗಳಾರತಿಯ ಸಮಯದಲ್ಲಿ ಅರ್ಚಕರು ಪೂಜೆ ನೆರವೇರಿಸುವಾಗ ಹುತ್ತ ಕ್ಷಣಾರ್ಧದಲ್ಲಿ ಅಲುಗಾಡುವುದನ್ನು ಕಂಡು ಭಕ್ತರು ಪಾವನರಾಗುತ್ತಾರೆ. ಅದರ ನಂತರ ಹುತ್ತದ ಸುತ್ತ ಕರುವೊಂದನ್ನು ಪ್ರದಕ್ಷಿಣೆ ಹಾಕಲಾಗುತ್ತದೆ.ಆಗ ಭಕ್ತರು ಮಂಡಕ್ಕಿ ಎರಚಿ ಹರಕೆ ತೀರಿಸುವ ಪದ್ದತಿಯೂ ರೂಢಿಯಲ್ಲಿದೆ.ಈ ಹುತ್ತದ ಪೂಜೆಯಿಂದ ನರಹುಣ್ಣು,ಕುರ, ಸರ್ಪಸುತ್ತು, ಮುಂತಾದ ಕಾಯಿಲೆಗಳು ಗುಣವಾಗುತ್ತವೆ ಎನ್ನುತ್ತಾರೆ ಗ್ರಾಮಸ್ಥರಾದ ಬಿ.ಎಸ್.ಪ್ರತಾಪ್.

ಇದನ್ನೂ ಓದಿ: Kambala: ನೇಗಿಲು ಹಿರಿಯ ವಿಭಾಗದಲ್ಲಿ ದಿಡುಪೆಯ ಗುಂಡ ಮತ್ತು ಬಿಳಿಯೂರು ದಾಸ ಕೋಣಗಳು ಪ್ರಥಮ

ಟಾಪ್ ನ್ಯೂಸ್

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.