Mysore: ಭೀತಿ ಹುಟ್ಟಿಸಿದ್ದ ನರಭಕ್ಷಕ ಹುಲಿ ಸೆರೆ
- ಮೈಸೂರಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ವ್ಯಾಘ್ರ
Team Udayavani, Nov 29, 2023, 12:07 AM IST
ಮೈಸೂರು: ಮಹಿಳೆಯೊ ಬ್ಬರ ಸಾವಿಗೆ ಕಾರಣವಾಗಿ, ಇಬ್ಬರನ್ನು ಗಾಯಗೊಳಿಸಿ ಭೀತಿ ಹುಟ್ಟಿಸಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಇತ್ತೀಚೆಗೆ ನಂಜನಗೂಡು ತಾಲೂಕು ಬಳ್ಳೂರು ಹುಂಡಿ ಗ್ರಾಮದಲ್ಲಿ ಈ ವ್ಯಾಘ್ರವು ಮಹಿಳೆಯೊಬ್ಬರನ್ನು ಬಲಿ ಪಡೆದಿತ್ತು. ಇದಾದ ಮೂರು ದಿನಗಳಲ್ಲೇ ಈ ಬೆಳವಣಿಗೆ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ ವ್ಯಾಪ್ತಿಯ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ಬಳಿ ರತ್ನಮ್ಮ ಎಂಬ ಮಹಿಳೆ ಮೇಲೆ ನ. 24ರಂದು ಹುಲಿ ದಾಳಿ ನಡೆಸಿ ಹತ್ಯೆಗೈದಿತ್ತು. ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು 200ಕ್ಕೂ ಹೆಚ್ಚು ಸಿಬಂದಿ, 3 ಸಾಕಾನೆ, 50 ಸಿಸಿ ಕೆಮರಾಗಳು, 1 ಡ್ರೋಣ್, 1 ದೊಡ್ಡ ಬೋನು ಹಾಗೂ 100 ಮಂದಿ ಆದಿವಾಸಿಗಳ ಸಹಾಯದೊಂದಿಗೆ ಹುಲಿ ಸೆರೆ ಕಾರ್ಯಾಚರಣೆಗೆ ಇಳಿದಿತ್ತು. ಮೂರು ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಕೊನೆಗೂ ವ್ಯಾಘ್ರನನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಅರವಳಿಕೆ ನೀಡಿ ಸೆರೆ
ಈ ಹಿಂದೆ ಹಸುವನ್ನು ಕೊಂದಿದ್ದ ಸ್ಥಳದಲ್ಲಿ ಇಲಾಖೆ ದೊಡ್ಡ ಬೋನು ಇರಿಸಿ ಅರವಳಿಕೆ ನೀಡಿ ಹುಲಿಯನ್ನು ಸೆರೆ ಹಿಡಿಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್; ವಿದ್ಯಾರ್ಥಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.