Aamir Khan: ಮಾಲಿವುಡ್ನ “ಜಯ ಜಯ ಜಯ ಜಯ ಹೇ” ರಿಮೇಕ್ ನಲ್ಲಿ ಆಮಿರ್ ನಟನೆ?
Team Udayavani, Nov 28, 2023, 5:03 PM IST
ಕೊಚ್ಚಿ: ʼಲಾಲ್ ಸಿಂಗ್ ಚಡ್ಡಾʼ ಸಿನಿಮಾದ ಬಳಿಕ ಬಾಲಿವುಡ್ ನಟ ಆಮಿರ್ ಖಾನ್ ಅವರು ನಟನೆಗೆ ಬ್ರೇಕ್ ಕೊಟ್ಟಿದ್ದಾರೆ. ಅವರು ನಿರ್ಮಾಣದತ್ತ ಮುಖ ಮಾಡಿದ್ದಾರೆ. ಸದ್ಯ ಅವರ ನಟನೆ ಬಗ್ಗೆ ಮತ್ತೊಂದು ಅಪ್ಡೇಟ್ ವೊಂದು ಹೊರಬಿದ್ದಿದೆ.
2022 ರಲ್ಲಿ ಮಾಲಿವುಡ್ ನಲ್ಲಿ ಬಂದ ಬಾಸಿಲ್ ಜೋಸೆಫ್ – ದರ್ಶನ ರಾಜೇಂದ್ರನ್ ಅಭಿನಯದ ʼʼಜಯ ಜಯ ಜಯ ಜಯ ಹೇ” ಹಿಟ್ ಆಗಿತ್ತು. ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಸಿಡುಕ ಗಂಡನ ಪಾತ್ರದಲ್ಲಿ ಬಾಸಿಲ್ ಜೋಸೆಫ್ ಕಾಣಿಸಿಕೊಂಡಿದ್ದರು. ಕರಾಟೆ ಕಲಿಯುವ ಹೆಂಡತಿಯಾಗಿ ದರ್ಶನ ಕಾಣಿಸಿಕೊಂಡಿದ್ದರು.
ಕಾಮಿಡಿ ಹಾಗೂ ಸಾಮಾಜಿಕ ಸಂದೇಶವನ್ನು ಸಾರುವ ಈ ಸಿನಿಮಾಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಇದೇ ಸಿನಿಮಾದ ಬಾಲಿವುಡ್ ನಲ್ಲಿ ರಿಮೇಕ್ ಆಗಲಿದೆ ಎನ್ನಲಾಗಿದೆ. ಬಾಲಿವುಡ್ ಆಮಿರ್ ಖಾನ್ ಅವರು ಈ ಸಿನಿಮಾವನ್ನು ನೋಡಿ ಬಾಸಿಲ್ ಹಾಗೂ ದರ್ಶನ ಅವರ ಅಭಿನಯವನ್ನು ಮೆಚ್ಚಿಕೊಂಡಿದ್ದರು.
ಬಾಲಿವುಡ್ ಗೆ ʼʼಜಯ ಜಯ ಜಯ ಜಯ ಹೇ” ರಿಮೇಕ್ ಆಗಲಿದ್ದು, ಈ ಸಿನಿಮಾದಲ್ಲಿ ಆಮಿರ್ ಖಾನ್ ಬಾಸಿಲ್ ಅವರ ಸಿಡುಕ ಗಂಡನ ಪಾತ್ರವನ್ನು ಮಾಡಲಿದ್ದಾರೆ ಎನ್ನುವ ಗಾಸಿಪ್ ಸಿನಿವಲಯದಲ್ಲಿ ಹರಿದಾಡಿದೆ.
ಈ ಬಗ್ಗೆ ಮಾತನಾಡುವ ಸಿನಿಮಾದ ನಿರ್ಮಾಪಕರಾದ ಲಕ್ಷ್ಮಿ ವಾರಿಯರ್ ಮತ್ತು ಗಣೇಶ್ ಮೆನನ್ “ಆಮಿರ್ ಅವರ ತಂಡವು ಚಿತ್ರದ ರೀಮೇಕ್ ಹಕ್ಕುಗಳನ್ನು ಪಡೆದುಕೊಳ್ಳುವ ಅಂತಿಮ ಹಂತದಲ್ಲಿದೆ. ಅವರು ಸಿನಿಮಾದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ನಿರ್ಮಾಪಕರಾಗಿರುತ್ತಾರೆ. ಸಿನಿಮಾದಲ್ಲಿ ಯುವ ಪಾತ್ರವರ್ಗವಿರಲಿದೆ” ಎಂದಿದ್ದಾರೆ.
“ಉತ್ತರ ಪ್ರದೇಶದಲ್ಲಿ ಸಿನಿಮಾ ಸಾಗಲಿದೆ. ಇದರ ಕಥಾವಸ್ತುವಿನಲ್ಲಿ ಕೊಂಚ ಬದಲಾವಣೆ ಇರಲಿದೆ” ಎಂದು ಅವರು ಹೇಳಿದ್ದಾರೆ.
ಸದ್ಯ ʼʼಜಯ ಜಯ ಜಯ ಜಯ ಹೇ” ಸಿನಿಮಾ ಡಿಸ್ನಿ+ ಹಾಟ್ ಸ್ಟರ್ ನಲ್ಲಿ ಸ್ಟ್ರೀಮ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.